ಅಪ್ಪಾಜಿ ಸಂಚಾರಿ ಕ್ಯಾಂಟೀನ್ಗೆ ಚಾಲನೆ
Team Udayavani, May 21, 2019, 12:04 PM IST
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ 87ನೇ ಹುಟ್ಟು ಹಬ್ಬದ ಪ್ರಯುಕ್ತ ‘ದೇವೇಗೌಡ ಅಪ್ಪಾಜಿ ಸಂಚಾರಿ ಕ್ಯಾಂಟೀನ್’ಗೆ ಸ್ವತಃ ಎಚ್.ಡಿ.ದೇವೇಗೌಡರು ಚಾಲನೆ ನೀಡಿದರು. ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದ ಮಾಜಿ ಪ್ರಧಾನಿ, ಬಡ ವರ್ಗದ ಜನರಿಗೆ ಅತ್ಯಂತ ಶುಚಿ ಮತ್ತು ರುಚಿಕರವಾದ ಹಾರವನ್ನು ಕಡಿಮೆ ದರದಲ್ಲಿ ನೀಡುವುದು ಈ ಸಂಚಾರಿ ಕ್ಯಾಂಟೀನ್ ಆರಂಭದ ಹಿಂದಿನ ಉದ್ದೇಶವಾಗಿದೆ.
ಬೆಂಗಳೂರು ನಗರದ ವ್ಯಾಪ್ತಿಯ ವಿವಿಧ ಭಾಗದಲ್ಲಿ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರವನ್ನು ಈ ಸಂಚಾರಿ ಕ್ಯಾಂಟೀನ್ ಒದಗಿಸಲಿದೆ. ಇದು ಟಿ.ಎ.ಶರವಣ ಅವರು ಸಂಕಲ್ಪವಾಗಿದೆ. ಅವರ ಕಾರ್ಯಕ್ಕೆ ನಾನು ಶುಭ ಹಾರೈಸುತ್ತೇನೆ ಎಂದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ