ಈಜುಕೊಳ ಕ್ಲೀನ್‌ ಮಾಡುವಾಗ ವಿದ್ಯುತ್‌ ಶಾಕ್‌!


Team Udayavani, Feb 15, 2018, 11:20 AM IST

blore-4.jpg

ಮಹದೇವಪುರ: ಈಜುಕೊಳ ಸ್ವತ್ಛಗೊಳಿಸುತ್ತಿದ್ದ ಕಾರ್ಮಿಕ ವಿದ್ಯುತ್‌ ಶಾಕ್‌ನಿಂದ ಗಾಯಗೊಂಡಿರುವ ಘಟನೆ ಕೆ.ಆರ್‌.ಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ಕೊಡಿಗೇಹಳ್ಳಿಯ ಎಸ್‌ಎಲ್‌ವಿ ಸನ್‌ಶೈನ್‌ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಕೆ.ಆರ್‌.ಪುರದ ಗಾಯಿತ್ರಿ ಬಡಾವಣೆ ನಿವಾಸಿ, ನಾಗಮಂಗಲ ಮೂಲದ ಉಮೇಶ್‌ (35) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈಜುಕೊಳ ಅಪಾರ್ಟ್‌ಮೆಂಟ್‌ನ ಕೊನೆಯ ಮಹಡಿಯ ರೂಫ್ನಲ್ಲಿದ್ದು, ಅದರ ಮೇಲೇ ಹೈಟೆನ್ಷನ್‌ ವಿದ್ಯುತ್‌ ಲೈನ್‌
ಹಾದುಹೋಗಿದೆ. ಈಜುಕೊಳ ಸ್ವತ್ಛಗೊಳಿಸಲು ಉಮೇಶ್‌ ಕಬ್ಬಿಣದ ಹಿಡಿಕೆಯಿರುವ ಉಪಕರಣ ಬಳಸಿದ್ದರು. ಒಂದು ಹಂತದಲ್ಲಿ ಕೈಲಿದ್ದ ಪಕರಣವನ್ನು ಉಮೇಶ್‌ ಮೇಲಕ್ಕೆತ್ತಿದ್ದು, ಅದು ಹೈಟೆನ್ಷನ್‌ ವೈರ್‌ಗೆ ತಗುಲಿದೆ. ತಕ್ಷಣ ಉಮೇಶ್‌ ಮೈಯ್ಯಲ್ಲಿ ವಿದ್ಯುತ್‌ ಪ್ರವಹಿಸಿದೆ. ಪರಿಣಾಮ ಮುಖ, ಹೊಟ್ಟೆ, ತೊಡೆ ಸೇರಿದಂತೆ ದೇಹದ ಬಹುತೇಕ ಭಾಗದಲ್ಲಿ ಸುಟ್ಟ ಗಾಯಗಳಾಗಿವೆ.

ಆಗಿದ್ದೇನು?: ಕೊಡಿಗೇಹಳ್ಳಿಯಲ್ಲಿನ ನಾಲ್ಕು ಮಹಡಿಯ ಎಸ್‌ಎಲ್‌ವಿ ಸನ್‌ ಶೈನ್‌ ಅಪಾರ್ಟ್‌ಮೆಂಟ್‌ನ ರೂಫ್ ನಲ್ಲಿರುವ ಈಜುಕೊಳದ ಪೈಪ್‌ಲೈನ್‌ ಕಟ್ಟಿಕೊಂಡು ಒಂದು ತಿಂಗಳಾಗಿದ್ದು, ಕೊಳದ ನೀರು ಬದಲಿಸಲಾದೆ ನೀರೆಲ್ಲಾ ಕೊಳಕಾಗಿತ್ತು. ಪೂಲ್‌ ಸ್ವತ್ಛ ಮಾಡಿಸುವಂತೆ ಅಪಾರ್ಟ್‌ಮೆಂಟ್‌ ಮಾಲೀಕರಿಗೆ ಹೇಳಿ ಹೇಳಿ ಬೇಸತ್ತಿದ್ದ ನಿವಾಸಿಗಳು, ಈಜುಕೊಳ ಸ್ವತ್ಛಗೊಳಿಸಲು ಉಮೇಶ್‌ನನ್ನು ಕರೆಸಿದ್ದರು. ಅದರಂತೆ ಉಮೇಶ್‌ ಈಜುಕೊಳ ಕ್ಲೀನ್‌ ಮಾಡುವಾಗ ಅತೀ ಕಡಿಮೆ ಅಂತರದಲ್ಲಿ ಹಾದುಹೋಗಿದ್ದ
ಹೈಟೆನ್ಷನ್‌ ವಿದ್ಯುತ್‌ ತಂತಿಗೆ ಉಮೇಶ್‌ ಕೈಲಿದ್ದ ಕಬ್ಬಿಣದ ಹಿಡಿಕೆಯ ಉಪಕರಣ ತಗುಲಿದೆ. ಪರಿಣಾಮ ಮೊದಲೇ ನೀರಿನಲ್ಲಿ ನಿಂತಿದ್ದ ಉಮೇಶ್‌ ಮೈಯ್ಯಲ್ಲಿ ವಿದ್ಯುತ್‌ ಪ್ರವಹಿಸಿದೆ. ಉಮೇಶ್‌ ಮೈಮೇಲಿದ್ದ ಬಟ್ಟೆಗಳು ಹರಿದು ಚಿಂದಿಯಾಗಿವೆ. ದೇಹದ ಬಹುತೇಕ ಭಾಗ ಸುಟ್ಟುಹೋಗಿದೆ. ಕೂಡಲೆ ನೆರವಿಗೆ ಬಂದ ಅಪಾರ್ಟ್‌ಮೆಂಟ್‌ ನಿವಾಸಿಗಳು, ಉಮೆಶ್‌ನನ್ನು ವೈಟ್‌ಫೀಲ್ಡ್‌ನ ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

45 ಪ್ಲ್ಯಾಟ್‌ಗಳಿರುವ ಎಸ್‌ಎಲ್‌ವಿ ಸನ್‌ಶೈನ್‌ ಅಪಾರ್ಟ್‌ಮೆಂಟ್‌ನಲ್ಲಿ 35 ಕುಟುಂಬಗಳು ವಾಸಿವಾಗಿವೆ. ನಿಯಮ ಉಲ್ಲಂ ಸಿ ಹೈಟೆನ್ಷನ್‌ ಲೈನ್‌ನ ಕೆಳಗೇ ಸಮುತ್ಛಯ ನಿರ್ಮಿಸಿರುವುದರಿಂದ ನಿವಾಸಿಗಳು ಭಯದಲ್ಲೇ ದಿನ ದೂಡುತ್ತಿದ್ದಾರೆ. ಲೈನ್‌ ತೆರವಿಗೆ ಅಥವಾ ಅದರಿಂದಾಗುವ ಅಪಾಯ ತಡೆಯಲು ಕ್ರಮ ಕೈಗೊಳ್ಳಿ ಎಂದು ಹೇಳಿದರೂ ಕಟ್ಟಡ ಮಾಲೀಕ ಕಿವಿ ಮೇಲೆ ಹಾಕಿಕೊಳ್ಳುತ್ತಿಲ್ಲ ಎಂದು ನಿವಾಸಿಗಳು ದೂರಿದ್ದಾರೆ. 

ಇನ್ನೊಂದೆಡೆ ಹೈಟೆನ್ಷನ್‌ ಲೈನ್‌ ಕೆಳಗೇ ಈಜುಕೊಳ ನಿರ್ಮಿಸಿರುವುದರಿಂದಲೇ ಅವಘಡ ಸಂಭವಿಸಿದೆ ಎಂದು ಸ್ಥಳೀಯ ಅರೋಪಿಸಿದ್ದಾರೆ.
ಪೂಲ್‌ನಿಂದ ಕೈಗೆಟುಕುವ ಅಂತರದಲ್ಲಿ ಹಾದು ಹೋಗಿರುವ ಹೈಟೆನ್ಷನ್‌ ಲೈನ್‌  ಮಹದೇವಪುರದ ಎಸ್‌ಎಲ್‌ವಿ ಸನ್‌ಶೈನ್‌ ಅಪಾರ್ಟ್‌ಮೆಂಟ್‌ ನಲ್ಲಿ ಘಟನೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.