ಎಲೆಕ್ಟ್ರಿಕ್‌ ಬಸ್‌ ಸಬ್ಸಿಡಿ: ಇಕ್ಕಟ್ಟಿಗೆ ಸಿಲುಕಿದ ಬಿಎಂಟಿಸಿ

ಎರಡನೇ ಹಂತದಲ್ಲಿ ಫೇಮ್‌-2 ಯೋಜನೆ ಜಾರಿಗೊಳಿಸಲು ಮುಂದಾದ ಕೇಂದ್ರ ಸರ್ಕಾರ

Team Udayavani, May 27, 2019, 10:12 AM IST

benglre-tdy-1..

ಬೆಂಗಳೂರು: ಎಲೆಕ್ಟ್ರಿಕ್‌ ಬಸ್‌ಗಳನ್ನು ರಸ್ತೆಗಿಳಿಸುವ ಸಂಬಂಧ ಕೇಂದ್ರ ಸರ್ಕಾರ ಎರಡನೇ ಹಂತದಲ್ಲಿ ‘ಫೇಮ್‌-2’ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಆದರೆ, ಈ ಯೋಜನೆ ಅಡಿ ಸಬ್ಸಿಡಿ ಪಡೆಯುವ ಸಂಬಂಧ ಪ್ರಸ್ತಾವನೆ ಸಲ್ಲಿಸುವ ವಿಷಯದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಇಕ್ಕಟ್ಟಿಗೆ ಸಿಲುಕಿದೆ.

ಏಕೆಂದರೆ, ‘ಫೇಮ್‌-2’ರಲ್ಲಿ ಎಲೆಕ್ಟ್ರಿಕ್‌ ಬಸ್‌ಗಳ ಖರೀದಿಗೆ ಅವಕಾಶ ಇಲ್ಲ. ಗುತ್ತಿಗೆ ರೂಪದಲ್ಲಿ ಪಡೆದ ವಾಹನಗಳಿಗೆ ಮಾತ್ರ ಸಬ್ಸಿಡಿ ನೀಡಲಾಗುವುದು ಎಂದು ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ಉಲ್ಲೇಖೀಸಲಾಗಿದೆ. ಹಾಗೊಂದು ವೇಳೆ ಪ್ರಸ್ತಾವನೆ ಸಲ್ಲಿಸಿದರೆ, ಅದು ಮೊದಲಿನಿಂದಲೂ ಗುತ್ತಿಗೆ ರೂಪದಲ್ಲಿ ಬಸ್‌ಗಳನ್ನು ಪಡೆಯುವುದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿರುವ ಸಾರಿಗೆ ಸಚಿವರ ಆಶಯಕ್ಕೆ ವಿರುದ್ಧವಾಗುತ್ತದೆ. ಹಾಗಂತ ಯೋಜನೆಯಿಂದ ದೂರ ಉಳಿದರೆ, ಅನಾಯಾಸವಾಗಿ ಕೋಟ್ಯಂತರ ರೂ. ಸಬ್ಸಿಡಿ ಕೈತಪ್ಪುತ್ತದೆ. ಜತೆಗೆ ಎಲೆಕ್ಟ್ರಿಕ್‌ ಬಸ್‌ಗಳ ಭಾಗ್ಯ ಕೂಡ ಸಿಗುವುದಿಲ್ಲ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಅಧಿಕಾರಿಗಳು ಈಗ ಇಕ್ಕಟ್ಟಿಗೆ ಸಿಲುಕಿದ್ದಾರೆ.

‘ಫೇಮ್‌’ ಮೊದಲ ಹಂತದಲ್ಲಿ 80 ಎಲೆಕ್ಟ್ರಿಕ್‌ ಬಸ್‌ಗಳನ್ನು ನೀಡಲು ಕೇಂದ್ರ ಒಪ್ಪಿಗೆ ಸೂಚಿಸಿತ್ತು. ಮುಂಗಡವಾಗಿ ಹಣ ಕೂಡ ಬಿಡುಗಡೆ ಮಾಡಿತ್ತು. ಆದರೆ, ಖರೀದಿ ಅಥವಾ ಗುತ್ತಿಗೆ ಗುದ್ದಾಟದಲ್ಲಿಯೇ ಅದು ಬಳಕೆ ಆಗಲಿಲ್ಲ. ಕೊಟ್ಟ ಅನುದಾನ ಬಳಸಿಕೊಳ್ಳದ ಬಿಎಂಟಿಸಿಗೆ ಬಡ್ಡಿಸಹಿತ ಹಿಂಪಾವತಿಸುವಂತೆ ಕೇಂದ್ರ ಸರ್ಕಾರ ತಾಕೀತು ಕೂಡ ಮಾಡಿದೆ. ಈಗ ಆ ಹಣವನ್ನು ಉಳಿಸಿಕೊಳ್ಳುವ ಕಸರತ್ತು ನಡೆದಿದೆ. ಈ ಮಧ್ಯೆಯೇ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ಮಹಾನಗರಗಳಲ್ಲಿ ಎಲೆಕ್ಟ್ರಿಕ್‌ ಬಸ್‌ಗಳಿಗಾಗಿ ಸಬ್ಸಿಡಿ ನೀಡಲು ಎರಡನೇ ಹಂತದಲ್ಲಿ ಈ ಯೋಜನೆ ಜಾರಿಗೆ ಬರುತ್ತಿದೆ.

‘ಫೇಮ್‌-2’ರಡಿ ಮುಂದಿನ ಎರಡು-ಮೂರು ವರ್ಷಗಳಲ್ಲಿ ಒಟ್ಟಾರೆ 3,500 ಕೋಟಿ ರೂ. ವೆಚ್ಚದಲ್ಲಿ ಏಳು ಸಾವಿರ ಎಲೆಕ್ಟ್ರಿಕ್‌ ಬಸ್‌ಗಳನ್ನು ರಸ್ತೆಗಿಳಿಸಲು ಉದ್ದೇಶಿಸಲಾಗಿದೆ. ಈ ಮೊದಲು ಶೇ. 60ರಷ್ಟು ಸಬ್ಸಿಡಿ ನೀಡಲಾಗುತ್ತಿತ್ತು. ಖರೀದಿ ಅಥವಾ ಗುತ್ತಿಗೆ ರೂಪದಲ್ಲಿ ಪಡೆಯಲು ಆಯ್ಕೆಗಳಿದ್ದವು. ಆದರೆ, ಎರಡನೇ ಹಂತದಲ್ಲಿ ಸಬ್ಸಿಡಿ ಮೊತ್ತಕ್ಕೆ ಕತ್ತರಿ ಹಾಕಿದ್ದು, ಗರಿಷ್ಠ 50 ಲಕ್ಷದವರೆಗೆ ಮಾತ್ರ ನೀಡಲಾಗುತ್ತಿದೆ. ಜತೆಗೆ ಗುತ್ತಿಗೆ ರೂಪದಲ್ಲೇ ಪಡೆಯಬೇಕು ಎಂದು ಷರತ್ತು ವಿಧಿಸಲಾಗಿದೆ. ಪ್ರಸ್ತಾವನೆ ಸಲ್ಲಿಸಲು ಜುಲೈವರೆಗೆ ಅವಕಾಶ ಇದೆ.

100 ಬಸ್‌ಗಳ ಖರೀದಿಗೆ ಸಿದ್ಧತೆ?: ‘ಗೊಂದಲದ ನಡುವೆಯೇ ಬಿಎಂಟಿಸಿಯು ‘ಫೇಮ್‌-2’ಗೆ ಮೊದಲದ ಹಂತದಲ್ಲಿ ಸುಮಾರು 100ರಿಂದ 150 ಎಲೆಕ್ಟ್ರಿಕ್‌ ಬಸ್‌ಗಳಿಗೆ ಸಬ್ಸಿಡಿಗಾಗಿ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆಸಿದೆ. ಮಾರ್ಗಸೂಚಿಗಳು ಬಂದ ನಂತರ ನಾವು ಪ್ರಸ್ತಾವನೆ ಸಲ್ಲಿಸುತ್ತೇವೆ. ಆಮೇಲೆ ‘ಫೇಮ್‌-2′ ತಂಡ ಶೀಘ್ರದಲ್ಲೇ ಭೇಟಿ ನೀಡಲಿದೆ. ಒಟ್ಟಾರೆ ವಾರದಲ್ಲಿ ಸ್ಪಷ್ಟ ಚಿತ್ರಣ ಹೊರಬೀಳಲಿದೆ’ ಎಂದು ಹೆಸರು ಹೇಳಲಿಚ್ಛಿಸದ ಬಿಎಂಟಿಸಿ ಅಧಿಕಾರಿಯೊಬ್ಬರು ತಿಳಿಸಿದರು.

‘ಬರುವ ನಿರ್ದೇಶಕರ ಮಂಡಳಿ ಸಭೆಯಲ್ಲಿ ಇದು ಚರ್ಚೆಗೆ ಬರಲಿದೆ. ಖರೀದಿಗೆ ಇದರಲ್ಲಿ ಅವಕಾಶ ಇಲ್ಲ ಎನ್ನುವುದನ್ನೂ ಸಭೆ ಗಮನಕ್ಕೆ ತರಲಾಗುವುದು. ಅಲ್ಲದೆ, ಸಾರಿಗೆ ಸಚಿವರು ಮತ್ತು ಅಧ್ಯಕ್ಷರೊಂದಿಗೂ ಚರ್ಚೆ ನಡೆಸಿ, ನಂತರ ತೀರ್ಮಾನಿಸಲಾಗುವುದು. ಸದ್ಯಕ್ಕೆ ಎಷ್ಟು ಬಸ್‌ಗಳ ಪೂರೈಕೆಗೆ ಪ್ರಸ್ತಾವನೆ ಸಲ್ಲಿಸಬೇಕು ಎಂಬುದು ಇನ್ನೂ ತೀರ್ಮಾನ ಆಗಿಲ್ಲ. ಇದನ್ನು ಸಚಿವರು ಅಥವಾ ಅಧ್ಯಕ್ಷರೇ ತಿಳಿಸಲಿದ್ದಾರೆ’ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಎನ್‌.ವಿ. ಪ್ರಸಾದ್‌ ‘ಉದಯವಾಣಿ’ಗೆ ಸ್ಪಷ್ಟಪಡಿಸಿದರು.

ಫೇಮ್‌-1ರ ಕತೆ:

ಫೇಮ್‌ ಇಂಡಿಯಾ ಯೋಜನೆ ಅಡಿ 80 ಬಸ್‌ಗಳನ್ನು ರಸ್ತೆಗಿಳಿಸಲು ಕೇಂದ್ರವು ಬಸ್‌ಗಳ ಪೂರೈಕೆಗೆ 14.95 ಕೋಟಿ ಹಾಗೂ ಚಾರ್ಜಿಂಗ್‌ ಸ್ಟೇಷನ್‌ ಸೇರಿದಂತೆ ಪೂರಕ ಸೌಲಭ್ಯಗಳನ್ನು ಕಲ್ಪಿಸಲು 3.73 ಕೋಟಿ ಒಳಗೊಂಡಂತೆ ಒಟ್ಟಾರೆ ಸುಮಾರು 18.68 ಕೋಟಿ ರೂ. ನೀಡಿತ್ತು. ಈವರೆಗೆ ಎಲೆಕ್ಟ್ರಿಕ್‌ ಬಸ್‌ಗಳನ್ನು ಖರೀದಿಸಬೇಕೇ ಅಥವಾ ಗುತ್ತಿಗೆ ರೂಪದಲ್ಲಿ ಪಡೆದು ಸೇವೆ ಕಲ್ಪಿಸಬೇಕೇ ಎನ್ನುವುದೇ ಅಂತಿಮವಾಗಿಲ್ಲ. ಇದರಿಂದ ರಾಜ್ಯದಲ್ಲಿ ಯೋಜನೆ ಕಗ್ಗಂಟಾಗಿದೆ. 2015ರ ಏಪ್ರಿಲ್ನಲ್ಲಿ ‘ಫೇಮ್‌’ ಯೋಜನೆ ಆರಂಭವಾಯಿತು. 795 ಕೋಟಿ ಮೊತ್ತದಲ್ಲಿ 500 ಎಲೆಕ್ಟ್ರಿಕ್‌ ಬಸ್‌ಗಳನ್ನು ರಸ್ತೆಗಿಳಿಸಲು ಕೇಂದ್ರ ಸರ್ಕಾರ ಉದ್ದೇಶಿಸಿತ್ತು. ಆದರೆ, ಈ ಪೈಕಿ ಇದುವರೆಗೆ ವಿವಿಧ ಮಹಾನಗರಗಳಲ್ಲಿ 200 ಬಸ್‌ಗಳು ಮಾತ್ರ ಕಾರ್ಯಾಚರಣೆ ಆರಂಭಿಸಿವೆ.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.