ಉದ್ಯೋಗ ಸೃಷ್ಟಿಯೇ ದೊಡ್ಡ ಸವಾಲು


Team Udayavani, Jul 28, 2018, 11:43 AM IST

udyoga.jpg

ಬೆಂಗಳೂರು: ರೋಬೋಟಿಕ್ಸ್‌, ಆಟೋಮೇಶನ್‌ ಇತ್ಯಾದಿ ನೂತನ ತಂತ್ರಜ್ಞಾನ ಕ್ಷೇತ್ರದ ಅನ್ವೇಷಣೆಗಳಿಂದ ಉದ್ಯೋಗಗಳು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಲಿವೆ. ಉದ್ಯೋಗ ಸೃಷ್ಟಿ ಎಂಬ ದೊಡ್ಡ ಸವಾಲು ಈಗ ನಮ್ಮೆದುರಿಗಿದೆ ಎಂದು ರಾಜ್ಯ ಕಂದಾಯ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಆರ್‌. ದೇಶಪಾಂಡೆ ಹೇಳಿದರು.

ಅವರು ಶುಕ್ರವಾರ ಯಲಹಂಕದ ಬಳಿಯಿರುವ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜನೆಗೊಂಡಿದ್ದ ಎರ್ಸಿಕಾ-2018 ಘಉRಇಐಇಅ 2018] (ಕಂಪ್ಯೂಟಿಂಗ್‌, ಮಾಹಿತಿ, ಸಂವಹನ ಹಾಗೂ ಅನ್ವಯಿಕೆ ಕ್ಷೇತ್ರಗಳಲ್ಲಿ ನಡೆಯುತ್ತಿರುವ ನವನವೀನ ಶೋಧಗಳನ್ನು ಕುರಿತ ಅಂತರಾಷ್ಟ್ರೀಯ ಸಮ್ಮೇಳನ) ಅನ್ನು ಉದ್ಘಾಟಿಸಿ ಮಾತನಾಡಿದರು. 

ನಂತರ ಏರೋಸ್ಪೇಸ್‌ ವಿಭಾಗವನ್ನು ಉದ್ಘಾಟಿಸಿದ ಸಚಿವರು, ಪ್ರೊ ಎನ್‌. ಆರ್‌. ಶೆಟ್ಟಿ ಅವರ ನೇತೃತ್ವದಲ್ಲಿ ವೈಮಾನಿಕ ತಂತ್ರಜಾnನ ಕ್ಷೇತ್ರದಲ್ಲಿ ಯುವಜನರ ಕೌಶಲ್ಯವರ್ಧನೆಗಾಗಿ ವಿಶ್ವೇಶ್ವರಯ್ಯನವರ ಜನ್ಮಸ್ಥಳ  ಮುದ್ದೇನಹಳ್ಳಿಯಲ್ಲಿ ಮಾಸ್ಟರ್‌ ಟ್ರೆçನರ್ಸ್‌ಗಳನ್ನು ತರಬೇತಿಗೊಳಿಸುವ ಸುಸಜ್ಜಿತ ಔನ್ನತ್ಯ ಕೇಂದ್ರವನ್ನು ಸ್ಥಾಪಿಸಲು ನಿಟ್ಟೆ ವಿವಿ ಮುಂದಾಗಿರುವುದು ಸ್ವಾಗತಾರ್ಹ ಎಂದರು.

ಮನುಷ್ಯ ಮಾಡುತ್ತಿದ್ದ ಶ್ರಮದಾಯಕ ಕೆಲಸಗಳನ್ನು ರೋಬೋಟ್‌ಗಳು ನಿರ್ವಹಿಸಲಿರುವುದರಿಂದ ಬಹುದೊಡ್ಡ ಪ್ರಮಾಣದಲ್ಲಿ ಉದ್ಯೋಗಗಳು ಮಾಯವಾಗಲಿವೆ. ಇದಕ್ಕಾಗಿ ಆತಂಕ ಪಡುವುದು ಬೇಡ, ಏಕೆಂದರೆ ನವೀನ ತಂತ್ರಜಾnನಕ್ಕೆ ಹೊಂದಿಕೊಂಡಂತೆ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ. ಆದರೆ, ಈ ಹೊಸ ಉದ್ಯೋಗಗಳಿಗೆ ನಮ್ಮ ಯುವಜನರನ್ನು ಸಜ್ಜುಗೊಳಿಸಲು ಕೌಶಲ್ಯವರ್ಧನೆ ಅತ್ಯಗತ್ಯ. ನಾವು ಆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಾಗಿದೆ.

ಭವಿಷ್ಯದಲ್ಲಿ ವೈಮಾನಿಕ ತಂತ್ರಜಾnನ ಕ್ಷೇತ್ರದಲ್ಲಿ ಅಸಂಖ್ಯಾತ ಉದ್ಯೋಗಗಳು ಸೃಷ್ಟಿಯಾಗಲಿವೆ. ನಾನು ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆ ಸಚಿವನಾಗಿದ್ದಾಗ ದೇವನಹಳ್ಳಿ ಬಳಿ 3000 ಎಕರೆ ಪ್ರದೇಶವನ್ನು ಈ ಉದ್ದೇಶಕ್ಕಾಗಿಯೇ ಮೀಸಲಿಟ್ಟಿದ್ದೆ. ಈಗಾಗಲೇ ಅಲ್ಲಿ ಅನೇಕ ಕೈಗಾರಿಕೆಗಳು ಕಾರ್ಯನಿರ್ವಸುತ್ತಿವೆ ಎಂದು ನುಡಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ. ಎನ್‌. ಆರ್‌. ಶೆಟ್ಟಿ ಅವರು ಮಾತನಾಡಿ, ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯ ಆಯೋಜಿಸಿರುವ ಈ ಅಂತಾರಾಷ್ಟ್ರೀಯ ಸಮ್ಮೇಳನ ಅತ್ಯಾಧುನಿಕ ವಿಜಾnನದ ಪರಸ್ಪರ ವಿನಿಮಯಕ್ಕೆ ವೇದಿಕೆಯಾಗಿದೆ. ಈ ತರಹದ ಸಮ್ಮೇಳನಗಳು ಬೆಂಗಳೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಗಳು ಬಂಡವಾಳ ಹೂಡಲು ಪ್ರೇರೇಪಣೆ ನೀಡುತ್ತಿವೆ.

ಈ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಗಳು ಪ್ರಾಪ್ತಿಯಾದಂತಾಗುತ್ತವೆ ಎಂದರು. ಸಮಾರಂಭದಲ್ಲಿ ಪ್ರಾಂಶುಪಾಲ ಡಾ. ಹೆಚ್‌. ಸಿ. ನಾಗರಾಜ್‌, ಅಮೆರಿಕದ ನಾರ್ಥ್ ಡಕೋಟ ಸ್ಟೇಟ್‌ ಯೂನಿವರ್ಸಿಟಿಯ ತಂತ್ರಜಾnನ ಕ್ಷೇತ್ರದ ದಿಗ್ಗಜ ಡಾ. ಗುರ್‌ಸಿಮ್ರನ್‌ ಸಿಂಗ್‌ ವಾಲಿಯಾ, ಡಾ. ಕಾಳಿದಾಸ ಶೆಟ್ಟಿ ಮತ್ತು ಪ್ರೊ. ಅಲೆಕ್ಸ್‌ ರೇಡರ್‌ಮಾಚರ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.