ಏಡ್ಸ್‌ ರೋಗಿಗಳಿಗೆ ವಾರ್ಷಿಕ ಐದು ಲಕ್ಷ ವೆಚ್ಚದಲ್ಲಿ ಉಚಿತ ಔಷಧಿ: ಡಾ.ಕೆ.ಸುಧಾಕರ್‌


Team Udayavani, Dec 1, 2020, 4:10 PM IST

ಏಡ್ಸ್‌ ರೋಗಿಗಳಿಗೆ ವಾರ್ಷಿಕ ಐದು ಲಕ್ಷ ವೆಚ್ಚದಲ್ಲಿ ಉಚಿತ ಔಷಧಿ: ಡಾ.ಕೆ.ಸುಧಾಕರ್‌

ಬೆಂಗಳೂರು: ರಾಜ್ಯದ ಎಲ್ಲಾ ಏಡ್ಸ್‌ ರೋಗಿಗಳಿಗೆ ಪ್ರತಿ ವರ್ಷ ತಲಾ ಐದು ಲಕ್ಷ ರೂ. ವೆಚ್ಚದಲ್ಲಿ ಔಷಧಗಳನ್ನು ಉಚಿತವಾಗಿ ವಿತರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆ ಸಚಿವ ಡಾ.ಕೆ.ಸುಧಾಕರ್‌ ಸೂಚಿಸಿದರು.

ವಿಶ್ವ ಏಡ್ಸ್‌ ದಿನದ ಅಂಗವಾಗಿ ಕರ್ನಾಟಕ ರಾಜ್ಯ ಏಡ್ಸ್‌ ನಿಯಂತ್ರಣ ಸೊಸೈಟಿಯು ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ಬಡತನ ರೇಖೆಯ ಕೆಳಗಿರುವ (ಬಿಪಿಎಲ್‌) ಏಡ್ಸ್‌ ರೋಗಿಗಳಿಗೆ ಉಚಿತ ಔಷಧ ವಿತರಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಐದು ಕೋಟಿ ರೂ.ಹೆಚ್ಚುವರಿ ಅನುದಾನ ಲಭ್ಯವಿದ್ದು, ಜತೆಗೆ ರಾಜ್ಯ ಸರ್ಕಾರದಿಂದ ನೆರವು ನೀಡುವ ಮೂಲಕ ಬಿಪಿಎಲ್‌ ಮತ್ತು ಎಪಿಎಲ್‌ ಒಳಗೊಂಡಂತೆ ಎಲ್ಲಾ ವರ್ಗದ ಏಡ್ಸ್‌ ರೋಗಿಗಳಿಗೆ ವಾರ್ಷಿಕ ತಲಾ ಐದು ಲಕ್ಷ ರೂ. ವೆಚ್ಚ ಮಾಡುವ ಮೂಲಕ ಉಚಿತ ಔಷಧಿಯನ್ನು ವಿತರಿಸಬೇಕು. ಈ ನಿಟ್ಟಿನಲ್ಲಿ ಏಡ್ಸ್‌ ನಿಯಂತ್ರಣ ಸೊಸೈಟಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ:ಕರ್ನಾಟಕ ಬಂದ್ ಗೆ ಕರೆ ನೀಡಿದವರ ಆಸ್ತಿ ಜಪ್ತಿ ಮಾಡಿ! ಡಿ.5ರ ಬಂದ್ ವಿರೋಧಿಸಿ ಪ್ರತಿಭಟನೆ

ಏಡ್ಸ್‌ ರೋಗಿಗಳ ನಿರ್ವಹಣೆ ನಿಟ್ಟಿನಲ್ಲಿ ಸಾಕಷ್ಟು ಸಂಶೋಧನೆಗಳು ನಡೆದಿವೆ. ರೋಗವು ಸಂಪೂರ್ಣ ಗುಣಮುಖರಾಗದಿದ್ದರೂ, ರೋಗಿಯು ದೀರ್ಘ‌ಕಾಲ ಸಹಜ ಜೀವನ ನಡೆದುವಂತೆ ಔಷಧ ಮತ್ತು ಚಿಕಿತ್ಸಾ ವಿಧಾನಗಳನ್ನು ಪತ್ತೆ ಮಾಡಲಾಗಿದೆ. ಸುಮಾರು 40 ವರ್ಷಗಳಿಂದ ಔಷಧ ಸೇವಿಸಿ ಬದುಕುತ್ತಿರುವ ರೋಗಿಗಳು ಇದ್ದಾರೆ. ಔಷಧ ಸೇವನೆ ಮಟ್ಟ ನಿತ್ಯ ಒಂಬತ್ತು ಮಾತ್ರೆಗಳಿಂದ ಒಂದು ಮಾತ್ರೆ ಸೇವನೆ ಹಂತಕ್ಕೆ ತಲುಪಿದೆ. ಸದ್ಯ ರಾಜ್ಯದಲ್ಲಿ 1.68 ಲಕ್ಷ ಏಡ್ಸ್‌ ರೋಗಿಗಳು ಎಆರ್‌ಟಿ ಸೆಂಟರ್‌ಗಳಲ್ಲಿ ನೋಂದಣಿಯಾಗುವ ಮೂಲಕ ಚಿಕಿತ್ಸೆ ಮತ್ತು ಔಷಧ ಪಡೆದುಕೊಳ್ಳುತ್ತಿದ್ದಾರೆ. ಇನ್ನು ಒಂದು ಲಕ್ಷ ರೋಗಿಗಳು ಚಿಕಿತ್ಸೆಗೆ ಹಿಂದೇಟು ಹಾಕುತ್ತಿದ್ದಾರೆ. ಇಂತಹವರನ್ನು ಶೀಘ್ರ ಪತ್ತೆ ಹಚ್ಚಿ ಚಿಕಿತ್ಸೆಗೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಏಡ್ಸ್‌ ರೋಗಿಗಳಿಗೆ ಮೊದಲೇ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಇಂತಹವರಿಗೆ ಕೊರೊನಾ ಬಂದರೆ ಉಳಿಸಿಕೊಳ್ಳುವುದು ಕಷ್ಟ ಎಂಬ ಅಭಿಪ್ರಾಯವಿತ್ತು. ಈವರೆಗೂ ರಾಜ್ಯದಲ್ಲಿ 280 ಏಡ್ಸ್‌ ರೋಗಿಗಳಿಗೆ ಕೊರೊನಾ ತಗುಲಿದ್ದು, ಈ ಪೈಕಿ ಐದು ಮಂದಿ ಮಾತ್ರ ಮೃತಪಟ್ಟಿದ್ದಾರೆ. ಕೊರೊನಾ ಸಂದರ್ಭದಲ್ಲಿ ಔಷಧ ಸಮಸ್ಯೆಯಾಗಬಾರದು ಎಂದು ಮೂರು ತಿಂಗಳ ಔಷಧವನ್ನು ರೋಗಿಗಳ ಮನೆಗೆ ಕಳುಹಿಸಿಕೊಡಲಾಗಿತ್ತು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಶ್ರಮ ಶ್ಲಾಘನೀಯ ಎಂದರು.

ಇದನ್ನೂ ಓದಿ:ತೆಲಂಗಾಣ ಕೋಟೆಗೆ ಬಿಜೆಪಿ ಲಗ್ಗೆ ಇಟ್ಟಿದ್ದು ಹೇಗೆ? ದಿಢೀರ್‌ ಬೆಳವಣಿಗೆಗೆ ಕಾರಣವೇನು…

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಡಾ.ಉದಯ್‌ ಬಿ.ಗರುಡಾಚಾರ್‌ ವಹಿಸಿಕೊಂಡಿದ್ದರು. ಆರೋಗ್ಯ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಜಾವೇದ್‌ ಅಖ್ತರ್‌, ಆಯುಕ್ತ ಪಂಕಜ್‌ ಕುಮಾರ್‌ ಪಾಂಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ವೇಳೆ ಏಡ್ಸ್‌ ನಿಯಂತ್ರಣದಲ್ಲಿ ಉತ್ತಮ ಕಾರ್ಯಾಚರಣೆ ನಡೆಸಿದ ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆ ಮತ್ತು ಏಡ್ಸ್‌ ನಿಯಂತ್ರಣ ಸೊಸೈಟಿ ಸಿಬ್ಬಂದಿಗೆ ಸನ್ಮಾನಿಸಿ ಬಹುಮಾನ ವಿತರಿಸಲಾಯಿತು.

2030 ಏಡ್ಸ್‌ ನಿರ್ಮೂಲನೆ ಗುರಿ
ಕರ್ನಾಟಕದಲ್ಲಿ 2030 ವೇಳೆ ಏಡ್ಸ್‌ ನಿರ್ಮೂಲನೆ ಮಾಡಬೇಕು ಎಂಬ ಸಂದೇಶವನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಈ ಹಾದಿಯಲ್ಲಿ ಸರ್ಕಾರದ ಜತೆಗೆ ಸಾರ್ವಜನಿಕರು, ಸಂಘ ಸಂಸ್ಥೆಗಳು ಕೈಜೋಡಿಸಬೇಕು. ಜಾಗೃತಿ ಮೂಡಿಸು, ಸ್ವಯಂ ಮುಂಜಾಗ್ರತೆ ಕೈಗೊಳ್ಳುವ ಹಾಗೂ ಏಡ್ಸ್‌ ರೋಗಿಗಳನ್ನು ದೂಷಿಸದೆ ಸಾಮಾನ್ಯರಂತೆ ನಡೆಸಿಕೊಳ್ಳುವ ಹಾದಿಯಲ್ಲಿ ಸಾಗಬೇಕು ಎಂದು ಸಚಿವ ಡಾ.ಕೆ.ಸುಧಾಕರ್‌ ಮನವಿ ಮಾಡಿದರು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.