ಒಳಚರಂಡಿ ಕಾಮಗಾರಿಗೆ ಚಾಲನೆ
Team Udayavani, Jul 1, 2018, 3:47 PM IST
ಕೆಂಗೇರಿ: ಉಪನಗರದ ನ್ಯಾಷನಲ್ ಪಬ್ಲಿಕ್ ಶಾಲೆ ಸಮೀಪದ ರೈಲ್ವೆ ಸಮಾನಾಂತರ ರಸ್ತೆ ಬಳಿ 450 ಮೀಟರ್ ಉದ್ದದ ಹಾಗೂ 19 ಲಕ್ಷ ರೂ. ಅಂದಾಜು ವೆಚ್ಚದ ಒಳ ಚರಂಡಿ ಕಾಮಗಾರಿಗೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಶನಿವಾರ ಚಾಲನೆ ನೀಡಿದರು.
ಈ ವಾರ್ಡ್ನ ಎಲ್ಲ ಭಾಗಗಳಲ್ಲಿ ರಸ್ತೆ ಡಾಂಬರಿಕರಣ, ಮೋರಿ, ಒಳ ಚರಂಡಿ ಕಾಮಗಾರಿ, ಬೀದಿ ದೀಪಗಳ ಅಳವಡಿಕೆ, ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಸೇರಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಮೂಲಕ ವಾರ್ಡ್ ಅನ್ನು ಶೇ.80ರಷ್ಟು ಅಬಿವೃದ್ಧಿ ಪಡಿಸಲಾಗಿದೆ. ಬಾಕಿ ಕಾಮಗಾರಿಗಳನ್ನು ಹಂತ ಹಂತವಾಗಿ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.
ಈ ವೇಳೆ ಪಾಲಿಕೆ ಸದಸ್ಯ ವಿ.ವಿ.ಸತ್ಯನಾರಾಯಣ್, ಜಲ ಮಂಡಳಿ ಕಿರಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಚೆನ್ನಾಪ್ಪಾಜಿ, ಜಿ.ವಿ.ಸುರೇಶ್, ಟಿ.ಪ್ರಭಾಕರ್ ಮತ್ತಿತರರು ಇದ್ದರು