ಬರ ಪರಿಶೀಲನೆಗೆ ಹೊರಟ ಕಾಗೋಡು
Team Udayavani, Apr 2, 2017, 11:39 AM IST
ಬೆಂಗಳೂರು: ಮುಖ್ಯಮಂತ್ರಿ ಸೇರಿದಂತೆ ಸಂಪುಟ ದರ್ಜೆಯ ಎಲ್ಲಾ ಸಚಿವರು ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪ ಚುನಾವಣೆಯ ಪ್ರಚಾರದಲ್ಲಿ ತಲ್ಲೀನರಾಗಿದ್ದಾರೆ.
ಆದರೆ, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮಾತ್ರ ಬರ ಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಬರ ಕಾಮಗಾರಿ ಪರಿಶೀಲನೆಗೆ ನಿರ್ಧರಿಸಿದ್ದಾರೆ.
ಏಪ್ರಿಲ್ 3ರಿಂದ 5 ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬರ ಕಾಮಗಾರಿಯ ಪರಿಶೀಲನೆ ನಡೆಸಲು ಕಾಗೋಡು ತಿಮ್ಮಪ್ಪ ಪ್ರವಾಸ ಕೈಗೊಳ್ಳಲಿದ್ದಾರೆ.