ಎಲಿವೇಟೆಡ್‌ ರಸ್ತೆಯಲ್ಲಿ ಬಸ್‌ಗಳಿಗೆ ಪ್ರತ್ಯೇಕ ಪಥ


Team Udayavani, May 15, 2019, 3:07 AM IST

elivated

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಎಲಿವೇಟೆಡ್‌ ಕಾರಿಡಾರ್‌ಗಳಲ್ಲಿ ಸಾರ್ವಜನಿಕ ಸಾರಿಗೆಗೆ ಆದ್ಯತೆ ನೀಡಲು ಉದ್ದೇಶಿಸಿದ್ದು, ಬಸ್‌ ಸಂಚಾರಕ್ಕಾಗಿಯೇ ಪ್ರತ್ಯೇಕ ಪಥ ನಿರ್ಮಿಸಲು ನಿರ್ಧರಿಸಲಾಗಿದೆ.

ಎತ್ತರಿಸಿದ ಸೇತುವೆಗಳು ಖಾಸಗಿ ವಾಹನಗಳಿಗೆ ಉತ್ತೇಜನ ನೀಡುತ್ತವೆ ಎಂಬ ಆರೋಪ ಇದೆ. ಆದರೆ, ನಗರದಲ್ಲಿ ತಲೆಯೆತ್ತಲಿರುವ ಆರು ಎಲಿವೇಟೆಡ್‌ ಕಾರಿಡಾರ್‌ಗಳು ಸಾರ್ವಜನಿಕ ಸಾರಿಗೆಗಾಗಿ ಪ್ರತ್ಯೇಕ ಪಥವನ್ನು ಮೀಸಲಿಡಲಿವೆ ಎಂದು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ (ಕೆಆರ್‌ಡಿಸಿಎಲ್‌) ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿದ ಕೆಆರ್‌ಡಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಎಸ್‌. ಶಿವಕುಮಾರ್‌, “ಉದ್ದೇಶಿತ ಎಲಿವೇಟೆಡ್‌ ಕಾರಿಡಾರ್‌ ನಿರ್ಮಾಣಕ್ಕೆ ಸಂಬಂಧಿಸಿದ ಯೋಜನೆಯು ನಾಲ್ಕು ಹಂತಗಳಲ್ಲಿ ಅನುಷ್ಠಾನಕ್ಕೆ ಬರಲಿದೆ.

ಸಂಚಾರದಟ್ಟಣೆ ನಿವಾರಣೆ, ತಡೆರಹಿತ ಸಾರಿಗೆ ಹಾಗೂ ಪ್ರಯಾಣ ಸಮಯ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ವಿನ್ಯಾಸಗೊಳಿಸಲಾಗುತ್ತದೆ. ಇದರಲ್ಲಿ ಸಾರ್ವಜನಿಕ ಸಾರಿಗೆಗೆ ಪ್ರತ್ಯೇಕ ಪಥ ನಿರ್ಮಿಸಲಾಗುತ್ತಿದೆ’ ಎಂದರು.

3 ಕಿ.ಮೀ.ಗೊಂದು ನಿಲ್ದಾಣ; ಬೈಕ್‌ಗಳಿಗಿಲ್ಲ ಪ್ರವೇಶ: ಅಲ್ಲದೆ, ಪ್ರತಿ ಮೂರು ಕಿ.ಮೀ.ಗೆ ಒಂದರಂತೆ ಬಸ್‌ ನಿಲ್ದಾಣಗಳನ್ನು ಹೊಂದಿರುತ್ತವೆ. ಈ ಕಾರಿಡಾರ್‌ಗಳು ಸಮಯ ಉಳಿತಾಯದ ಜತೆಗೆ ಜೀವರಕ್ಷಕ ಕಾರಿಡಾರ್‌ಗಳಾಗಿ ನಿರ್ಮಾಣಗೊಳ್ಳುತ್ತವೆ.

ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಸಂಚಾರವನ್ನು ಇಲ್ಲಿ ನಿರ್ಬಂಧಿಸಲಾಗುವುದರಿಂದ ಅಪಘಾತಗಳ ಸಾಧ್ಯತೆ ಪ್ರಮಾಣ ಕಡಿಮೆ ಇರಲಿದೆ. ಕಡಿಮೆ ಸಿಗ್ನಲ್‌ಗ‌ಳು ಇರಲಿವೆ ಮತ್ತು ಅಡೆತಡೆಗಳು ಕಡಿಮೆ ಇರುವುದರಿಂದ ವಾಹನಗಳು ದಟ್ಟಣೆಯಲ್ಲಿ ನಿಲ್ಲುವುದು ಕಡಿಮೆಯಾಗುತ್ತದೆ. ಹಾಗೂ ಇದರಿಂದ ಬೆಂಗಳೂರು ನಗರದಲ್ಲಿ ವಾಯು ಮಾಲಿನ್ಯ ಕಡಿಮೆಯಾಗಲಿದೆ ಎಂದೂ ಅವರು ಸ್ಪಷ್ಟಪಡಿಸಿದರು.

“ನಾವು ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಎಲಿವೇಟೆಡ್‌ ಕಾರಿಡಾರ್‌ ಯೋಜನೆಯು ನಗರದ ಸಂಚಾರದಟ್ಟಣೆ ಸಮಸ್ಯೆಗೆ ಪ್ರಮುಖ ಪರಿಹಾರ ಆಗಲಿದೆ. ರೈಲು ಜಾಲ, “ನಮ್ಮ ಮೆಟ್ರೋ’ ಎರಡೂ ಹಂತಗಳು, ಮೇಲ್ಸೇತುವೆಗಳು, ಆರ್‌ಒಬಿಗಳು ಮತ್ತು ವರ್ತುಲ ರಸ್ತೆಗಳೊಂದಿಗೆ ಈ ಎಲಿವೇಟೆಡ್‌ ಕಾರಿಡಾರ್‌ ಕೂಡ ಬರುವುದರಿಂದ ಬೆಂಗಳೂರು ನಗರದ ಸಾರಿಗೆ ಸಮಸ್ಯೆಗಳನ್ನು ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರತಿ 2 ಮೀ.ಗೆ ಒಂದು ಕಾರು!: ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿ ಎರಡು ಮೀಟರ್‌ಗೊಂದು ಕಾರು ರಸ್ತೆಯಲ್ಲಿರುತ್ತದೆ! ಹೌದು, ಇದನ್ನು ಸ್ವತಃ ಕೆಆರ್‌ಡಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್‌. ಶಿವಕುಮಾರ್‌ ತಿಳಿಸಿದ್ದಾರೆ. ನಗರದ ಗಣನೀಯ ಪ್ರಮಾಣದ ಬೆಳವಣಿಗೆಯು ಹಲವಾರು ಸಮಸ್ಯೆಗಳನ್ನು ಸೃಷ್ಟಿಸಿದೆ. ಇದರಲ್ಲಿ ಸಾರಿಗೆ ಮೂಲಸೌಕರ್ಯ ಪ್ರಮುಖವಾದುದು.

ಪ್ರಸ್ತುತ ಪ್ರತಿ ಕಿ.ಮೀ. ರಸ್ತೆಯಲ್ಲಿ 500ಕ್ಕೂ ಹೆಚ್ಚು ಕಾರುಗಳನ್ನು ಇಲ್ಲಿ ಕಾಣಬಹುದು. ಇದರರ್ಥ ಪ್ರತಿ 2 ಮೀಟರ್‌ಗೆ ಒಂದು ಕಾರು ರಸ್ತೆಯಲ್ಲಿರುತ್ತದೆ. ಇದು ನಗರದ ರಸ್ತೆಗಳ ಪರಿಸ್ಥಿತಿ. ಟ್ರಾಫಿಕ್‌ ಸಮಸ್ಯೆ ದಿನದಿಂದ ದಿನಕ್ಕೆ ದೈತ್ಯವಾಗಿ ಬೆಳೆಯುತ್ತಿದ್ದು, ಪರಿಹಾರ ಸಂಕೀರ್ಣವಾಗುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.