ರಿಯಲ್‌ ಸ್ಟಾರ್‌ ಉಪೇಂದ್ರ ಪ್ರಜಾಕೀಯ ಈ ಸಲ ಡೌಟ್‌


Team Udayavani, Apr 20, 2018, 6:50 AM IST

Assembly-elections,-Upendra.jpg

ಬೆಂಗಳೂರು: ರಿಯಲ್‌ ಸ್ಟಾರ್‌ ಖ್ಯಾತಿಯ ನಟ ಉಪೇಂದ್ರ ಅವರ “ಪ್ರಜಾಕೀಯ’ ಪಕ್ಷ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಡೌಟ್‌. ವಿಧಾನಸಭೆ ಚುನಾವಣೆಯಲ್ಲಿ ಉಪೇಂದ್ರ ಅವರೂ ಸ್ಪರ್ಧೆ ಮಾಡುವುದಿಲ್ಲ. ಯಾರಿಗೂ ಬೆಂಬಲವನ್ನೂ ವ್ಯಕ್ತಪಡಿಸುವುದಿಲ್ಲ.

ಹೀಗಾಗಿ, “ಪ್ರಜಾಕೀಯ’ ಸದ್ಯದ ಮಟ್ಟಿಗೆ “ತಟಸ್ಥ’ ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಿ ಆರು ತಿಂಗಳಲ್ಲೇ ಅಲ್ಲಿಂದ ಹೊರಬಂದು “ಪ್ರಜಾಕೀಯ’ ಪಕ್ಷ ಘೋಷಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದ ಉಪೇಂದ್ರ, ಚುನಾವಣೆ ಸ್ಪರ್ಧೆ ವಿಚಾರದಲ್ಲಿ ತರಾತುರಿ ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಪ್ರಜಾಕೀಯ’ ಪಕ್ಷ ಚುನಾವಣಾ ಆಯೋಗದಲ್ಲಿ ಇನ್ನೂ ನೋಂದಣಿ ಯಾಗಿಲ್ಲ. ಆದರೆ, ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು ಮುಂದಿನ ಲೋಕಸಭೆ ಚುನಾವಣೆ ವೇಳೆಗೆ ನೋಂದಣಿ ಮಾಡಿ ಲೋಕಸಭೆ ಹಾಗೂ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

ಉಪೇಂದ್ರ ಅವರು ಕೆಪಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾಗ ಹಾಗೂ “ಪ್ರಜಾಕೀಯ’ ಘೋಷಣೆ ಮಾಡಿದಾಗ ಜತೆಯಲ್ಲಿದ್ದು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಬಯಸಿದ್ದ ಕೆಲವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಅವರ ಪರ ಉಪೇಂದ್ರ ಪ್ರಚಾರ ಮಾಡುವುದು ಅನುಮಾನ.

ಯಾಕೆಂದರೆ, ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡದೇ ಇರಲು ಉಪೇಂದ್ರ ತೀರ್ಮಾನಿಸಿದ್ದಾರೆ. ಹೀಗಾಗಿ, ಚುನಾವಣೆಗೆ ಸ್ಪರ್ಧಿಸದಂತೆ ತಮ್ಮ ಬೆಂಬಲಿಗ-ಅಭಿಮಾನಿಗಳಿಗೂ ತಿಳಿಸಿದ್ದಾರೆ. ಸದ್ಯ ಉಪೇಂದ್ರ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಎ.24ರ ನಂತರ ಮರಳಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ರಾಜಕೀಯ ಪಕ್ಷಗಳ “ಗಾಳ’:   ಈ ಮಧ್ಯೆ, ಉಪೇಂದ್ರ ಅವರ ಪ್ರಜಾಕೀಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಗೊತ್ತಾಗುತ್ತಿದ್ದಂತೆ ಜೆಡಿಎಸ್‌, ಬಿಜೆಪಿ, ಕಾಂಗ್ರೆಸ್‌ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಉಪೇಂದ್ರ ಅವರನ್ನು ಪ್ರಚಾರಕ್ಕೆ ಕರೆತರಲು ಪ್ರಯತ್ನಿಸಿವೆ. 

ಈಗಾಗಲೇ ದರ್ಶನ್‌, ಸುದೀಪ್‌ ಸೇರಿ ಹಲವು ನಟರ ಸಂಪರ್ಕದಲ್ಲಿರುವ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಹಾಗೂ ಉಪೇಂದ್ರ ಅವರ ಬಗ್ಗೆ ಮೊದಲಿನಿಂದಲೂ “ಸಾಫ್ಟ್’ ಆಗಿರುವ ಬಿಜೆಪಿ ಸಹ ಉಪೇಂದ್ರಗೆ ಗಾಳ ಹಾಕಲು ಮುಂದಾಗಿವೆ ಎಂದು ತಿಳಿದು ಬಂದಿದೆ.

ಪ್ರಥಮ ಚುಂಬನಂ ದಂತ ಭಗ್ನಂ 
ರಾಜ್ಯದಲ್ಲಿ ಹೊಸದಾಗಿ ರಾಜಕೀಯ ಪಕ್ಷಗಳು ಸಾಕಷ್ಟು ಸ್ಥಾಪನೆಯಾಗಿವೆಯಾದರೂ ಚಲನಚಿತ್ರ ನಟ-ನಟಿಯರು ಹೊಸ ಪಕ್ಷ ಸ್ಥಾಪಿಸಿರಲಿಲ್ಲ. ಕೆಪಿಜೆಪಿಯಲ್ಲಿ ಗುರುತಿಸಿಕೊಂಡು ಪಕ್ಷ ಕಟ್ಟಲು ಮುಂದಾಗಿ ಹೊಸ ಸಾಹಸಕ್ಕೂ ಕೈ ಹಾಕಿದ್ದರು ಉಪೇಂದ್ರ. ಆರು ತಿಂಗಳಲ್ಲೇ ಕೆಪಿಜೆಪಿ ಸಂಸ್ಥಾಪಕ ಮಹೇಶ್‌ಗೌಡ ಅವರೊಂದಿಗೆ ಭಿನ್ನಾಭಿಪ್ರಾಯ ಉಂಟಾಗಿ ಕೆಪಿಜೆಪಿಗೆ ರಾಜೀನಾಮೆ ನೀಡಿ “ಪ್ರಜಾಕೀಯ’ಕ್ಕೆ ಜೈ ಎಂದಿದ್ದರು. ಆದರೆ, ಪ್ರಥಮ ಚುಂಬನಂ ದಂತ ಭಗ್ನಂ ಎಂಬಂತೆ ವಿಧಾನಸಭೆ ಚುನಾವಣೆ ಅಖಾಡದಿಂದ ದೂರ ಉಳಿಯುವಂತಾಗಿದೆ.

– ಎಸ್‌.ಲಕ್ಷ್ಮೀನಾರಾಯಣ 

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

train-track

Landslides; ಮಂಗಳೂರು – ಬೆಂಗಳೂರು ರೈಲುಗಳ ಸಂಚಾರ ರದ್ದು

ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

Karnataka ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.