Arrested: ನಶೆಯಲ್ಲಿ ನಿಂದನೆ; ಸ್ನೇಹಿತನ ಹತ್ಯೆಗೈದಿದ್ದ ಐವರ ಬಂಧನ
Team Udayavani, Apr 22, 2024, 1:11 PM IST
ಬೆಂಗಳೂರು: ಮದ್ಯದ ಅಮಲಿನಲ್ಲಿ ಸ್ನೇಹಿತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಫುಡ್ ಡೆಲಿವರಿ ಬಾಯ್ ಕೊಲೆಗೈದಿದ್ದ ಐವರು ಆರೋಪಿಗಳನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ.
ದೊಮ್ಮಲೂರಿನ ಎಸ್.ಸಂತೋಷ್(36), ಇಂದಿರಾನಗರದ ಎಂ.ಪವನ್ ಕುಮಾರ್ (26), ತಿಪ್ಪಸಂದ್ರ ರಂಜಿತ್ ಕುಮಾರ್ (33), ದೊಮ್ಮಲೂರು ಲೇಔಟ್ ನಿವಾಸಿ ಜೆ.ವಿನೋದ್ ಮ್ಯಾಥ್ಯೂವ್(35) ಮತ್ತು ರಂಗನಾಥ್(41) ಬಂಧಿತರು.
ಆರೋಪಿಗಳು: ಏ.19ರಂದು ರಾತ್ರಿ ಫುಡ್ ಡೆಲಿವರಿ ಬಾಯ್, ಶಿವಾಜಿನಗರ ನಿವಾಸಿ ಸತೀಶ್ ಕುಮಾರ್ ಮದ್ಯದ ಅಮಲಿನಲ್ಲಿ ಆರೋಪಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಅದರಿಂದ ಆಕ್ರೋಶಗೊಂಡ ಆರೋಪಿಗಳು ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಹತ್ಯೆಗೈದಿದ್ದರು ಎಂದು ಪೊಲೀಸರು ಹೇಳಿದರು.
ಆರೋಪಿಗಳು ಹಾಗೂ ಸತೀಶ್ ಕುಮಾರ್ ಸ್ನೇಹಿತರಾಗಿದ್ದಾರೆ. ಏ.19ರಂದು ಸತೀಶ್ ಕುಮಾರ್ ಶಿವಾಜಿನಗರದಿಂದ ದೊಮ್ಮಲೂರಿನಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗಿದ್ದಾನೆ. ಅದೇ ಕಾರ್ಯಕ್ರಮದಲ್ಲಿ ಆರೋಪಿಗಳು ಇದ್ದರು. ಈ ವೇಳೆ ಹಳೇ ಸ್ನೇಹಿತರೆಲ್ಲಾ ಒಟ್ಟಾಗಿ ಸಿಕ್ಕಿದ್ದಾರೆ. ಹೀಗಾಗಿ ಎಲ್ಲರೂ ಒಟ್ಟಾಗಿ ಮದ್ಯ ಸೇವಿಸಲು ದೊಮ್ಮಲೂರಿನ ಬಿಡಿಎ ಪಾರ್ಕ್ ಬಳಿ ಹೋಗಿದ್ದಾರೆ. ಎಲ್ಲರೂ ಕಂಠಪೂರ್ತಿ ಮದ್ಯ ಸೇವಿಸಿದ್ದರು. ಆಗ ಸತೀಶ್ ಕುಮಾರ್, ಸಂತೋಷ್ ಮತ್ತು ಪವನ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ಎಲ್ಲರನ್ನು ಎಳೆದಾಡಿದ್ದ. ಈ ಹಿಂದೆಯೂ ಇದೇ ರೀತಿ ಸತೀಶ್ ಮದ್ಯದ ಅಮಲಿನಲ್ಲಿ ಜಗಳ ಮಾಡಿದ್ದ.
ಅದರಿಂದ ಆಕ್ರೋಶಗೊಂಡ ಸಂತೋಷ್, ಪವನ್ ಹಾಗೂ ಇತರರು ಸತೀಶ್ ಕುಮಾರ್ ಮೇಲೆ ಹಲ್ಲೆ ನಡೆಸಿ ಸಿಮೆಂಟ್ ಇಟ್ಟಿಗೆಯನ್ನು ಆತನ ತಲೆಮೇಲೆ ಎತ್ತಿ ಹಾಕಿ ಕೊಲೆಗೈದು ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಮದ್ಯ ಪಾರ್ಟಿ ಮಾಡಿದಾಗಲೆಲ್ಲ ಸತೀಶ್ ಕುಮಾರ್, ಆರೋಪಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಅದರಿಂದ ಆಕ್ರೋಶಗೊಂಡು ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಹೇಳಿದರು. ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್ಗಳು ಸಕ್ಸಸ್
KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ
Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ
Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ
Bengaluru: ಠಾಣೆಯಲ್ಲೇ ಮಹಿಳಾ ಪಿಎಸ್ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ
Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು
Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್ ತನಿಖೆ ಆರಂಭ
Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ
ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ