ರಾಜ್ಯ ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ಸಾಧ್ಯತೆ
Team Udayavani, Jan 13, 2018, 6:45 AM IST
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಒಂದೇ ಹಂತದಲ್ಲಿ ನಡೆಸುವುದು ಸೂಕ್ತ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯ ಚುನಾವಣಾ ಆಯೋಗ ಅಭಿಪ್ರಾಯ ಸಲ್ಲಿಸಿದೆ.
ರಾಜ್ಯದ 224 ಕ್ಷೇತ್ರಗಳಲ್ಲೂ ಒಂದೇ ಹಂತದಲ್ಲಿ ಒಂದೇ ದಿನ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಮರ್ಥವಾಗಿದೆ. ಅದಕ್ಕೆ ಬೇಕಾದ ಎಲ್ಲ ಅಗತ್ಯ ವ್ಯವಸ್ಥೆಯೂ ಇದೆ ಎಂದು ತಿಳಿಸಿದೆ ಎನ್ನಲಾಗಿದೆ.
ಕಾನೂನು ಸುವ್ಯವಸ್ಥೆ ಪಾಲನೆ ದೃಷ್ಟಿಯಿಂದಲೂ ಒಂದೇ ಹಂತದಲ್ಲಿ ಚುನಾವಣೆ ನಡೆಸುವುದು ಸೂಕ್ತ. ಜತೆಗೆ ಒಂದು ಕ್ಷೇತ್ರದ ಮತದಾರರು ಮತ್ತೂಂದು ಕ್ಷೇತ್ರಕ್ಕೆ ಹೋಗಿ ಬೋಗಸ್ ಮತ ಹಾಕುವುದು ತಪ್ಪಲಿದೆ. ರಾಜಕೀಯ ಪಕ್ಷಗಳು ಸಹ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಒಲವು ವ್ಯಕ್ತಪಡಿಸಿವೆ ಎಂದು ಹೇಳಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ಕುಮಾರ್, ಒಂದೇ ಹಂತದಲ್ಲಿ ಚುನಾವಣೆ ನಡೆಸುವುದು ಒಳ್ಳೆಯದು. ನಾವು ಅದಕ್ಕೆ ಸಮರ್ಥರಿದ್ದೇವೆ, ನಮಗೆ ಸಾಮರ್ಥ್ಯವೂ ಇದೆ. ರಾಜಕೀಯ ಪಕ್ಷಗಳು ಎರಡು ಹಂತಗಳಲ್ಲಿ ಚುನಾವಣೆ ನಡೆಸಬೇಕು ಎಂದು ಮನವಿ ಸಲ್ಲಿಸಿಲ್ಲ. ಅಂತಿಮ ತೀರ್ಮಾನ ಕೇಂದ್ರ ಚುನಾವಣಾ ಆಯೋಗ ಕೈಗೊಳ್ಳುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ