Layout: ಕಾರಂತ ಲೇಔಟ್‌ ನಿವೇಶನ ಹಂಚಿಕೆ ಮತ್ತಷ್ಟು ವಿಳಂಬ


Team Udayavani, Dec 16, 2023, 11:41 AM IST

Layout: ಕಾರಂತ ಲೇಔಟ್‌ ನಿವೇಶನ ಹಂಚಿಕೆ ಮತ್ತಷ್ಟು ವಿಳಂಬ

ಬೆಂಗಳೂರು: ಬಿಡಿಎ ಅಧಿಕಾರಿಗಳ ಮಟ್ಟದಲ್ಲಿ ರೂಪುರೇಷೆ ಸಿದ್ಧವಾಗದ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಡಾ.ಕೆ.ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆ ಪ್ರಕ್ರಿಯೆಯು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಹೆಚ್ಚಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಶಿವರಾಮ ಕಾರಂತ ಬಡಾವಣೆಯ ಪ್ರತಿ ಚದರ ಅಡಿಗೆ 3,650 ರೂ. ನಿಗದಿಪಡಿಸಿ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ.

ಬಡಾವಣೆಯ ಮಾರುಕಟ್ಟೆ ದರ ಪರಿಶೀಲಿಸಿ ಪ್ರತಿ ಚದರ ಅಡಿಗೆ 5 ಸಾವಿರಕ್ಕೆ ಹೆಚ್ಚಿಸಲು ಚರ್ಚೆಗಳು ನಡೆದಿವೆ. ಆದರೆ, ಬಡಾ ವಣೆಯ ನಿವೇಶನಕ್ಕೆ ಅಂತಿಮ ದರ ನಿಗದಿಪಡಿಸಿ, ರೂಪು ರೇಷೆ ಸಿದ್ಧಪಡಿಸದಿರುವುದು ನಿವೇಶನ ಹಂಚಿಕೆ ಪ್ರಕ್ರಿಯೆ ವಿಳಂಬಕ್ಕೆ ಪ್ರಮುಖ ಕಾರಣವಾಗಿದೆ.

3,705 ಎಕರೆಯಲ್ಲಿ ಬಡಾವಣೆ ನಿರ್ಮಾಣ: ಉತ್ತರ ಬೆಂಗಳೂರಿನ ದೊಡ್ಡಬಳ್ಳಾಪುರ ಮತ್ತು ಹೆಸರಘಟ್ಟ ನಡುವಿನ ಶಿವರಾಮ ಕಾರಂತ ಬಡಾವಣೆಯ 34 ಸಾವಿರ ನಿವೇಶನಗಳ ಪೈಕಿ 28 ಸಾವಿರ ಸಿದ್ಧವಾಗಿವೆ. ಇವುಗಳಲ್ಲಿ 20ಗಿ30, 30ಗಿ40, 60ಗಿ40, 50ಗಿ80 ಹಾಗೂ ಮೂಲೆ ನಿವೇಶನವೂ ಸೇರಿದೆ. ಈ ಬಡಾವಣೆಗೆ 3 ಸಾವಿರ ರೈತರು ಭೂಮಿ ಕೊಟ್ಟಿದ್ದಾರೆ. ಮೊದಲ ಅಧಿಸೂಚನೆಯಲ್ಲಿ 3,456 ಎಕರೆ, ಎರಡನೇ ಅಧಿಸೂಚನೆಯಲ್ಲಿ 249 ಎಕರೆ ಸೇರಿ 3,705 ಎಕರೆ ವಿಶಾಲವಾದ ಜಾಗದಲ್ಲಿ ಡಾ.ಕೆ.ಶಿವರಾಮ ಕಾರಂತ ಬಡಾವಣೆ ತಲೆ ಎತ್ತಲಿದೆ. ಇದರಲ್ಲಿ ಶೇ.40 ಭಾಗ ಅಂದರೆ 12 ಸಾವಿರ ನಿವೇಶನಗಳು ಭೂಮಿ ಕಳೆದುಕೊಂಡ ರೈತರ ಪಾಲಾಗಲಿದೆ. ಉಳಿದವುಗಳು ಸಾರ್ವಜನಿಕರಿಗೆ ಲಭ್ಯವಿರಲಿದೆ. ಸದ್ಯ 2,900 ಎಕರೆ ಭೂ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಸೂಚಿಸಿದೆ. ಈ ಪೈಕಿ 160 ಎಕರೆ ರಾಜೀವ್‌ ಗಾಂಧಿ ವಸತಿ ನಿಗಮದ ಸುಪರ್ದಿಗೆ ನೀಡುವಂತೆ ಸೂಚನೆ ಬಂದಿದೆ ಎಂದು ಬಿಡಿಎ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಕಮಿಟಿ ಮುಂದುವರಿಸದಿದ್ರೆ ಸಮಸ್ಯೆ ಜಟಿಲ?: ಬಡಾವಣೆಯಲ್ಲಿ ನಿರ್ಮಾಗೊಂಡಿರುವ ಕಟ್ಟಡಗಳನ್ನು ಕ್ರಮ ಬದ್ಧಗೊಳಿಸುವಿಕೆ, ಭೂ ಸ್ವಾಧೀನ ಪ್ರಕ್ರಿಯೆ ಸಮಸ್ಯೆ ಬಗೆಹರಿಸುವುದು, ಅರ್ಹತಾ ಪ್ರಮಾಣ ಪತ್ರ ನೀಡುವುದು, ನಿವೇಶನ ನಿರ್ಮಾಣ ಹಾಗೂ ಬಡಾವಣೆ ಪರಿಶೀಲಿಸಿ ಜನರಿಗೆ ಹಂಚುವ ಜವಾಬ್ದಾರಿ ಸೇರಿ ಬಡಾವಣೆಯ ಎಲ್ಲ ಪ್ರಕ್ರಿಯೆಗಳನ್ನು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್‌ ಕಮಿಟಿಯೇ ನಿರ್ವಹಣೆ ಮಾಡುತ್ತಿತ್ತು. ಹೀಗಾಗಿ, ಮಾರ್ಚ್‌ನಲ್ಲಿ ಕಮಿಟಿ ಬಡಾವಣೆ ಕೆಲಸ ಪ್ರಾರಂಭಿಸಿದರೂ ವೇಗವಾಗಿ ಹಲವು ಪ್ರಕ್ರಿಯೆ ಮುಗಿಸಿದೆ. ಡಿ.31ರಂದು ಕಮಿಟಿ ಅವಧಿ ಮುಕ್ತಾಯಗೊಳ್ಳಲಿದೆ. ಬಡಾವಣೆ ನಿರ್ವಹಣೆ ಮತ್ತೆ ಕಮಿಟಿ ಜವಾಬ್ದಾರಿಗೆ ಒಳಪಟ್ಟರೆ 2024ರ ಮಾರ್ಚ್‌ ಅಥವಾ ಏಪ್ರಿಲ್‌ನಲ್ಲಿ ನಿವೇಶನ ಮಾರಾಟ ಪ್ರಕ್ರಿಯೆ ನಡೆಯಬಹುದು. ಕಮಿಟಿ ಅವಧಿ ಮುಂದುವರಿಸದಿದ್ದರೆ ಬಡಾವಣೆ ನಿರ್ವಹಣೆಯ ಜವಾಬ್ದಾರಿ ಬಿಡಿಎಗೆ ಹೋಗಲಿದೆ. ಸರ್ಕಾರ ಮಧ್ಯಪ್ರವೇಶಿಸಿ ನಿವೇಶನ ಮಾರಾಟವು ಇನ್ನಷ್ಟು ವಿಳಂಬವಾಗಲಿದೆ ಎಂದು ಬಡಾವಣೆಗೆ ಭೂಮಿ ಕೊಟ್ಟ ರೈತರ ಹೇಳಿಕೆ ಆಗಿದೆ.

ಸೈಟ್‌ ಹಣ ಪೆರಿಫೆರಲ್‌ ರಸ್ತೆಗೆ: ಬಡಾವಣೆ ಪಕ್ಕದಲ್ಲಿ ಪೆರಿಫೆರಲ್‌ ರಿಂಗ್‌ ರಸ್ತೆ (ಪಿಆರ್‌ಆರ್‌) ಹಾದು ಹೋಗಲಿದೆ. ಶಿವರಾಮ್‌ ಕಾರಂತ ಬಡಾವಣೆಯ ನಿವೇಶನ ಮಾರಾಟದಲ್ಲಿ ಬಂದ ದುಡ್ಡನ್ನು ಪೆರಿಫೆರಲ್‌ ರಿಂಗ್‌ ರಸ್ತೆ (ಪಿಆರ್‌ಆರ್‌) ಕಾರ್ಯಕ್ಕೆ ಬಳಸಲು ಚಿಂತನೆ ನಡೆಸಲಾಗಿದೆ.

ಬಡಾವಣೆ ನಿರ್ಮಾಣಕ್ಕೆ ಇರುವ ತೊಡಕುಗಳೇನು?: ಶಿವರಾಮ ಕಾರಂತ ಬಡಾವಣೆಯಲ್ಲಿ 400 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳುವುದು ಬಾಕಿ ಇದೆ. ಭೂ ಮಾಲೀಕರಿಗೆ ಇದುವರೆಗೆ ಶೇ.15 ಅರ್ಹತಾ ಪ್ರಮಾಣ ಪತ್ರ(ಇಸಿ) ಕೊಡಲಾಗಿದೆ. ಭೂ ಮಾಲೀಕರಿಗೆ ಶೇ.100 ಇ.ಸಿ. ಕೊಟ್ಟ ಮೇಲೆ ಸಾರ್ವಜನಿಕರಿಗೆ ನಿವೇಶನ ಕೊಡಬಹುದಾಗಿದೆ. ಇ.ಸಿ. ನೀಡದೇ ರೇರಾ ನೋಂದಣಿ ಅಸಾಧ್ಯ. ಇದರಿಂದ ಎಲ್ಲವೂ ವಿಳಂಬವಾಗುತ್ತದೆ.

ಶಿವರಾಮ ಕಾರಂತ ಬಡಾವಣೆ ಪ್ರಕ್ರಿಯೆ ನಡೆಯುತ್ತಿದೆ. ಸಿದ್ಧಗೊಂಡಿರುವ ನಿವೇಶನಗಳಿಗೆ ಮೂಲ ಸೌಕರ್ಯ ಕಲ್ಪಿಸಲಾಗುತ್ತಿದೆ. ಶೀಘ್ರ ನಿವೇಶನ ಮಾರಾಟ ಬಗ್ಗೆ ಮಾಹಿತಿ ನೀಡಲಾಗುವುದು. ಎನ್‌.ಜಯರಾಂ, ಬಿಡಿಎ ಆಯುಕ್ತ

ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.