ಹಿರಿ ಜೀವಗಳ ಅಮಿತೋತ್ಸಾಹ
Team Udayavani, Dec 6, 2019, 10:28 AM IST
ಬೆಂಗಳೂರು: ಒಂದೆಡೆ 95 ವರ್ಷದ ವೃದ್ಧೆ ಸ್ವತಃ ಸ್ಕೂಟರ್ ಓಡಿಸಿಕೊಂಡು ಬಂದು ಮತಚಲಾಯಿಸಿದರು. ಇನ್ನೊಂದೆಡೆ ಯುವಕರು ಮತಗಟ್ಟೆಯಿಂದ ದೂರ ಉಳಿದರು. ಕೆಲವರು ದೂರದ ಹೈದರಾಬಾದ್ನಿಂದ ಬಂದು ಹಕ್ಕು ಚಲಾಯಿಸಿದರು.
ಆದರೆ, ಕ್ಷೇತ್ರದ ಅಭ್ಯರ್ಥಿಗೆ ಇಲ್ಲಿ ಮತಚಲಾಯಿಸುವ ಅವಕಾಶ ಇರಲಿಲ್ಲ. ಇವುಗಳೊಟ್ಟಿಗೆ ಮತಯಂತ್ರ ಕೈಕೊಟ್ಟು ಕಿರಿಕಿರಿ, ಮತಪಟ್ಟಿಯಲ್ಲಿ ಹೆಸರು ನಾಪತ್ತೆಯಾಗಿ ಪರದಾಟ… ಇವೆಲ್ಲಾ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನ ವೇಳೆ ಕಂಡು ಬಂದ ದೃಶ್ಯಗಳು. ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ 270 ಮತಗಟ್ಟೆಗಳಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಶಾಂತಿಯುತ ಮತದಾನ ನಡೆದಿಯಿತು. ಮಹಾಲಕ್ಷ್ಮೀ ಲೇಔಟ್ನ ಕಮಲನಗರ ಬಳಿ ಮತಗಟ್ಟೆಯಲ್ಲಿ ಬೆಳಗ್ಗೆ 7 ಗಂಟೆಗೆ ಉಮಾದೇವಿ ಎಂಬ ಕುಬ್ಜ ಮಹಿಳೆ ಬಂದು ಮತದಾನ ಮಾಡಿದರು. ಈ ವೇಳೆ ಮಾತನಾಡಿದ ಅವರು, “ಓಟ್ ಮಾಡದವರು ಬ್ಯಾಡ್ ಫೇಲೋಸ್. ಮತದಾನ ನಮ್ಮ ಹಕ್ಕು, ಎಲ್ಲರೂ ಎದ್ದು ಬಂದು ಮತ ದಾನ ಮಾಡಿ‘ ಎಂದರು.
ವಿಶೇಷವಾಗಿ ಕ್ಷೇತ್ರದ ಅಮರವಾಣಿ ಹೈಸ್ಕೂಲ್ ಮತಗಟ್ಟೆಯಲ್ಲಿ 97 ವರ್ಷದ ವೃದ್ಧೆ ಗಂಗಮ್ಮ, ಮಗನನ್ನು ಹಿಂದೆ ಕೂರಿಸಿಕೊಂಡು, ಸ್ವತಃ ಸ್ಕೂಟರ್ ಚಾಲನೆ ಮಾಡಿಕೊಂಡು ಬಂದು ಮತ ಹಾಕಿದರು. 1952ರಲ್ಲಿ ಚುನಾವಣೆ ಆರಂಭವಾದಾಗಿನಿಂದಲೂ ಮತದಾನ ಮಾಡುತ್ತಿರುವ 90 ವರ್ಷದ ವೃದ್ಧೆ ಸರೋಜಮ್ಮ, ವಿವಿಧ ಚುನಾವಣೆಯಲ್ಲಿ 30ಕ್ಕೂ ಹೆಚ್ಚು ಬಾರಿ ಮತದಾನ ಮಾಡಿದನೀಲಮ್ಮ ಈ ಬಾರಿಯೂ ತಮ್ಮ ಹಕ್ಕು ಚಲಾಯಿಸಿ ಯುವಕರಿಗೆ ಮಾದರಿಯಾದರು.
ಮತಗಟ್ಟೆಗಳ ಬಳಿ ವಯಸ್ಕರು ಹಾಗೂ ಹಿರಿಯರೇ ಹೆಚ್ಚು ಕಂಡು ಬಂದಿದ್ದು, ಯುವ ಜನತೆ ಮತದಾನದಿಂದ ದೂರ
ಉಳಿದರು.
ನಿವೃತ್ತ ನೌಕರರು, ಹಿರಿಯ ನಾಗರಿಕರು, 90 ವರ್ಷ ಮೇಲ್ವಟ್ಟ ವಯೋವೃದ್ಧರು ಬೆಳಗಿನ ಅವಧಿಯಲ್ಲಿ ಹೆಚ್ಚು
ಕಾಣಿಸಿಕೊಂಡರೆ, ಮಧ್ಯಾಹ್ನದ ನಂತರ ಮಹಿಳೆಯರ ಪ್ರಮಾಣ ಹೆಚ್ಚಿತ್ತು. ಸಂಜೆ ಬಿರುಸಿನ ಮತದಾನ ಕಂಡುಬಂತು. ಮತದಾರರ ಪಟ್ಟಿಯಿಂದ ಹೆಸರು ನಾಪತ್ತೆಯಾಗಿ ನಂದಿನಿ ಲೇಔಟ್ 4ನೇ ಬ್ಲಾಕ್, 6ನೇ ಮುಖ್ಯ ರಸ್ತೆಯ ಹತ್ತಕ್ಕೂ ಹೆಚ್ಚು ಮಂದಿ ಚುನಾವಣಾ ಆಯೋಗದ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. 50 ವರ್ಷದಿಂದ ಇದೇ ಬಡಾವಣೆಯಲ್ಲಿದ್ದೇವೆ. ಕಳೆದ ಬಾರಿ ಓಟ್ ಹಾಕಿದ್ದೆವು. ಈ ಬಾರಿ ಪಟ್ಟಿಯಲ್ಲಿ ಹೆಸರೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ, ಕಾಂಗ್ರೆಸ್ ಅಭ್ಯರ್ಥಿ ಎಂ.ಶಿವರಾಜು ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ