ಮಾದಕ ವಸ್ತು ಮಾರಾಟ: ಆರೋಪಿ ಬಂಧನ
Team Udayavani, Mar 27, 2023, 10:45 AM IST
ಬೆಂಗಳೂರು: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿನಲ್ಲಿ ಮಾದಕವಸ್ತು ಸಾಗಿಸುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಬೈಯಪ್ಪನಹಳ್ಳಿ ರೈಲ್ವೆ ಠಾಣೆ ಪೊಲೀಸರು ಹಾಗೂ ರೈಲ್ವೆ ಭದ್ರತಾ ಪಡೆ ಸಿಬ್ಬಂದಿ ಭಾನುವಾರ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದೆ.
ಕೇರಳ ಮೂಲದ ಮೊಹಮ್ಮದ್ ಅಕ್ಸರ್ ಉಮರ್(26) ಬಂಧಿತ. ಆರೋಪಿಯಿಂದ 23 ಲಕ್ಷ ರೂ. ಮೌಲ್ಯದ 23 ಕೆ.ಜಿ.ಗಾಂಜಾ ಜಪ್ತಿ ಮಾಡಲಾಗಿದೆ.
ಭಾನುವಾರ ಪ್ರಶಾಂತಿ ಎಕ್ಸ್ಪ್ರೆಸ್ ರೈಲಿನಲ್ಲಿ ಕೇರಳ ಮೂಲದ ಡ್ರಗ್ಸ್ ಪೆಡ್ಲರ್ ನಗರಕ್ಕೆ ಮಾದಕವಸ್ತು ಸಾಗಿಸುವ ಬಗ್ಗೆ ದೊರೆತ ಖಚಿತ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಚನ್ನಸಂದ್ರ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ ಒಂದರಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಮಾಲು ಸಮೇತ ಬಂಧಿಸಲಾಗಿದೆ ಎಂದು ರೈಲ್ವೆ ಪೊಲೀಸರು ಹೇಳಿದರು.
ಆರೋಪಿ ಲಗೇಜ್ ಬ್ಯಾಗ್ನಲ್ಲಿ ಗಾಂಜಾವನ್ನು ಬಚ್ಚಿಟ್ಟುಕೊಂಡು ಪ್ರಶಾಂತಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಗಳೂರಿಗೆ ಸಾಗಿಸಿದ್ದಾನೆ. ಈ ಮಾದಕವಸ್ತುವನ್ನು ನಗರದಲ್ಲಿ ಯಾರಿಗೆ ತಲುಪಿಸಲು ತಂದಿದ್ದ, ಕೇರಳದಲ್ಲಿ ಯಾರಿಂದ ಅದನ್ನು ಖರೀದಿಸಿದ್ದ ಎಂಬಬಗ್ಗೆ ತನಿಖೆ ನಡೆಯಬೇಕಿದೆ.
ಈ ಸಂಬಂಧ ಬೈಯಪ್ಪನಹಳ್ಳಿ ರೈಲ್ವೆ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ರೈಲ್ವೆ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ