ಸ್ವಿಗ್ಗಿ ಡೆಲಿವರಿ ಹೆಸರಿನಲ್ಲಿ ಗಾಂಜಾ ಪೂರೈಕೆ: ಸಿನಿಮೀಯ ರೀತಿಯಲ್ಲಿ ಏಳು ಮಂದಿಯ ಬಂಧನ
Team Udayavani, Oct 3, 2021, 9:23 AM IST
ಬೆಂಗಳೂರು: ಸ್ವಿಗ್ಗಿ ಫುಡ್ ಡೆಲಿವರಿ ಮತ್ತು ಕೊರಿಯರ್ ಮೂಲಕ ಉನ್ನತ ಮಟ್ಟದ ಗಾಂಜಾವನ್ನು ಮನೆ ಬಾಗಿಲಿಗೆ ಪೂರೈಸುತ್ತಿದ್ದ ಸ್ವಿಗ್ಗಿ ಡೆಲಿವರಿ ಬಾಯ್ ಸೇರಿ ಏಳು ಮಂದಿಯನ್ನು ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಹಿಂಬಾಲಿಸಿ ಮಾದಕ ವಸ್ತು ನಿಯಂತ್ರಣ ಘಟಕ (ಎನ್ಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಕಿಂಗ್ಪಿನ್ ಸೇರಿ ಆರು ಮಂದಿ ಮತ್ತು ಹೈದರಾಬಾದ್ನ ಒಬ್ಬ ಪೂರೈಕೆದಾರ ಸೇರಿ 7 ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳಿಂದ 140 ಕೆ.ಜಿ. ಉನ್ನತ ಮಟ್ಟದ ಗಾಂಜಾ, 5.20 ಲಕ್ಷ ರೂ. ಮೌಲ್ಯದ ಪಾಕೆಟ್ ಮೆಟಿರಿಯಲ್, ಎರಡು ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಎನ್ಸಿಬಿ ತಿಳಿಸಿದೆ.
ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಬೆಂಗಳೂರಿನ ಎನ್ಸಿಬಿ ವಲಯ ನಿರ್ದೇಶಕ ಅಮಿತ್ ಗುವಾಹಟೆ ನೇತೃತ್ವದ ಅಧಿಕಾರಿಗಳ ತಂಡ, ಸೆ.30ರಂದು ಬೆಂಗಳೂರಿನಲ್ಲಿ ಕೊರಿಯರ್ ಮೂಲಕ ಬಂದ ಸುಮಾರು ಎಂಟು ಬಾಕ್ಸ್ಗಳನ್ನು ಮಾರುತಿ ಕಾರಿಗೆ ನೇರವಾಗಿ ತುಂಬಲಾಗುತ್ತಿತ್ತು. ಈ ವೇಳೆ ದಾಳಿ ನಡೆಸಿ 137 ಕೆ.ಜಿ. ಗಾಂಜಾ ವಶಕ್ಕೆ ಪಡೆದು ಪ್ರಕರಣ ಕಿಂಗ್ಪಿನ್ ಸೇರಿ ಇಬ್ಬರನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಶಾರುಖ್ ಖಾನ್ ಪುತ್ರನ ಮಾದಕ ನಂಟು: ಎನ್ ಸಿಬಿ ಬಲೆಗೆ ಬಿದ್ದ ಆರ್ಯನ್ ಖಾನ್
ಬಳಿಕ ಅವರ ಮನೆಗಳ ಮೇಲೆ ದಾಳಿ ನಡೆಸಿ 4.81 ಲಕ್ಷ ರೂ. ನಗದು ಮತ್ತು ಡ್ರಗ್ಸ್ ಪ್ಯಾಕ್ ಮಾಡಲು ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರ ಮಾಹಿತಿ ಮೇರೆಗೆ ಸ್ವಿಗ್ಗಿ ಡೆಲಿವರಿ ಬಾಯ್ ವೊಬ್ಬನ ಬಂಧಿಸಲು ಹೋದಾಗ ಆತ ಸ್ವಿಗಿ ಬ್ಯಾಗ್ನಲ್ಲಿ ಡ್ರಗ್ಸ್ ತುಂಬಿಕೊಂಡು ಮಾರಾಟಕ್ಕೆ ಹೊರಟ್ಟಿದ್ದು ಆತನನ್ನು ಬಂಧಿಸಲಾಗಿದೆ. ಆತನ ಮನೆಯಲ್ಲಿ ಮೂರು ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಎನ್ಸಿಬಿ ತಿಳಿಸಿದೆ.
ಕೋವಿಡ್ ಸಂದರ್ಭದಲ್ಲೂ ಪೂರೈಕೆ: ಪ್ರಕರಣದ ಕಿಂಗ್ಪಿನ್ ಬೆಂಗಳೂರಿನಲ್ಲಿ ತನ್ನದೇ ಆದ ಬೃಹತ್ ಜಾಲ ಹೊಂದಿದ್ದು, ವಿಚಾರಣೆ ವೇಳೆ ಆರೋಪಿಗಳು ಕೊರೊನಾ ಮೊದಲು ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಗ್ರಾಹಕರ ಬೇಡಿಕೆಗೆ ತಕ್ಕಂತೆ ಮನೆ ಬಾಗಿಲಿಗೆ ಸ್ವಿಗ್ಗಿ ಡೆಲಿವರಿ ಹೆಸರಿನಲ್ಲಿ ಪೂರೈಕೆ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ ಎಂದು ಎನ್ಸಿಬಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?