ಸಹಕಾರ ಕ್ಷೇತ್ರದಿಂದ ಉದ್ಯೋಗ ಸೃಷ್ಟಿ


Team Udayavani, Sep 17, 2018, 12:23 PM IST

sahakara.jpg

ಬೆಂಗಳೂರು: ಸಹಕಾರ ಬ್ಯಾಂಕ್‌ಗಳು ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಯ ಜತೆಗೆ ಬಡವರ ಕಲ್ಯಾಣ ಕಾರ್ಯದಲ್ಲಿ ನಿರತವಾಗಿದೆ ಎಂದು ರಾಜ್ಯಪಾಲ ವಜೂಭಾಯ್‌ ವಾಲಾ ಅಭಿಪ್ರಾಯಪಟ್ಟಿದ್ದಾರೆ.

ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದಿ ಮೈಸೂರು ಸಿಲ್ಕ್ ಕ್ಲಾತ್‌ ಮರ್ಚೆಂಟ್ಸ್‌ ಕೋ-ಆಪರೇಟಿವ್‌ ಬ್ಯಾಂಕ್‌ನ ಸುವರ್ಣ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜದಲ್ಲಿ ಸೌಲಭ್ಯ ವಂಚಿತರಿಗೆ ಸಹಾಯ, ಸಹಕಾರ ಮಾಡುವುದೇ ಸಹಕಾರಿ ಬ್ಯಾಂಕ್‌ಗಳ ಆದ್ಯತೆಯಾಗಬೇಕು. ಲಾಭದ ಉದ್ದೇಶದಿಂದ ಸಹಕಾರಿ ವಲಯ ಹುಟ್ಟಿಕೊಂಡಿಲ್ಲ. ಸೇವಾ ಮನೋಧರ್ಮದಿಂದ ಬೆಳೆದು ಬಂದಿದೆ ಎಂದು ಹೇಳಿದರು.

ಸಹಕಾರಿ ಅಥವಾ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಬಡ ಮತ್ತು ಮಧ್ಯಮ ವರ್ಗದವರು ಸಾಲ ಪಡೆದರೆ, ಪ್ರಾಣಿಕವಾಗಿ ಬದ್ಧತೆಯಿಂದ ಮರುಪಾವತಿ ಮಾಡುತ್ತಾರೆ. ಆದರೆ, ಶ್ರೀಮಂತರು ಸಾಲ ಪಡೆದು, ಮರುಪಾವತಿ ಮಾಡುವಾಗ ವಿಳಂಬ ಧೋರಣೆ ಅನುಸರಿಸುತ್ತಾರೆ. ಹೀಗಾಗಿ ಸಹಕಾರಿ ಬ್ಯಾಂಕ್‌ಗಳು ಶ್ರೀಮಂತರ ಹೂಡಿಕೆಯಲ್ಲಿ ಬಡವರಿಗೆ ಸಾಲ ಸೌಲಭ್ಯ ಹೆಚ್ಚೆಚ್ಚು ಒದಗಿಸಬೇಕು ಎಂದು ಸಲಹೆ ನೀಡಿದರು.

ಹೂಡಿಕೆಯನ್ನು ರಾಷ್ಟ್ರೀಯಕೃತ ಬ್ಯಾಂಕ್‌ಗಳ ಬದಲಾಗಿ ಸಹಕಾರಿ ಬ್ಯಾಂಕ್‌ನಲ್ಲಿ ಮಾಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ ಒಮ್ಮೆಗೆ ನಷ್ಟಕ್ಕೆ ಜಾರಿದರೆ ಗ್ರಾಹಕರಿಗೆ ಏನೂ ಸಿಗುವುದಿಲ್ಲ. ಆದರೆ, ಸಹಕಾರಿ ಬ್ಯಾಂಕ್‌ ನಷ್ಟವಾದರೂ, ಸರ್ಕಾರ ಅಲ್ಪ ಸ್ಪಲ್ಪ  ಸಹಾಯ ಮಾಡುತ್ತದೆ ಅಥವಾ ವಿಮೆ ಮೂಲಕವಾದರೂ ಗ್ರಾಹಕರಿಗೆ ಹಣ ಸಿಗುತ್ತದೆ. ಹೀಗಾಗಿ ಸಹಕಾರಿ ಬ್ಯಾಂಕ್‌ಗಳಲ್ಲಿ ಹೆಚ್ಚೆಚ್ಚು ಹೂಡಿಕೆ ಮಾಡುವಂತಾಗಲಿ ಎಂದರು.

ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ ಮಾತನಾಡಿ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಾಗೂ ಹಿಂದಿನ ಕಾಂಗ್ರೆಸ್‌ ಸರ್ಕಾರ ಮಾಡಿರುವ ಸಹಕಾರಿ ಸಾಲಮನ್ನಾ ಸೇರಿದಂತೆ ಒಟ್ಟಾರೆ ಸಹಕಾರ ಕ್ಷೇತ್ರದ 19 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದ್ದೇವೆ. ಹಾಗೆಯೇ ರಾಷ್ಟ್ರೀಕೃತ ಬ್ಯಾಂಕ್‌ನ 30 ಸಾವಿರ ಕೋಟಿ ರೂ.ಸಾಲಮನ್ನಾ ಮಾಡಿದ್ದೇವೆ ಎಂದು ಹೇಳಿದರು.

ಮಾಜಿ ಸಭಾಪತಿ ಡಿ.ಎಚ್‌.ಶಂಕರ ಮೂರ್ತಿ, ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಎನ್‌.ಎಸ್‌.ಶ್ರೀನಿವಾಸ ಮೂರ್ತಿ, ಉಪಾಧ್ಯಕ್ಷ ಆರ್‌.ಪಿ.ರವಿಶಂಕರ್‌, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಎ.ಕೃಷ್ಣಭಗವಾನ್‌  ಉಪಸ್ಥಿತರಿದ್ದರು.

ರಾಜ್ಯ ಸರ್ಕಾರದ ಇಲಾಖೆಗಳು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಠೇವಣಿಯಾಗಿ ಇಟ್ಟಿರುವ ಹಣವನ್ನು ಅಪೆಕ್ಸ್‌ ಬ್ಯಾಂಕ್‌ಗೆ ವರ್ಗಾವಣೆ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಠೇವಣಿ ವರ್ಗಾವಣೆಗೊಂಡರೆ ರೈತರಿಗೆ ಸಾಲ ಕೊಡಲು ಅನುಕೂಲವಾಗಲಿದೆ. ಈ ಸಂಬಂಧ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದ್ದೇವೆ.
-ಬಂಡೆಂಪ್ಪ ಕಾಶಂಪುರ್‌, ಸಹಕಾರ ಸಚಿವ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.