ಕೌಶಲ್ಯ ಅಭಿವೃದ್ಧಿಗಾಗಿ ಹೊಸ ಪರಿಕಲ್ಪನೆಗೆ ಒತ್ತು

ದೃಶ್ಯಕಲಾ ವಿದ್ಯಾರ್ಥಿಗಳಿಗೆ ವಿಶಿಷ್ಟ ಯೋಜನೆ | ಪ್ರತಿಭೆ ಹೆಚ್ಚಿಸಿಕೊಳ್ಳಲು ಅವಕಾಶ

Team Udayavani, Oct 21, 2021, 10:32 AM IST

ಲಲಿತಕಲಾ

Representative Image used

ಬೆಂಗಳೂರು: ದೃಶ್ಯಕಲಾ ವಿದ್ಯಾರ್ಥಿಗಳಲ್ಲಿ ಕೌಶಲ್ಯವನ್ನು ವೃದ್ಧಿಸುವ ದೃಷ್ಟಿಯಿಂದ ಕರ್ನಾಟಕ ಲಲಿತಕಲಾ ಅಕಾಡೆಮಿ ಮತ್ತು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಜತೆಗೂಡಿ “ಹೊಸ ಸಾಧನೆಗಳು ಹೊಸ ಪರಿಕಲ್ಪನೆಗಳು” ಯೋಜನೆ ಸೃಜಿಸಿದೆ.

ವಿದ್ಯಾರ್ಥಿಗಳು ಕೇವಲ ಚಿತ್ರ ಬಿಡಿಸುವುದರಲ್ಲಷ್ಟೇ ಅಲ್ಲದೆ ಸಿನಿಮಾ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದೃಶ್ಯಕಲೆ ಸಂಬಂಧ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಲು ಅವಕಾಶ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಆಧುನಿಕ ತಂತ್ರಜ್ಞಾನವನ್ನು ಒಳಗೊಂಡ ಕೌಶಲ್ಯ ತರಬೇತಿ ಇದರಲ್ಲಿದ್ದು, ದೃಶ್ಯಕಲಾ ವಿದ್ಯಾರ್ಥಿಗಳು ಹೊಸತನಕ್ಕೆ ತೆರೆದುಕೊಳ್ಳಲು ಲಲಿತಕಲಾ ಮತ್ತು ಶಿಲ್ಪಕಲಾ ಅಕಾಡೆಮಿಗಳು ಕ್ರಿಯಾಯೋಜನೆ ರೂಪಿಸಿವೆ.

ಈ ಯೋಜನೆಯಲ್ಲಿ ಅಧ್ಯಾಪಕರಿಗೆ ಮೊದಲು ಕೌಶ್ಯದ ಬಗ್ಗೆ ಮಾಹಿತಿ ನೀಡುವುದು ಬಳಿಕ ಅವರು ತರಗತಿಗಳಲ್ಲಿ ಕಲಿಕೆ ಜತೆಗೆ ವಿದ್ಯಾರ್ಥಿಗಳಿಗೆ ಕೌಶಲ್ಯ ಹೆಚ್ಚಿಸುವ ನಿಟ್ಟಿನಲ್ಲಿ ಪಠ್ಯಕ್ರಮವನ್ನು ಹೊಂದಿಸಲಾ ಗಿದೆ. ರಾಜ್ಯದ ವಿವಿಧ ಭಾಗದ ಸುಮಾರು 70 ದೃಶ್ಯಕಲಾ ಕಾಲೇಜು ಅಧ್ಯಾಪಕರು ಇದರಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ;- ತಿಂಗಳಿಗೆ 75 ಸಾವಿರ ರೂ. ದುಡಿಯುತ್ತಿದೆ ಒಂದು ವರ್ಷದ ಮಗು! ಹೇಗೆ ಗೊತ್ತಾ?

ಜತೆಗೆ ಮೈಸೂರು, ಬೆಂಗಳೂರು, ಕುವೆಂಪು, ಕಲಬರುಗಿ ವಿಶ್ವವಿದ್ಯಾನಿಲಯ ಹಾಗೂ ಹಂಪಿ ಸೇರಿದಂತೆ ಸುಮಾರು 80 ಅಧ್ಯಾಪಕರುಗಳಿಗೆ ಕೌಶಲ್ಯ ತರಬೇತಿ ನೀಡಲಾಗುತ್ತದೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಿ.ಮಹೇಂದ್ರ ತಿಳಿಸಿದರು. ನಮ್ಮಲ್ಲಿರುವ ಬಹುತೇಕ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಕೊರತೆಯಿದೆ. ಜತೆಗೆ ಕೇವಲ ಚಿತ್ರಕಲೆ ಬಿಡಿಸುವುದಕ್ಕೆ ಅವರು ಸೀಮಿತವಾಗಿದ್ದಾರೆ.

ಸಿನಿಮಾ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ದೃಶ್ಯಕಲೆಗೆ ಅವಕಾಶಗಳಿವೆ. ಆದರೆ, ಆ ಅವಕಾಶಗಳನ್ನು ಗಿಟ್ಟಿಸಿ ಕೊಳ್ಳಲು ಕೌಶಲ್ಯ ತರಬೇತಿ ಜತೆಗೆ ಉದ್ಯೋಗ ವಕಾಶಗಳ ಬಗ್ಗೆ ಮಾಹಿತಿ ಕೂಡ ಬೇಕಾಗುತ್ತದೆ. ಅದನ್ನು ನೀಡುವ ನಿಟ್ಟಿನಲ್ಲಿ ಎರಡೂ ಅಕಾಡೆಮಿಗಳು ಈ ಯೋಜನೆ ರೂಪಿಸಿವೆ ಎಂದರು.

ಚಿತ್ರಕಲಾ ಕ್ಷೇತ್ರದ ಆಸಕ್ತಿ ಇದ್ದವರು ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಅಂತಹ ಸಾಧಕ ರನ್ನು ಕೂಡ ಕಾರ್ಯಾಗಾರಕ್ಕೆ ಆಹ್ವಾನ ನೀಡುವ ಇರಾದೆಯಿದೆ ಎಂದು ಲಲಿತಕಲಾ ಅಕಾಡೆಮಿ ರಿಜಿಸ್ಟ್ರಾರ್‌ ಚಂದ್ರಶೇಖರ್‌ ಮಾಹಿತಿ ನೀಡಿದ್ದಾರೆ.

“ಹೊಸ ಸಾಧನೆಗಳು ಹೊಸ ಪರಿಕಲ್ಪನೆ ಗಳು’ಯೋಜನೆಯಡಿ ಕಲಬುರಗಿಯಲ್ಲಿ ಅಧ್ಯಾ ಪಕರ ಕಾರ್ಯಾಗಾರ ಹಮ್ಮಿಕೊಳ್ಳಲು ಈಗಾಗಲೇ ಅಕಾಡೆಮಿಗಳು ತೀರ್ಮಾನಿಸಿವೆ. ಅ.23ರಂದು ಅಳಂದ ರಸ್ತೆಯ ಅಜೀಂ ಪ್ರೇಮ್‌ಜೀ ಫೌಂಡೇಷನ್‌ ನಲ್ಲಿ ಕಾರ್ಯಾಗಾರ ನಡೆಸಲು ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿದೆ.

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಾಧಕ ಕಲಾವಿದರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಚಿತ್ರಕಲಾ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕರ್ನಾಟಕ ಲಲಿತಕಲಾ ಅಕಾಡೆಮಿ ಮತ್ತು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಜತೆಗೂಡಿ “ಹೊಸ ಸಾಧನೆಗಳು ಹೊಸ ಪರಿಕಲ್ಪನೆಗಳು’ ಯೋಜನೆ ರೂಪಿಸಲಾಗಿದೆ. ಚಿತ್ರಕಲೆಗೆ ಸಂಬಂಧ ಉದ್ಯೋಗ ಹಲವು ಕ್ಷೇತ್ರಗಳಲ್ಲಿವೆ. ಅವುಗಳ ಬಗ್ಗೆ ಯುವ ಸಮೂಹಕ್ಕೆ ಮಾಹಿತಿ ನೀಡಬೇಕಾಗಿದೆ. – ವೀರಣ್ಣ ಮಾ.ಅರ್ಕಸಾಲಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ.

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.