ಸಂತ್ರಸ್ತರಿಗೆ ನೌಕರರ ಒಂದು ದಿನದ ವೇತನ
Team Udayavani, Sep 18, 2018, 6:15 AM IST
ಬೆಂಗಳೂರು: ಕೊಡಗು ಸೇರಿ ರಾಜ್ಯದಲ್ಲಿ ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದವರ ನೆರವಿಗಾಗಿ ರಾಜ್ಯ ಸರ್ಕಾರಿ ನೌಕರರು ತಮ್ಮ ಒಂದು ದಿನದ ವೇತನ ಬಿಟ್ಟುಕೊಡಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ.
ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದವರ ನೆರವಿಗಾಗಿ ಸರ್ಕಾರಿ ನೌಕರರ ಒಂದು ದಿನದ ವೇತನ ನೀಡುವುದಾಗಿ ಘೋಷಿಸಿದ್ದ ನೌಕರರ ಸಂಘಟನೆಗಳು, ಇದನ್ನು ಸರ್ಕಾರಿ ನೌಕರರ ವೇತನದಿಂದ ಕಡಿತ ಮಾಡಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ವೇತನದಲ್ಲಿ ಒಂದು ದಿನದ ವೇತನ ಕಡಿತಗೊಳಿಸಿ ಅದನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಪ್ರಕೃತಿ ವಿಕೋಪ 2018ಕ್ಕೆ ನೀಡಲು ಆದೇಶದಲ್ಲಿ ತಿಳಿಸಲಾಗಿದೆ. ವೇತನ ಕಡಿತಗೊಳಿಸುವ ಅಧಿಕಾರವನ್ನು ವೇತನ ಬಟವಾಡೆ ಅಧಿಕಾರಿಗಳು ಮತ್ತು ಖಜಾನೆ ಅಧಿಕಾರಿಗಳಿಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಒಂದು ದಿನದ ವೇತನವನ್ನು ಪರಿಹಾರ ನಿಧಿಗೆ ನೀಡಲು ಇಚ್ಛಿಸದ ನೌಕರರು ಸೆ. 22ರೊಳಗೆ ಸಂಬಂಧಿಸಿದ ವೇತನ ಬಟವಾಡೆ ಅಧಿಕಾರಿಗಳಿಗೆ ಲಿಖೀತ ಅಭಿಮತ ಸಲ್ಲಿಸಬೇಕು.
ಇಲ್ಲವಾದಲ್ಲಿ ವೇತನ ನೀಡಲು ನೌಕರರ ಆಕ್ಷೇಪವಿಲ್ಲ ಎಂದು ಭಾವಿಸಿ ಸೆಪ್ಟೆಂಬರ್ ವೇತನದಲ್ಲಿ ಆ ಮೊತ್ತ ಕಡಿತಗೊಳಿಸಲಾಗುವುದು. ಇದಕ್ಕೆ ಆದಾಯ ತೆರಿಗೆಯಿಂದ ಸಂಪೂರ್ಣ ವಿನಾಯಿತಿ ಇರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ
Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್
Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ
Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ
MUST WATCH
ಹೊಸ ಸೇರ್ಪಡೆ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ
Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Covishield Vaccine; ಹಾಕಿಸಿಕೊಂಡವರು ಐಸ್ಕ್ರೀಮ್ ತಿನ್ನಬಾರದಾ?