

Team Udayavani, Apr 18, 2018, 7:00 AM IST
ಬೆಂಗಳೂರು: ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಜಾರಿಯಾಗುವುದು ಅನುಮಾನ ಎಂದು ಹೇಳುತ್ತಿರುವುದು ಸತ್ಯಕ್ಕೆ ದೂರವಾದ ಮಾತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಹಾಗೂ ಪಿಂಚಣಿಯನ್ನು 2017ರ ಜುಲೈ 1 ರಿಂದ ಪೂರ್ವಾನ್ವಯವಾಗುವಂತೆ ಪರಿಷ್ಕರಿಸಿ ಮತ್ತು ಪ್ರಸಕ್ತ ವರ್ಷದ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಆರ್ಥಿಕ ಸೌಲಭ್ಯ ನೀಡುವ ಕುರಿತು ಮಾರ್ಚ್ 1 ರಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ.
ಈ ಆದೇಶಕ್ಕೆ ಮಾರ್ಚ್ 2 ರ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ. ಈ ಆದೇಶದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿವರವಾದ ನಿಯಮಗಳು, ಫಿಟ್ಮೆಂಟ್ ಕೋಷ್ಠಕ ಮತ್ತು ಆದೇಶಗಳನ್ನು ಹೊರಡಿಸುವ ಪೂರ್ವದಲ್ಲಿ ಚುನಾವಣಾ ಆಯೋಗದಿಂದ ನಿರಪೇಕ್ಷಣಾ ಪತ್ರ ಪಡೆಯಲು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಏಪ್ರಿಲ್ 3 ರಂದು ಪತ್ರ ಬರೆಯಲಾಗಿದೆ. ರಾಜ್ಯ ಚುನಾವಣಾಧಿಕಾರಿಯ ಅನುಮತಿ ದೊರೆತ ಕೂಡಲೇ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಸಚಿವಾಲಯ ಸ್ಪಷ್ಟಪಡಿಸಿದೆ.
Ad
Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ
Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್
Gadag: ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಜೋಡಿ… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಆರಂಭವಾಗಿದ್ದು, ಬದಲಾವಣೆ ಸನಿಹವಿದೆ: ಬಿ.ಶ್ರೀರಾಮುಲು
ಕಾಂಗ್ರೆಸ್ ಸೇರಲು BSY ಮುಂದಾಗಿದ್ರ… ಲಿಂಬಾವಳಿ ಹೇಳಿಕೆಗೆ ದೊಡ್ಡನಗೌಡ ಪಾಟೀಲ ಹೇಳಿದ್ದೇನು?
Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ
ಆ ನಟಿ ʼಬಿಗ್ ಬಾಸ್ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು- ಶಾಕಿಂಗ್ ಸಂಗತಿ ರಿವೀಲ್
Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್
Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್
Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಮಡೆನೂರು ಮನು
You seem to have an Ad Blocker on.
To continue reading, please turn it off or whitelist Udayavani.