ಚಾಲಕನ ಮನೆಗೆ ನುಗ್ಗಿ ಪ್ರಾಣ ಬೆದರಿಕೆ


Team Udayavani, Sep 23, 2019, 3:09 AM IST

chalakana

ಬೆಂಗಳೂರು: ತಪಾಸಣೆ ನೆಪದಲ್ಲಿ ಗೂಡ್ಸ್‌ ವಾಹನ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ ಹಲಸೂರು ಗೇಟ್‌ ಸಂಚಾರ ಠಾಣೆ ಹೆಡ್‌ ಕಾನ್‌ಸ್ಟೆಬಲ್‌ ಮಹಾಸ್ವಾಮಿ ವೀಡಿಯೋ ವೈರಲ್‌ ಆಗಿತ್ತು. ಘಟನೆ ಬೆನ್ನಿಗೇ ಶನಿವಾರ ರಾತ್ರಿ ಜೆ.ಪಿ.ನಗರದ ಜರಗನಹಳ್ಳಿಯಲ್ಲಿರುವ ಚಾಲಕ ಸುನೀಲ್‌ ಕುಮಾರ್‌ ಮನೆಗೆ ನುಗ್ಗಿದ ನಾಲ್ಕೈದು ಮಂದಿ ಅಪರಿಚಿತರು, ಚಾಲಕನ ತಾಯಿಗೆ ಪ್ರಾಣ ಬೆದರಿಕೆ ಹಾಕಿದ್ದು, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಈ ಸಂಬಂಧ ಚಾಲಕ ಸುನೀಲ್‌ ಕುಮಾರ್‌ ತಾಯಿ ರತ್ನಮ್ಮ, ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ದೂರು ಸ್ವೀಕರಿಸಿರುವ ಪೊಲೀಸರು ಗಂಭೀರ ಸ್ವರೂಪವಲ್ಲದ ಪ್ರಕರಣ(ಎನ್‌ಸಿಆರ್‌) ದಾಖಲಿಸಿಕೊಂಡಿದ್ದಾರೆ. ಗೂಡ್ಸ್‌ ವಾಹನ ಚಾಲಕರಾಗಿರುವ ಸುನೀಲ್‌ ಕುಮಾರ್‌, ಜರಗನಹಳ್ಳಿಯಲ್ಲಿ ತಾಯಿ ರತ್ನಮ್ಮ ಜತೆ ವಾಸವಾಗಿದ್ದಾರೆ. ಶುಕ್ರವಾರ ಹಲಸೂರು ಗೇಟ್‌ ಸಂಚಾರ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಮಹಾಸ್ವಾಮಿ, ಚಲಿಸುವ ವಾಹನವನ್ನೇರಿ ಚಾಲಕ ಸುನೀಲ್‌ ಕುಮಾರ್‌ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಕೂಡ ನಡೆಸಿದ್ದರು. ಈ ವಿಚಾರವನ್ನು ತಾಯಿ ರತ್ನಮ್ಮಗೆ ಕರೆ ಮಾಡಿ ಹೇಳಿದ್ದ ಸುನೀಲ್‌ ಕುಮಾರ್‌ ಇದುವರೆಗೂ ಮನೆಗೆ ಬಂದಿಲ್ಲ.

ಈ ನಡುವೆ ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಮನೆಗೆ ನುಗ್ಗಿದ ನಾಲ್ಕೈದು ಮಂದಿ, “ನಿಮ್ಮ ಮಗ ಎಲ್ಲಿದ್ದಾನೆ? ಎಂದು ಪ್ರಶ್ನಿಸಿ ಸುನೀಲ್‌ ತಾಯಿ ರತ್ನಮ್ಮ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಒಂದು ವೇಳೆ ನಿಮ್ಮ ಮಗ ಕೈಗೆ ಸಿಕ್ಕರೆ ಕೈ-ಕಾಲು ಮುರಿದು ಹಾಕುತ್ತೇವೆ. ನಿನ್ನನ್ನು ಮತ್ತು ನಿನ್ನ ಮಗನನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಬೆದರಿಕೆ ಹಾಕಿದ್ದಾರೆ ಎಂದು ರತ್ನಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಆದರೆ, ಈ ಕೃತ್ಯದ ಹಿಂದೆ ಹಲ್ಲೆ ನಡೆಸಿದ ಹೆಡ್‌ ಕಾನ್‌ಸ್ಟೆಬಲ್‌ ಮಹಾಸ್ವಾಮಿ ಕೈವಾಡ ಇದೆಯೇ? ಇಲ್ಲವೇ ಎಂಬ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ. ಅಪರಿಚಿತ ವ್ಯಕ್ತಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪುಟ್ಟೇನಹಳ್ಳಿ ಪೊಲೀಸರು ಹೇಳಿದರು.

ಈ ಕುರಿತು “ಉದಯವಾಣಿ’ ಜತೆ ಮಾತನಾಡಿದ ಚಾಲಕ ಸುನೀಲ್‌ ಕುಮಾರ್‌ ತಾಯಿ ರತ್ನಮ್ಮ, “ತಾಯಿ, ಮಗ ಇಬ್ಬರೇ ವಾಸವಾಗಿದ್ದೇವೆ. ಶುಕ್ರವಾರ ಘಟನೆ ಬಳಿಕ ಮಗ ಕರೆ ಮಾಡಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ. ಅಂದಿನಿಂದ ಆತ ಮನೆಗೆ ಬಂದಿಲ್ಲ. ಶನಿವಾರ ಯಾರೋ ನಾಲ್ಕೈದು ಮಂದಿ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ. ಅವರು ಪೊಲೀಸರೋ ಅಥವಾ ರೌಡಿಗಳೋ ಗೊತ್ತಿಲ್ಲ. ದಯಮಾಡಿ ತಮ್ಮ ಮಗನನ್ನು ಹುಡುಕಿಕೊಡಿ’ ಎಂದು ಅಳಲು ತೊಡಿಕೊಂಡರು.

ಇಲಾಖಾ ತನಿಖೆಗೆ ಆದೇಶ: ಪುರಭವನ ಮುಂಭಾಗ ಚಲಿಸುತ್ತಿದ್ದ ಗೂಡ್ಸ್‌ ವಾಹನದಲ್ಲೇ ಚಾಲಕನಿಗೆ ಹೆಡ್‌ ಕಾನ್‌ಸ್ಟೆಬಲ್‌ ಮಹಾಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಕೂಡ ನಡೆಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ವಿಡಿಯೋ ಪ್ರಕಾರ ಸಾರ್ವಜನಿಕರ ಜತೆ ಸಿಬ್ಬಂದಿ ನಡೆದುಕೊಂಡಿರುವ ರೀತಿ ತೀರ ಕೆಟ್ಟ ರೀತಿಯದ್ದಾಗಿದೆ. ಹೀಗಾಗಿ ಆತನ ವಿರುದ್ಧ ಎಸಿಪಿ ದರ್ಜೆಯ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ಇಲಾಖಾ ತನಿಖೆಗೆ ಆದೇಶ ನೀಡಲಾಗಿದೆ.

ಮಹಾಸ್ವಾಮಿಯ ಮಾನಸಿಕ ಸ್ಥಿರತೆ ಪರೀಕ್ಷೆ: ಜತೆಗೆ ಥಣಿಸಂದ್ರದಲ್ಲಿರುವ ಸಂಚಾರ ತರಬೇತಿ ಸಂಸ್ಥೆಯಲ್ಲಿ (ಟ್ರಾಫಿಕ್‌ ಟ್ರೈನಿಂಗ್‌ ಇನ್‌ಸ್ಟಿಟ್ಯೂಟ್‌) ಒತ್ತಡ ನಿರ್ವಹಣೆ ಹಾಗೂ ಮೃಧುಕೌಶಲ್ಯ (ತಾಳ್ಮೆಯಿಂದ ವ್ಯವಹರಿಸುವ) ಕುರಿತ ಹತ್ತು ದಿನಗಳ ಕಡ್ಡಾಯ ತರಬೇತಿ ಪಡೆದು ಪ್ರಮಾಣ ಪತ್ರ ಸಲ್ಲಿಸುವಂತೆ ಸೂಚಿಸಲಾಗಿದೆ. ನಂತರ ಸಿಬ್ಬಂದಿಯ ಮಾನಸಿಕ ಸ್ಥಿರತೆ ಬಗ್ಗೆ ಪರೀಕ್ಷೆ ನಡೆಸಲಾಗುವುದು. ಈ ವೇಳೆ ಆತ ಅನುತ್ತೀರ್ಣಗೊಂಡರೆ ಮುಂದಿನ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಸಂಚಾರ ವಿಭಾಗದ ಹಿರಿಯ ಅಧಿಕಾರಿ ತಿಳಿಸಿದರು.

ಸಿಬ್ಬಂದಿ ಕೆಟ್ಟ ವರ್ತನೆ ಸಾಬೀತು: ಸಿಬ್ಬಂದಿ ಹಾಗೂ ಚಾಲಕನ ನಡುವಿನ ಹೊಡೆದಾಟದ ವಿಡಿಯೋ ವೈರಲ್‌ ಆಗುತ್ತಿದ್ದಂತೆ, ಸಿಬ್ಬಂದಿ ವಿರುದ್ಧ ವಿಚಾರಣೆ ನಡೆಸಿ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಈ ವರದಿ ಪ್ರಕಾರ ಹೆಡ್‌ ಕಾನ್‌ಸ್ಟೆಬಲ್‌ ಮಹಾಸ್ವಾಮಿ ಚಾಲಕನ ಜತೆ ನಡೆದುಕೊಂಡ ರೀತಿ ತಪ್ಪು ಎಂಬುದು ಸಾಬೀತಾಗಿದೆ. ಹೀಗಾಗಿ ಆತನನ್ನು ಪೊಲೀಸ್‌ ಠಾಣೆ ಕರ್ತವ್ಯದಿಂದ ತೆಗೆದು (ಎಕ್ಸಿಕ್ಯೂಟಿವ್‌ ಹುದ್ದೆ) ಹಾಕಲಾಗಿದೆ ಎಂದು ಅಧಿಕಾರಿ ವಿವರಿಸಿದರು.

ಚಾಲಕನ ವಿರುದ್ಧವೇ ಎಫ್ಐಆರ್‌ – ಸಾರ್ವಜನಿಕರ ಆಕ್ರೋಶ: ಹೆಡ್‌ ಕಾನ್‌ಸ್ಟೆಬಲ್‌ ಮಹಾಸ್ವಾಮಿ ಗೂಡ್ಸ್‌ ವಾಹನ ಚಾಲಕನ ಮೇಲಿನ ಹಲ್ಲೆ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಸಾರ್ವಜನಿಕರು ಸಿಬ್ಬಂದಿಯನ್ನು ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದರು. ಈ ನಡುವೆಯೂ ಸಿಬ್ಬಂದಿ ಮಹಾಸ್ವಾಮಿ ನೀಡಿದ ದೂರಿನ ಮೇರೆಗೆ ಎಸ್‌.ಜೆ.ಪಾರ್ಕ್‌ ಪೊಲೀಸರು, ಚಾಲಕನ ವಿರುದ್ಧವೇ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದರಿಂದ ಸಾಮಾಜಿಕ ಜಾಲತಾಣ ಬಳಕೆದಾರರು, ನಗರ ಪೊಲೀಸರ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ ಸಿಬ್ಬಂದಿಗೆ ಯಾವುದೇ ಶಿಕ್ಷೆಯಾಗಿಲ್ಲ. ಸೂಕ್ತ ದಾಖಲೆಗಳನ್ನು ತೋರಿಸಿದರೂ ಹಲ್ಲೆಗೊಳಗಾದ ಅಮಾಯಕ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಾಲೆಂಜ್‌ ಮಾಡಿದ ಚಾಲಕ: ಈ ನಡುವೆ ಮೈಸೂರು ಮೂಲದ ಕ್ಯಾಬ್‌ ಚಾಲಕನೊಬ್ಬ ಸೆಲ್ಫಿ ವಿಡಿಯೋ ಮಾಡಿ, ನಗರ ಸಂಚಾರ ಪೊಲೀಸರಿಗೆ ಸವಾಲು ಹಾಕಿದ್ದಾರೆ. “ನಮ್ಮ ಚಾಲಕರ ಮೇಲೆ ನೀನು ಕೈ ಮಾಡಿದ್ದಿಯ. ನನ್ನ ಬಳಿ ಯಾವುದೇ ದಾಖಲೆಗಳಿಲ್ಲ. ನಾಲ್ಕು ವರ್ಷದ ಹಿಂದೆಯೇ ಎಲ್ಲ ದಾಖಲೆಗಳ ಅವಧಿ ಮುಗಿದಿವೆ. ನಾನು ಇದೇ ಅ.2ರಂದು ಬೆಂಗಳೂರಿಗೆ ಬರುತ್ತಿದ್ದೇನೆ. ತಾಕತ್ತಿದ್ರೆ ನನ್ನ ಕಾರು ತಡೆಯಿರಿ,’ ಎಂದು ತನ್ನ ಕಾರಿನ ನಂಬರ್‌ ಸಮೇತ ಸೆಲ್ಫಿ ವಿಡಿಯೋ ಮಾಡಿ ಫೇಸ್‌ಬುಕ್‌ ಮೂಲಕ ಹರಿ ಬಿಟ್ಟಿದ್ದಾರೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.