![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
ಸಮಾನ ವೇತನ ಜಾರಿ ಮೂಲಕ ರಾಜ್ಯ ಮಾದರಿಯಾಗಲಿ
Team Udayavani, Apr 10, 2017, 11:51 AM IST
![santhosh-hegde.jpg](https://www.udayavani.com/wp-content/uploads/2017/04/10/santhosh-hegde-463x465.jpg)
ಬೆಂಗಳೂರು: ಸಂವಿಧಾನದ ಆಶಯ ಹಾಗೂ ಸುಪ್ರೀಂ ಕೋರ್ಟ್ ಆದೇಶದನ್ವಯ ಗುತ್ತಿಗೆ ಮತ್ತು ಹೊರೆಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೆ ತರುವ ಮೂಲಕ ಕರ್ನಾಟಕವು ದೇಶದ ಉಳಿದ ರಾಜ್ಯಗಳಿಗೆ ಮಾದರಿಯಾಗಲಿ ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಎನ್.ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಸಿಐಟಿಯು ರಾಜ್ಯ ಘಟಕದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಮಾನ ಕೆಲಸಕ್ಕೆ ಸಮಾನ ವೇತನ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವಕ್ಕೆ ಅರ್ಥ ಬರಬೇಕಾದರೆ ಸಮಾನತೆ ಬರಬೇಕು. ಅದರಂತೆ ಸಮಾನ ಕೆಲಸಕ್ಕೆ ಸಮಾನ ವೇತನ ಸಿಗಬೇಕು. ಇದು ಸಂವಿಧಾನದ ಆಶಯವೂ ಆಗಿದ್ದು, ಅದನ್ನು ಜಾರಿಗೊಳಿಸುವ ಮೂಲಕ ನಮ್ಮ ರಾಜ್ಯ ಇತರ ರಾಜ್ಯಗಳಿಗೆ ಮಾದರಿ ಆಗಲಿ ಎಂದರು.
ಸಿಐಟಿಯು ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮಿ ಮಾತನಾಡಿ, ಗುತ್ತಿಗೆ ಪದ್ಧತಿ ಎಂಬುದು ನೌಕರರ ಶೋಷಣೆಯ ಅಸ್ತ್ರ. ಸರ್ಕಾರದ ಬಹುತೇಕ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ನೌಕರರು ಅಥವಾ ಕಾರ್ಮಿಕರನ್ನು ನೇಮಿಸಿಕೊಂಡು ಸರಿಯಾಗಿ ವೇತನ, ಭ್ಯತೆ ಹಾಗೂ ಸೌಲಭ್ಯಗಳನ್ನು ಕಲ್ಪಿಸದೆ ಶೋಷಣೆ ಮಾಡಲಾಗುತ್ತಿದೆ. ನೇರ ನೇಮಕಾತಿ ಸಂದರ್ಭದಲ್ಲಿ ಗುತ್ತಿಗೆ ನೌಕರರನ್ನು ಕಡೆಗಣಿಸಲಾಗಿದೆ.
ಕಾರ್ಮಿಕ ಕಾಯ್ದೆ ಪ್ರಕಾರ ವೇತನ ಹಾಗೂ ಸೌಲಭ್ಯಗಳು ಸಿಗುತ್ತಿಲ್ಲ. ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ಸಂಘಟಿಸಿ ರಾಜ್ಯಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಿ, ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸಲಾಗುವುದು ಎಂದರು. ಆಂಧ್ರಪ್ರದೇಶದ ಗುತ್ತಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಎ.ವಿ.ನಾಗೇಶ್ವರ್ರಾವ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.