ಫೇಲ್ ಆದವರೇ ಇವರ ಟಾರ್ಗೆಟ್: ವಿವಿಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ನೀಡುತ್ತಿದ್ದ ಜಾಲ ಪತ್ತೆ

ವಿವಿಗಳ ಅಂಕಪಟ್ಟಿ, ಸೀಲುಗಳು, ಹಾಲೋಗ್ರಾಮ್‌ಗಳನ್ನು ಕದ್ದು ನಕಲಿ ಪ್ರಮಾಣ ಪತ್ರ ಸೃಷ್ಟಿ

Team Udayavani, Mar 9, 2022, 12:02 PM IST

Untitled-1

ಬೆಂಗಳೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ, ಕುವೆಂಪು ಮತ್ತು ಮಂಗಳೂರು ವಿಶ್ವವಿದ್ಯಾಲಯಗಳು ಸೇರಿ ದೇಶದ ವಿವಿಧ ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರ ಮಾರಾಟ ಮಾಡುತ್ತಿದ್ದ ಜಾಲವನ್ನು ಜಯನಗರ ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಜಯನಗರ ನಿವಾಸಿ ರಘು (34),ರಾಜಾಜಿನಗರದ ಧರ್ಮಕುಮಾರ್‌ (39), ಕೆ.ಆರ್‌.ಪುರನಿವಾಸಿ ದೀಪಕ್‌ (32), ಉತ್ತರಹಳ್ಳಿ ನಿವಾಸಿ ನರೇಶ್‌ ರೆಡ್ಡಿ (37) ಬಂಧಿತರು. ಅವರಿಂದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ200 ನಕಲಿ ಅಂಕಪಟ್ಟಿ, ಬ್ಯಾಂಕ್‌ಖಾತೆಯಲ್ಲಿದ್ದ 4.60 ಲಕ್ಷ ರೂ. ನಗದು, 2ಲ್ಯಾಪ್‌ ಟಾಪ್‌, ಪ್ರಿಂಟರ್‌, ಹಲವು ವಿವಿಗಳ ನಕಲಿ ಸೀಲುಗಳು,ಹಾಲೋಗ್ರಾಮ್‌ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳು ಇತ್ತೀಚೆಗೆ ಮಾ.7ರಂದು ಜಯನಗರ 3ನೇ ಬ್ಲಾಕ್‌ನಲ್ಲಿರುವ ಎನ್‌ಎಂಕೆಆರ್‌ ಕಾಲೇಜು ಬಳಿ ರಘು ಹಾಗೂ ಧರ್ಮಕುಮಾರ್‌ ಅನುತ್ತೀರ್ಣ ಹೊಂದಿ, ಮರು ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳನ್ನು ಹುಡುಕುತ್ತಿದ್ದರು. ಅದು ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಯನಗರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಯು.ಆರ್‌.ಮಂಜುನಾಥ್‌, ಪಿಎಸ್‌ಐ ಚಂದನ್‌ ಕಾಳೆ, ರವಿಕುಮಾರ್‌ ನೇತೃತ್ವದ ತಂಡ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ.

ಇದನ್ನೂ ಓದಿ: 500 ರೂ.ಗೆ ಕೂಲಿ ಕಾರ್ಮಿಕನ ಕೊಲೆ : ಆರೋಪಿ ಬಂಧನ

ನಂತರ ಅವರ ಮಾಹಿತಿ ಮೇರೆಗೆ ಇತರೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಆರೋಪಿಗಳ ಪೈಕಿ ದಿಲೀಪ್‌ ಎಂಬಿಎ ಪದವೀಧರನಾಗಿದ್ದು, ನರೇಶ್‌ ರೆಡ್ಡಿ ಟೆಕಿಯಾಗಿದ್ದಾನೆ. ಇನ್ನು ಧರ್ಮಕುಮಾರ್‌ ಕರ್ನಾಟಕ ಮುಕ್ತ ವಿವಿ ಹಾಗೂ ಕರ್ನಾಟಕ ಹಲವು ವಿವಿಗಳಲ್ಲಿ ಡೊನೇಷನ್‌ ಆಧಾರದಲ್ಲಿ ಸೀಟು ಕೊಡಿಸುವ ಮಧ್ಯವರ್ತಿಯಾಗಿದ್ದ. ರಘು ಕೂಡ ಈತನಿಗೆ ಸಹಕಾರ ನೀಡುತ್ತಿದ್ದ. ಆದರೆ, ನಿರೀಕ್ಷೆ ಮಟ್ಟದಲ್ಲಿ ಲಾಭ ಬಾರದ ಕಾರಣ ಅದನ್ನು ನಿಲ್ಲಿಸಿದ್ದರು. ಈ ಮಧ್ಯೆ ಜೀವನೋಪಾಯಕ್ಕಾಗಿ 2019ರಿಂದ ನಕಲಿ ಅಂಕಪಟ್ಟಿ ಮತ್ತು ಪ್ರಮಾಣ ಪತ್ರ ಮಾರಾಟ ದಂಧೆ ಆರಂಭಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಅಸಲಿ ಟು ನಕಲಿ: ಆರೋಪಿಗಳು ವಿವಿಗಳ ಅಸಲಿ ಅಂಕಪಟ್ಟಿ ಪಡೆದುಕೊಂಡು, ಅವುಗಳಲ್ಲಿರುವ ಹಾಲೋಗ್ರಾಮ್‌ ಮತ್ತು ವಿವಿಗಳ ಕೆಲ ಹಂತದ ಸಿಬ್ಬಂದಿಗೆ ಹಣ ಕೊಟ್ಟು ಕೆಲ ಹೊತ್ತಿನವರೆಗೆ ಸೀಲ್‌ಗಳನ್ನು ಕೊಂಡೊಯ್ದು ನಕಲಿ ಸೀಲ್‌ಗಳನ್ನು ಸಿದ್ಧಪಡಿಸಿಕೊಂಡಿದ್ದಾರೆ. ನಂತರದ ನಗರದ ವಿವಿಧ ಕಾಲೇಜುಗಳಲ್ಲಿನ ಡಿ ದರ್ಜೆಯ ಸಿಬ್ಬಂದಿ ಒಂದಿಷ್ಟು ಹಣ ಕೊಟ್ಟು, ಅನುತ್ತೀರ್ಣಗೊಂಡಿದ್ದ ವಿದ್ಯಾರ್ಥಿಗಳ ಪಟ್ಟಿ ಮತ್ತು ಮೊಬೈಲ್‌ ಹಾಗೂ ಇತರೆ ಮಾಹಿತಿ ಪಡೆದುಕೊಂಡಿದ್ದಾರೆ. ಆ ವಿದ್ಯಾರ್ಥಿಗಳನ್ನು ಸಂಪರ್ಕಿಸಿ, ಹಣ ಕೊಟ್ಟರೆ ಅಂಕಪಟ್ಟಿ ಮತ್ತು ಪ್ರಮಾಣ ಪತ್ರ ಕೊಡುತ್ತೇವೆ. ಅದರಿಂದ ಕೆಲಸ ಪಡೆಯಬಹುದು ಎಂದು ಆಮಿಷವೊಡ್ಡಿದ್ದರು. ಅನುತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ಆರೋಪಿ ರಘು ಮತ್ತು ಧರ್ಮಕುಮಾರ್‌ ಶೋಧಿಸುತ್ತಿದ್ದರು. ದೀಪಕ್‌ ಮತ್ತು ನರೇಶ್‌ ಅಂಕಪಟ್ಟಿ ತಯಾರಿಸುತ್ತಿದ್ದರು. ವಿದ್ಯಾರ್ಥಿಗಳ ಬೇಡಿಕೆ ಅನುಗುಣವಾಗಿ ಲ್ಯಾಪ್‌ಟಾಪ್‌ ಮೂಲಕ ಹಾಲೋಗ್ರಾಮ್‌ ಅನ್ನು ನಕಲಿ ಅಂಕಪಟ್ಟಿಗೆ ಸೇರಿಸಿ, ನಂತರ ಸೀಲು ಹಾಕಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.