ಸರ್ಕಾರಿ ಭೂ ಒತ್ತುವರಿ ತೆರವಿಗೆ ಗ್ರಹಣ


Team Udayavani, Jul 9, 2018, 12:12 PM IST

sarkari.jpg

ಬೆಂಗಳೂರು: ಸರ್ಕಾರಿ ಭೂಮಿ ಅನಧಿಕೃತ ಸಾಗುವಳಿ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿ 2019ರ ಮಾ.16ರವರೆಗೆ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ 1.77 ಲಕ್ಷ ಎಕರೆ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಗೆ ಗ್ರಹಣ ಹಿಡಿದಂತಾಗಿದೆ.

ಈ ಹಿಂದೆ 1990ರ ಏ.14ಕ್ಕೂ ಮೊದಲು ಸರ್ಕಾರಿ ಭೂಮಿಯಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡಿದವರಿಗೆ ಸಕ್ರಮೀಕರಣಕ್ಕೆ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿತ್ತು. ಬಳಿಕ 2005ರ ಜ. 1ರ ಮೊದಲು ಸಾಗುವಳಿ ಮಾಡಿದವರು ಸಕ್ರಮೀಕರಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅದರಂತೆ ಗಡುವು ಅವಧಿ ಮುಕ್ತಾಯವಾಗಿತ್ತು.

ಹಿಂದಿನ ಸರ್ಕಾರ ಕಂದಾಯ ಕಾಯ್ದೆಗೆ ಮತ್ತೂಂದು ತಿದ್ದುಪಡಿ ತಂದು 2018ರ ಮಾರ್ಚ್‌ 17ರಂದು ಹೊರಡಿಸಿದ ಅಧಿಸೂಚನೆಯಲ್ಲಿ ಸಕ್ರಮೀಕರಣಕ್ಕೆ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಕಾಶ ನೀಡಿದೆ. ಇದರಿಂದಾಗಿ ನಿಯಮ 94ಎ ಹಾಗೂ 94ಬಿ ಅಡಿ ಸಲ್ಲಿಸಲು ಇನ್ನೂ ಎಂಟು ತಿಂಗಳಷ್ಟು ಅವಕಾಶವಿದೆ.

1.77 ಲಕ್ಷ ಎಕರೆ ಒತ್ತುವರಿ ತೆರವು ಬಾಕಿ: ರಾಜ್ಯದಲ್ಲಿನ ಒಟ್ಟು 63.84 ಲಕ್ಷ ಎಕರೆ ಸರ್ಕಾರಿ ಭೂಮಿ ಪೈಕಿ 11.75 ಲಕ್ಷ ಎಕರೆ ಒತ್ತುವರಿಯಾಗಿರುವುದು ಪತ್ತೆಯಾಗಿತ್ತು. ಈ ಪೈಕಿ 8152 ಎಕರೆಗೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ವ್ಯಾಜ್ಯವಿದ್ದು, ಸಾರ್ವಜನಿಕ ಉದ್ದೇಶಕ್ಕೆ 7881 ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವುದು ಕಂಡುಬಂದಿತ್ತು. ಉಳಿದಂತೆ 7.09 ಲಕ್ಷ ಎಕರೆ ಭೂಮಿ ಒತ್ತುವರಿಯಾಗಿರುವುದು ಬಯಲಾಗಿತ್ತು. ಈವರೆಗೆ 2.71 ಲಕ್ಷ ಎಕರೆ ಭೂಮಿ ಒತ್ತುವರಿ ತೆರವಾಗಿದ್ದು, 1.77 ಲಕ್ಷ ಎಕರೆ ಭೂಮಿ ಒತ್ತುವರಿ ತೆರವು ಬಾಕಿ ಇದೆ.

ತೆರವಿಗೆ ಅಡ್ಡಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಿದ್ದರೂ ನೈಸರ್ಗಿಕ ಕಾಲುವೆ, ನದಿ ಕಣಿವೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸ್ಥಳೀಯ ಪ್ರಾಧಿಕಾರಗಳ ಒಡೆತನಕ್ಕೆ ಸೇರಿದ ಭೂಮಿ, ಹಾಲಿ ಇಲ್ಲವೇ ಉದ್ದೇಶಿತ ರಸ್ತೆ, ವರ್ತುಲ ರಸ್ತೆ, ಹೆದ್ದಾರಿ ನಿರ್ಮಾಣ- ವಿಸ್ತರಣೆಗೆಂದು ಗುರುತಿಸಿದ ಜಾಗ, ಉದ್ಯಾನ, ಆಟದ ಮೈದಾನ, ತೆರೆದ ಪ್ರದೇಶ, ಅಚ್ಚುಕಟ್ಟು ಪ್ರದೇಶ,

ಮಳೆ ನೀರು ಕಾಲುವೆ ಇತರೆ ಭೂಮಿ ಒತ್ತುವರಿಯಾಗಿದ್ದರೆ ಅದರ ಸಕ್ರಮಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟವಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹಾಗೆಂದು ಏಕಾಏಕಿ ತೆರವುಗೊಳಿಸಲು ಸಾಧ್ಯವಿಲ್ಲ. ನಿಗದಿತ ಕಾಲಮಿತಿಯೊಳಗೆ ಒತ್ತುವರಿದಾರರು ಸಕ್ರಮಕ್ಕೆ ಅರ್ಜಿ ಸಲ್ಲಿಸದಿದ್ದರೆ ಆ ಜಾಗವನ್ನು ತೆರವುಗೊಳಿಸಲು ಯಾವುದೇ ಅಡ್ಡಿಯಿಲ್ಲ.

ಆದರೆ ಕಾಲಮಿತಿಯೊಳಗೆ ಸಕ್ರಮಕ್ಕೆ ಅರ್ಜಿ ಸಲ್ಲಿಸಿದರೆ ಅದನ್ನು ಪರಿಶೀಲಿಸಿ ತಾಲೂಕು ಮಟ್ಟದ ಸಕ್ರಮೀಕರಣ ಸಮಿತಿ ಪರಿಶೀಲನೆಗೆ ಒಳಪಡಿಸಿ ಸಕ್ರಮಗೊಳಿಸಲು ಸಾಧ್ಯವಿಲ್ಲ ಎಂದು ನಿರ್ಧರಿಸಬೇಕು. ಹೀಗಾಗಿ, ಸಕ್ರಮಗೊಳಿಸಲು ಅವಕಾಶವಿಲ್ಲದಂತಹ ಪ್ರಕರಣವಿದ್ದರೂ 2019ರ ಮಾ. 16ರವರೆಗೆ ಒತ್ತುವರಿ ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಮೂಲಗಳು ಹೇಳಿವೆ.

Ad

ಟಾಪ್ ನ್ಯೂಸ್

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

1-gurme

Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

Madikeri: ಕಾಡಾನೆ ದಾಳಿ… ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

Madikeri: ಕಾಡಾನೆ ದಾಳಿಗೆ ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kamal Sridevi Movie: ಶೂಟಿಂಗ್‌ ಮುಗಿಸಿದ ‘ಕಮಲ್‌ ಶ್ರೀದೇವಿ’

Kamal Sridevi Movie: ಶೂಟಿಂಗ್‌ ಮುಗಿಸಿದ ‘ಕಮಲ್‌ ಶ್ರೀದೇವಿ’

Arrested: ಕರೆ ಮಾಡಲು ಕೊಟ್ಟ ಮೊಬೈಲ್‌ ವಾಪಸ್‌ ಕೇಳಿದ್ದಕ್ಕೆ ಹಲ್ಲೆ: ಬಂಧನ

Arrested: ಕರೆ ಮಾಡಲು ಕೊಟ್ಟ ಮೊಬೈಲ್‌ ವಾಪಸ್‌ ಕೇಳಿದ್ದಕ್ಕೆ ಹಲ್ಲೆ: ಬಂಧನ

ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ

ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ

Bengaluru: ವರದಕ್ಷಿಣೆ‌: ಡಿವೈಎಸ್ಪಿ ವಿರುದ್ಧ ಕೇಸ್‌

Bengaluru: ವರದಕ್ಷಿಣೆ‌: ಡಿವೈಎಸ್ಪಿ ವಿರುದ್ಧ ಕೇಸ್‌

High Court: ಗಾರ್ಡನ್‌ ಅಲ್ಲ, ಫ್ಲೆಕ್ಸ್‌ ಸಿಟಿ: ಹೈಕೋರ್ಟ್‌ ಚಾಟಿ

High Court: ಗಾರ್ಡನ್‌ ಅಲ್ಲ, ಫ್ಲೆಕ್ಸ್‌ ಸಿಟಿ: ಹೈಕೋರ್ಟ್‌ ಚಾಟಿ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

13

Badami: ಕಟ್ಟಡ ರೆಡಿಯಾದ್ರೂ ಶುರುವಾಗದ ಕ್ಯಾಂಟೀನ್‌

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Kamal Sridevi Movie: ಶೂಟಿಂಗ್‌ ಮುಗಿಸಿದ ‘ಕಮಲ್‌ ಶ್ರೀದೇವಿ’

Kamal Sridevi Movie: ಶೂಟಿಂಗ್‌ ಮುಗಿಸಿದ ‘ಕಮಲ್‌ ಶ್ರೀದೇವಿ’

12

Mudhol: ಉತ್ತಿಬಿತ್ತಿ ಬೆಳೆದ ಲಾವಣಿ ಪಡೆದ ರೈತರಿಗಿಲ್ಲ ಪರಿಹಾರ

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.