ಪ್ರಧಾನಿಯಿಂದ ಎಮೋಷನಲ್ ಬ್ಲಾಕ್ಮೇಲ್
Team Udayavani, Dec 12, 2017, 12:22 PM IST
ಬೆಂಗಳೂರು: ಕಾಂಗ್ರೆಸ್ನವರು ಪಾಕಿಸ್ತಾನದೊಂದಿಗೆ ಸೇರಿಕೊಂಡು ತಮ್ಮ ವಿರುದ್ಧ ಸುಪಾರಿ ನೀಡಿದ್ದರು ಎಂದು ಆಧಾರ ರಹಿತ ಹೇಳಿಕೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಚುನಾವಣೆಯಲ್ಲಿ ಜನರನ್ನು ಭಾವನಾತ್ಮಕವಾಗಿ ಬ್ಲಾಕ್ಮೇಲ್ ಮಾಡುತ್ತಿದ್ದಾರೆ ಎಂದು ಸಂಸದ ವೀರಪ್ಪ ಮೋಯಿಲಿ ಆರೋಪಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಗುಜರಾತ್ನಲ್ಲಿ ಆಡಳಿತ ವಿರೋಧಿ ಅಲೆಯಿಂದ ಪ್ರಧಾನಿ ಮೋದಿ ಹಾಗೂ ಬಿಜೆಪಿ ನಾಯಕರು ಭಯಭೀತರಾಗಿದ್ದಾರೆ. ದೇಶದ ಪ್ರಧಾನಿ ಕೊಲ್ಲಲು ಯಾರಾದರೂ ಸುಪಾರಿ ಕೊಟ್ಟಿದ್ದಾರೆ ಎಂದರೆ, ಒಂದು ವರ್ಷದಿಂದ ಪ್ರಧಾನಿಗೆ ಗೊತ್ತಿದ್ದರೂ ಅದನ್ನು ಇಲ್ಲಿಯಯವರೆಗೆ ಯಾಕೆ ಬಹಿರಂಗಪಡಿಸಿಲ್ಲವೆಂದು ಪ್ರಶ್ನಿಸಿದರು. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ಚುನಾವಣೆ ವೇಳೆ ಜನರ ಅನುಕಂಪ ಗಳಿಸಲು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು.
ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಸುಳ್ಳು ಹೇಳುವಂತೆ ಅವರ ಪಕ್ಷದ ಕಾರ್ಯಕರ್ತರಿಗೆ ಹೇಳುತ್ತಿದ್ದಾರೆ. ಬಿಜೆಪಿಯವರು ಸುಳ್ಳು ಹೇಳಿಯೇ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ನರೇಂದ್ರ ಮೋದಿ ಕೂಡ 2014 ರ ಚುನಾವಣೆ ವೇಳೆ ಪ್ರತಿಯೊಬ್ಬರ ಅಕೌಂಟ್ಗೂ 15 ಲಕ್ಷ ಹಣ ನೀಡುವುದಾಗಿ ಸುಳ್ಳು ಹೇಳಿ ಮತ ಪಡೆದಿದ್ದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್