ಚುನಾವಣೆ ಎಫೆಕ್ಟ್: ಬಸ್‌ ದರ ದುಪ್ಪಟ್ಟು


Team Udayavani, May 11, 2018, 6:45 AM IST

ksrtc-bus-bangalore–mangal.jpg

ಬೆಂಗಳೂರು/ಮಂಗಳೂರು:ದೂರದ ಊರಿನಲ್ಲಿ ವಾಸ್ತವ್ಯದಲ್ಲಿದ್ದ ಮಂದಿ ಚುನಾವಣೆ ಸಮಯದಲ್ಲಿ ಮತದಾನಕ್ಕಾಗಿ ತಮ್ಮ ಊರುಗಳಿಗೆ ಬರುವುದು ಸಾಮಾನ್ಯ. ಆದರೆ ಮತದಾನ ಮಾಡಲೆಂದು ಊರಿಗೆ ಹೊರಟ ಮಂದಿ ಖಾಸಗಿ ಬಸ್‌ ನಲ್ಲಿ ಆಗಮಿಸಲು ಸಾಮಾನ್ಯ ದಿನಗಳಲ್ಲಿ ಇದ್ದ ದರಕ್ಕಿಂತ ದುಪ್ಪಟ್ಟು ಪಾವತಿ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದ. ಕನ್ನಡ ಮತ್ತು ಉಡುಪಿ ಜಿಲ್ಲೆಯ ಅನೇಕ ಮಂದಿ ಬೆಂಗಳೂರಿನಲ್ಲಿ ವಾಸವಿದ್ದಾರೆ. ಮತದಾನಕ್ಕೆಂದು ಶುಕ್ರವಾರ ಊರಿಗೆ ಆಗಮಿಸಲು ಅನೇಕ ಮಂದಿ ಬಸ್‌ ಟಿಕೆಟ್‌ ಗಾಗಿ ಪರದಾಡುತ್ತಿದ್ದಾರೆ. ಖಾಸಗಿ, ಸರಕಾರಿ ಬಸ್‌ ಗಳಲ್ಲಿ ಈಗಾಗಲೇ ಟಿಕೆಟ್‌ ಮಾರಾಟವಾಗಿದ್ದು, ಒಂದೆರಡು ಹೆಚ್ಚುವರಿ ಬಸ್‌ ಗಳು ಮಾತ್ರ ಬಸ್‌ ಬುಕ್ಕಿಂಗ್‌ ವೆಬ್‌ ಸೈಟ್‌ನಲ್ಲಿ ನಮೂದಾಗಿದೆ, ಉಳಿದ ಹೆಚ್ಚುವರಿ ಬಸ್‌ಗಳ ವಿವರ ಲಭ್ಯವಿಲ್ಲ.

ಸ್ಲೀಪರ್‌ ಬಸ್‌ ಪ್ರಯಾಣಕ್ಕೆ ಒಬ್ಬರಿಗೆ 2,000 ರೂ!
ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುವ ಖಾಸಗಿ ಸ್ಲೀಪರ್‌ ಬಸ್‌ನಲ್ಲಿ ಒಬ್ಬರು ಪ್ರಯಾಣಿಕನಿಗೆ 600 ರೂ.ನಿಂದ 700 ರೂ.ವರೆಗೆ ದರ ಇರುತ್ತದೆ. ಆದರೆ ಚುನಾವಣೆಯ ಸಂಬಂಧ ಸೀಟುಗಳ ಬೇಡಿಕೆ ಹೆಚ್ಚಿರುವುದು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಊರಿಗೆ ಆಗಮಿಸುವುದರಿಂದ ಖಾಸಗಿ ಬಸ್‌ ದರ ಕೂಡ ದುಪ್ಪಟ್ಟು ಆಗಿದೆ. ಕೆಲ ಖಾಸಗಿ ಸ್ಲೀಪರ್‌ ಬಸ್‌ಗಳಲ್ಲಿ ಒಬ್ಬ ಪ್ರಯಾಣಿಕನಿಗೆ ಈಗ 2000 ರೂ. ನಿಗದಿಯಾಗಿದೆ. ಕರಾವಳಿಗೆ ಬರುವ ಬಹುತೇಕ ಸ್ಲೀಪರ್‌ ಖಾಸಗಿ ಬಸ್‌ ಗಳಲ್ಲಿ ಸಿಂಗಲ್‌ ಸ್ಲೀಪರ್‌ ಸೀಟುಗಳು ಈಗಾಗಲೇ ಬುಕ್‌ ಆಗಿವೆ.

ಕೆ.ಎಸ್‌.ಆರ್‌.ಟಿ.ಸಿ.ಯಲ್ಲಿಯೂ ಅದೇ ಕಥೆ
ಕೆ.ಎಸ್‌.ಆರ್‌.ಟಿ.ಸಿ. ಬಸ್‌ಗಳಲ್ಲಿ ಕೂಡ ಆಸನಗಳು ಬಹುತೇಕ ಬುಕ್ಕಿಂಗ್‌ ಆಗಿದ್ದು, ಬಸ್‌ ದರದಲ್ಲೂ ಏರಿಕೆಯಾಗಿದೆ. ಸಾಮಾನ್ಯ ದಿನಗಳಲ್ಲಿ ಐರಾವತ ಬಸ್‌ ನಲ್ಲಿ ಮಂಗಳೂರಿಗೆ ಆಗಮಿಸಲು ಒಬ್ಬರಿಗೆ ಸುಮಾರು 753 ರೂ. ಇತ್ತು. ಆದರೆ, ಮೇ 11ರಂದು ಅದರ ದರ 819 ರೂ.ಗೆ ಏರಿಕೆಯಾಗಿದೆ. ಅದರಂತೆಯೇ ಎಸಿ ಸ್ಲೀಪರ್‌ ಬಸ್‌ ನಲ್ಲಿ ಒಬ್ಬರಿಗೆ 902 ರೂ ಇತ್ತು, 982 ರೂ.ಗೆ ಏರಿಕೆಯಾಗಿದೆ ಚುನಾವಣೆಯ ಸಲುವಾಗಿ ಕೆ.ಎಸ್‌.ಆರ್‌.ಟಿ.ಸಿ. ಬೆಂಗಳೂರಿನಿಂದ ಮಂಗಳೂರಿಗೆ ಈಗಾಗಲೇ ಹೆಚ್ಚುವರಿ ಬಸ್‌ ಓಡಿಸಲು ನಿರ್ಧರಿಸಿದೆ. ಚುನಾವಣೆ ಶುಕ್ರವಾರ ರಾತ್ರಿ ಬೆಂಗಳೂರಿನಿಂದ ಹೊರಡುವ ಹೆಚ್ಚುವರಿ ಬಸ್‌ಗಳಲ್ಲಿ ಹೆಚ್ಚಿನ ಹೆಚ್ಚಿನವು ರವಿವಾರ ಪುನಃ ಬೆಂಗಳೂರಿಗೆ ತೆರಳಲಿವೆ. 

ಬೇಸಗೆ ರಜೆ ಪರಿಣಾಮ
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬೇಸಗೆ ರಜೆ ಇರುವುದರಿಂದ ಅನೇಕ ಮಂದಿ ದೂರದ ಊರುಗಳಿಗೆ ಪ್ರವಾಸಕ್ಕೆಂದು ತೆರಳುತ್ತಾರೆ. ಆದ್ದರಿಂದ ಸಾಮಾನ್ಯ ದಿನಕ್ಕೆ ಹೋಲಿಕೆ ಮಾಡಿದರೆ ಬಸ್‌ ಗಳಲ್ಲಿ ಹೆಚ್ಚು ರಶ್‌ ಇರುತ್ತದೆ. ಅಲ್ಲದೆ ಈ ಬಾರಿ ಮತದಾನ ಶನಿವಾರ ಆದುದರಿಂದ ರವಿವಾರ ವಾರದ ರಜೆ ದೂರದ ಊರಿನಲ್ಲಿರುವ ಹೆಚ್ಚಿನ ಮಂದಿ ಮತದಾನಕ್ಕೆಂದು ಆಗಮಿಸುತ್ತಿದ್ದಾರೆ. ಇದರಿಂದಾಗಿ ಬಸ್‌ಗಳಂತೆಯೇ ರೈಲಿನಲ್ಲಿಯೂ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.