2ನೇ ಹಂತದ ಬೆಂಗಳೂರುರಕ್ಷಿಸಿ ಅಭಿಯಾನಕ್ಕೆ ಚಾಲನೆ
Team Udayavani, Mar 27, 2018, 12:11 PM IST
ಬೆಂಗಳೂರು: ನಗರದ ಜನತೆ ನೆಮ್ಮದಿಯಿಂದ ಬದುಕಲಾಗದಂತಹ ವಾತಾವರಣ ನಿರ್ಮಿಸಿದ್ದೇ ಕಾಂಗ್ರೆಸ್ ಸಾಧನೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪಿಸಿದರು.
ಬಿಜೆಪಿಯಿಂದ ಎರಡನೇ ಹಂತದ “ಬೆಂಗಳೂರು ರಕ್ಷಿಸಿ’ ಅಭಿಯಾನಕ್ಕೆ ಸೋಮವಾರ ಶಾಂತಿನಗರದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿನ ಜನತೆಗೆ ರಕ್ಷಣೆ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಇದರಿಂದಾಗಿ ಅಪರಾಧಗಳು ಎಗ್ಗಿಲ್ಲದೇ ನಡೆದಿವೆ ಎಂದು ದೂರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿದ್ರೆಯಲ್ಲಿದ್ದಾರೆ. ನಗರದ ನಾಗರಿಕರ ರಕ್ಷಣೆಗೆ ಯಾರೊಬ್ಬರೂ ಗಮನ ನೀಡುತ್ತಿಲ್ಲ. ಸಿಲಿಕಾನ್ ಸಿಟಿಯಾಗಿದ್ದ ಬೆಂಗಳೂರು ಅಪರಾಧಗಳ ನಗರವಾಗಿ ಮಾರ್ಪಟ್ಟಿದೆ. ಕೊಲೆ, ಸುಲಿಗೆ ಅವ್ಯಾಹತವಾಗಿ ನಡೆದಿದ್ದು, ಗೂಂಡಾಗಿರಿ ದೌರ್ಜನ್ಯಗಳು ಮಿತಿ ಮೀರಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸಂಸದ ಪಿ.ಸಿ.ಮೋಹನ್, ಶಾಸಕ ಎಸ್. ಮುನಿರಾಜು, ನಗರ ಬಿಜೆಪಿ ಅಧ್ಯಕ್ಷ ಪಿ.ಎನ್.ಸದಾಶಿವ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ