ಡ್ರಗ್ಸ್ ವಿರೋಧಿ ವಾಕಥಾನ್ಗೆ ಚಾಲನೆ
Team Udayavani, Dec 16, 2018, 12:10 PM IST
ಬೆಂಗಳೂರು: ಮಾದಕ ವಸ್ತು ಮುಕ್ತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಜಿ-ಸಮೂಹ ಸಂಸ್ಥೆ ನಗರ ಮಲ್ಲೇಶ್ವರದ ಆಟದ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ “ಡ್ರಗ್ಸ್ ವಿರೋಧಿ ವಾಕಥಾನ್’ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಚಾಲನೆ ನೀಡಿದರು.
ಅತಿಥಿಗಳಾಗಿ ಮಲ್ಲೇಶ್ವರ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸುನೀಲ…ಕುಮಾರ್, ಆರ್ಬಿಐ ಮಾಜಿ ಉಪಗೌರ್ನರ್ ಆರ್.ಗಾಂಧಿ, ಎನ್ಎಸ್ಎಸ್ ಅಧಿಕಾರಿ ಡಾ.ಗಣನಾಥ ಶೆಟ್ಟಿ ಯಕ್ಕರ್ ಭಾಗವಹಿಸಿದ್ದರು. 50ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳ 3000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಕಥಾನ್ನಲ್ಲಿ ಪಾಲ್ಗೊಂಡಿದ್ದರು.