ಮಳೆಗಾಲದಲ್ಲೇ ವಿದ್ಯುತ್‌ ಬರ; ಉತ್ಪಾದನೆ ಕ್ಷೀಣ


Team Udayavani, Aug 10, 2017, 7:30 AM IST

power-10-2017.jpg

ಬೆಂಗಳೂರು: ರಾಜ್ಯದಲ್ಲಿ ಈವರೆಗಿನ ಮಳೆ ಕೊರತೆಯಿಂದಾಗಿ ಸೆಪ್ಟೆಂಬರ್‌ನಿಂದ ಮುಂದಿನ ವರ್ಷ ಮೇ ವರೆಗೆ ಪರಿಸ್ಥಿತಿ 
ನಿಭಾಯಿಸಲು ನಿತ್ಯ 750 ಮೆಗಾವ್ಯಾಟ್‌ ಅಲ್ಪಾವಧಿ ವಿದ್ಯುತ್‌ ಖರೀದಿಸುವ ಸರ್ಕಾರದ ಮನವಿಗೆ ಪ್ರತಿಯಾಗಿ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗವು 500 ಮೆಗಾವ್ಯಾಟ್‌ ವಿದ್ಯುತ್‌ ಖರೀದಿಗಷ್ಟೇ ಹಸಿರು ನಿಶಾನೆ ತೋರಿದೆ.

ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿ ಆಯೋಗವು 500 ಮೆಗಾವ್ಯಾಟ್‌ ಅಲ್ಪಾವಧಿ ವಿದ್ಯುತ್‌ ಖರೀದಿಗೆ ಅನುಮತಿ
ನೀಡಿದೆ. ಆದರೆ ಪರಿಸ್ಥಿತಿಗೆ ಅನುಗುಣವಾಗಿ ಮಂಜೂರಾದ ಪ್ರಮಾಣದ ಶೇ.25ರಷ್ಟು ಅಂದರೆ ಕನಿಷ್ಠ 375 ಮೆಗಾವ್ಯಾಟ್‌
ಹಾಗೂ ಗರಿಷ್ಠ 625 ಮೆಗಾವ್ಯಾಟ್‌ವರೆಗೆ ಖರೀದಿಸಲು ಅವಕಾಶ ಕಲ್ಪಿಸಿದೆ.

ರಾಜ್ಯದಲ್ಲಿ ಈವರೆಗೆ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆಯಾಗದ ಕಾರಣ ಜಲವಿದ್ಯುತ್‌ ಘಟಕಗಳಿರುವ ಜಲಾಶಯಗಳಲ್ಲಿ ನೀರಿನ ಪ್ರಮಾಣ ಬಹಳ ಕಡಿಮೆ ಇದೆ. ಇದರಿಂದಾಗಿ ಮಳೆಗಾಲದಲ್ಲಿ ಗರಿಷ್ಠ ಪ್ರಮಾಣದಲ್ಲಿ ಉತ್ಪಾದನೆಯಾಗುತ್ತಿದ್ದ ಜಲವಿದ್ಯುತ್‌ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಇನ್ನೊಂದೆಡೆ ಉಷ್ಣ ವಿದ್ಯುತ್‌ ಸ್ಥಾವರಗಳಲ್ಲೂ ಬಾಯ್ಲರ್‌ಗಳನ್ನು ತಂಪುಗೊಳಿಸಲು ಅಗತ್ಯ ಪ್ರಮಾಣದ ನೀರಿನ ವ್ಯವಸ್ಥೆಯಿಲ್ಲದ ಕಾರಣ ಆಗಾಗ್ಗೆ ಕೆಲ ಘಟಕಗಳನ್ನು ಸ್ಥಗಿತಗೊಳಿಸಲಾಗುತ್ತಿದೆ.

ಬೇಡಿಕೆ ಏರಿಕೆ, ಉತ್ಪಾದನೆ ಇಳಿಕೆ: ಮಳೆ ಅಭಾವವಿದ್ದರೂ ಉತ್ತಮ ಬಿತ್ತನೆಯಾಗಿರುವುದರಿಂದ ಕೃಷಿ ಪಂಪ್‌ ಸೆಟ್‌ ಬಳಕೆಯೂ ಹೆಚ್ಚಾಗಿರುವುದರಿಂದ ಮಳೆಗಾಲದಲ್ಲೂ ವಿದ್ಯುತ್‌ ಬೇಡಿಕೆ ಏರುಮುಖವಾಗಿತ್ತು. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಸ್ಥಿತಿ ನಿರ್ವಹಣೆಗಾಗಿ ಸೆಪ್ಟೆಂಬರ್‌ನಿಂದ ಮೇವರೆಗೆ 9 ತಿಂಗಳ ಕಾಲ 1000 ಮೆಗಾವ್ಯಾಟ್‌ ಅಲ್ಪಾವಧಿ ವಿದ್ಯುತ್‌ ಖರೀದಿಗೆ ನಿರ್ಧರಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿತ್ತು.

ಸರ್ಕಾರದಿಂದಲೇ ಖರೀದಿ ಪ್ರಮಾಣ ಇಳಿಕೆ: ಒಂಬತ್ತು ತಿಂಗಳ ಕಾಲ 1000 ಮೆಗಾವ್ಯಾಟ್‌ ಖರೀದಿಸಲು ಸರ್ಕಾರ ನಿರ್ಧರಿಸಿದ ಹಿನ್ನೆಲೆಯಲ್ಲಿ ಪವರ್‌ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್‌ (ಪಿಸಿಕೆಎಲ್‌) ಕೆಇಆರ್‌ಸಿಗೆ ಪ್ರಸ್ತಾವ ಸಲ್ಲಿಸಿತ್ತು. ನಂತರ ಮತ್ತೂಂದು ಪ್ರಸ್ತಾವ ಸಲ್ಲಿಸಿ 750 ಮೆಗಾ ವ್ಯಾಟ್‌ ಖರೀದಿಗೆ ಅನುಮತಿ ಕೋರಲಾಗಿತ್ತು. ಬಳಿಕ ಕೆಇಆರ್‌ಸಿ 500 ಮೆಗಾವ್ಯಾಟ್‌ ಖರೀದಿಗೆ ಅನುಮತಿ ನೀಡಿದೆ.

ರಾಜ್ಯದಲ್ಲಿ ಈವರೆಗಿನ ಮಳೆ ಅಭಾವದ ಹಿನ್ನೆಲೆಯಲ್ಲಿ ಮೊದಲಿಗೆ 1000 ಮೆಗಾವ್ಯಾಟ್‌ ಬಳಿಕ 750 ಮೆಗಾವ್ಯಾಟ್‌ ಅಲ್ಪಾವಧಿ
ವಿದ್ಯುತ್‌ ಖರೀದಿಗೆ ಪ್ರಸ್ತಾವ ಸಲ್ಲಿಕೆಯಾಗಿತ್ತು. ರಾಜ್ಯದ ಸದ್ಯದ ಸ್ಥಿತಿ, ಜಲಾಶಯಗಳಲ್ಲಿನ ನೀರಿನ ಸಂಗ್ರಹ, ಉಷ್ಣ ವಿದ್ಯುತ್‌,
ಪವನ- ಸೌರ, ಜಲ ವಿದ್ಯುತ್‌ ಉತ್ಪಾದನೆ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು 500 ಮೆಗಾವ್ಯಾಟ್‌ ಖರೀದಿಗೆ ಅನುಮತಿ
ನೀಡಲು ಒಪ್ಪಿಗೆ ನೀಡಲಾಗಿದೆ ಎಂದು ಕೆಇಆರ್‌ಸಿ ಅಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ “ಉದಯವಾಣಿ’ಗೆ ತಿಳಿಸಿದರು.

ಸೆಪ್ಟೆಂಬರ್‌ನಿಂದ ಮೇವರೆಗೆ ಪರಿಸ್ಥಿತಿ ನಿರ್ವಹಣೆಗಾಗಿ 500 ಮೆಗಾವ್ಯಾಟ್‌ ಖರೀದಿಗೆ ಅನುಮತಿ ನೀಡಿದ್ದರೂ ಶೇ.25ರಷ್ಟು
ಹೆಚ್ಚು ಅಥವಾ ಕಡಿಮೆ ಪ್ರಮಾಣದ ಖರೀದಿಗೆ ಅವಕಾಶವಿರಲಿದೆ. ಸದ್ಯ ಪವನಶಕ್ತಿ ಮೂಲದ ವಿದ್ಯುತ್‌ ಉತ್ಪಾದನೆ ಉತ್ತಮ ಪ್ರಮಾಣದಲ್ಲಿದ್ದು, ಸೆಪ್ಟೆಂಬರ್‌ ವೇಳೆಗೆ ಸ್ಥಗಿತಗೊಳ್ಳಲಿರುವ ಹಿನ್ನೆಲೆಯಲ್ಲಿ ಆ ಕೊರತೆ ನೀಗಿಸಲು 500 ಮೆಗಾವ್ಯಾಟ್‌ ಖರೀದಿಗೆ ಅವಕಾಶ ನೀಡಲಾಗಿದೆ.  ಅಕ್ಟೋಬರ್‌ನಲ್ಲಿ ಮತ್ತೂಮ್ಮೆ ಪರಿಶೀಲನೆ ನಡೆಸಿ ಅಂದಿನ ಪರಿಸ್ಥಿತಿಗೆ ಸೂಕ್ತವಾದ ಕ್ರಮ ಕೈಗೊಳ್ಳಲಾಗುವುದು ಹೇಳಿದರು.

ಸದ್ಯ 8900 ಮೆಗಾವ್ಯಾಟ್‌ ಪೂರೈಕೆ
ರಾಜ್ಯಾದ್ಯಂತ ಬೇಡಿಕೆಗೆ ತಕ್ಕಂತೆ ವಿದ್ಯುತ್‌ ಪೂರೈಕೆಯಾಗುತ್ತಿದೆ. ನಿತ್ಯ 8,800ರಿಂದ 8,900 ಮೆಗಾವ್ಯಾಟ್‌ ವಿದ್ಯುತ್‌ಗೆ ಬೇಡಿಕೆಯಿದ್ದು, ಅಷ್ಟು ಪ್ರಮಾಣದಲ್ಲಿ ಪೂರೈಕೆಯಾಗುತ್ತಿದೆ. ಕೇಂದ್ರ ಸರ್ಕಾರದ ಗ್ರಿಡ್‌ನಿಂದ 2000 ಮೆಗಾವ್ಯಾಟ್‌ ಜತೆಗೆ ಜಲವಿದ್ಯುತ್‌, ಉಷ್ಣ ಸ್ಥಾವರಗಳು ಹಾಗೂ ಪವನಶಕ್ತಿ ಮೂಲದಿಂದ ತಲಾ 2000 ಮೆಗಾವ್ಯಾಟ್‌ ವಿದ್ಯುತ್‌ ಪೂರೈಕೆಯಾಗುತ್ತಿದ್ದು, ಸೌರಶಕ್ತಿ ಮೂಲದಿಂದ 500 ಮೆಗಾವ್ಯಾಟ್‌ ವಿದ್ಯುತ್‌ ವಿತರಣೆಯಾಗುತ್ತಿದೆ. ಮಳೆ ಕೊರತೆಯಿಂದಾಗಿ ಕೃಷಿಪಂಪ್‌ ಸೆಟ್‌ ಬಳಕೆಯೂ ಹೆಚ್ಚಾಗಿರುವುದರಿಂದ ಬೇಡಿಕೆ ಏರಿಕೆಯಾಗುತ್ತಿದೆ. ಇಷ್ಟಾದರೂ ಬೇಡಿಕೆಗೆ ತಕ್ಕಂತೆ ವಿದ್ಯುತ್‌ ಪೂರೈಕೆಯಾಗುತ್ತಿದೆ ಎಂದು ಕೆಪಿಟಿಸಿಎಲ್‌ ನಿರ್ದೇಶಕ (ಪ್ರಸರಣ) ನಾಗೇಶ್‌ ತಿಳಿಸಿದರು.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.