ಎಲ್ಐಸಿಯಿಂದ ಶೈಕ್ಷಣಿಕ ಸಮಾವೇಶ
Team Udayavani, Jan 15, 2019, 6:38 AM IST
ಬೆಂಗಳೂರು: ಎಲ್ಲಾ ಭಾರತೀಯರ ಯೋಗಕ್ಷೇಮ ಕಾಪಾಡುವ ಮತ್ತು ನಾಗರಿಕರ ಭವಿಷ್ಯಕ್ಕೆ ಭದ್ರತೆ ಒದಗಿಸುವ ಸದುದ್ದೇಶ ಹಾಗೂ ಧ್ಯೇಯದೊಂದಿಗೆ ಸ್ಥಾಪನೆಯಾಗಿರುವ ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ)ದ ಸೇವೆ ಶ್ಲಾಘನೀಯ ಎಂದು ಸ್ವಾಮಿ ವೀರೇಶಾನಂದ ಸರಸ್ವತೀ ಮೆಚ್ಚುಗೆ ವ್ಯಕ್ತಪಡಿಸಿದರು.
ಅಖೀಲ ಭಾರತ ವಿಮಾ ಪ್ರತಿನಿಧಿಗಳ ಒಕ್ಕೂಟದ ಬೆಂಗಳೂರು ವಿಭಾಗ-2ರ ವತಿಯಿಂದ ನಗರದಲ್ಲಿ ಏರ್ಪಡಿಸಿದ್ದ ಶೈಕ್ಷಣಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಎಲ್ಐಸಿ ಪ್ರತಿನಿಧಿಗಳು ಜನರಿಗೆ ವಿಮೆ ಮಾಡಿಕೊಡುವ ಮೂಲಕ, ಅವರ ಭವಿಷ್ಯದ ಅಗತ್ಯಗಳಿಗಾಗಿ ಹಣ ಉಳಿತಾಯ ಮಾಡಿಸಿ, ಪರೋಕ್ಷವಾಗಿ ಜನರ ಸೇವೆ ಮಾಡುತ್ತಿದ್ದಾರೆ ಎಂದು ಹೇಳಿದರು.
ವಾಗ್ಮಿ ಸುಧಾ ಬರಗೂರು, ಅಖೀಲ ಭಾರತ ವಿಮಾ ಪ್ರತಿನಿಧಿಗಳ ಒಕ್ಕೂಟದ ಮಾಜಿ ಅಧ್ಯಕ್ಷರಾದ ಶ್ರೀನಿವಾಸಾಚಾರಿ ಮಾತನಾಡಿದರು. ಒಕ್ಕೂಟದ ಅಧ್ಯಕ್ಷ ಸಿಂಗಾರಪು ಶ್ರೀನಿವಾಸ, ದಕ್ಷಿಣ ಕೇಂದ್ರ ವಲಯದ ಅಧ್ಯಕ್ಷ ರವೀಂದ್ರ ರೆಡ್ಡಿ, ಕಾರ್ಯದರ್ಶಿ ರಾಮಚಂದ್ರ, ಬೆಂಗಳೂರು ವಿಭಾಗ-2ರ ಗೌರವಾಧ್ಯಕ್ಷ ನಾರಾಯಣಸ್ವಾಮಿ, ಅಧ್ಯಕ್ಷ ವಿ.ರವೀಂದ್ರನಾಥ್, ಕಾರ್ಯದರ್ಶಿ ಎಚ್.ಎಂ.ವಿರೂಪಾಕ್ಷಪ್ಪ, ಖಜಾಂಚಿ ಬಿ.ಎಸ್. ಪ್ರಕಾಶ್ ಹಾಗೂ ಪದಾಧಿಕಾರಿಗಳು, ಸಾವಿರಾರು ವಿಮಾ ಪ್ರತಿನಿಧಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ