ಜ್ಞಾನಪೀಠ ಸಿಕ್ಕರೆ ಖುಷಿ, ಲಾಬಿ ಮಾಡಲ್ಲ


Team Udayavani, Sep 30, 2018, 12:28 PM IST

jnanapiota.jpg

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿಗೆ ನಾನು ಯಾವುದೇ ಲಾಬಿ ಮಾಡುವುದಿಲ್ಲ. ಸಹಜವಾಗಿಯೇ ಸಿಕ್ಕರೆ ಖುಷಿಯಿಂದ ಸ್ವೀಕರಿಸುತ್ತೇನೆ ಎಂದು ಸಾಹಿತಿ ಕುಂ.ವೀರಭದ್ರಪ್ಪ ತಿಳಿಸಿದರು.

ಸಪ್ನ ಬುಕ್‌ಹೌಸ್‌ ಹೊರ ತಂದಿರುವ ಕುಂ.ವೀ ಅವರ “ಕಿಲುಬು’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ನೀಡುವ ಯಾವುದೇ ಅಕಾಡೆಮಿ ಅಧ್ಯಕ್ಷ ಸ್ಥಾನ ಹಾಗೂ ಸೈಟಿಗಾಗಿ ನಾನು ಕಾದು ಕುಳಿತಿಲ್ಲ. ನಮ್ಮೂರಿನಲ್ಲಿ ನನಗೆ ದೇವರು ಕೊಟ್ಟ ಸ್ಥಳವಿದ್ದು, ಯಾವುದೇ ಸ್ಥಾನಕ್ಕೆ ಲಾಬಿ ಮಾಡುವುದಿಲ್ಲ ಎಂದು ಹೇಳಿದರು. 

ಪ್ರಸ್ತುತ ಸಂದರ್ಭದಲ್ಲಿ ರಾಜಕೀಯ ವ್ಯವಸ್ಥೆ ಹಾಳಾಗಿದ್ದು, ರಾಜ್ಯದಲ್ಲಿ ಎರಡು ವರ್ಷದಿಂದ ಅಧಿಕಾರ ನಡೆಯುತ್ತಿಲ್ಲ. ವಿಧಾನಸೌಧ ಬಿಗ್‌ ಬಜಾರ್‌ ರೀತಿಯಲ್ಲಿ ಮಾರಾಟ ಕೇಂದ್ರವಾಗಿದ್ದು, ಕೋಟಿಗೆ ಮುಖಂಡರನ್ನು ಖರೀದಿಸುತ್ತಿರುವುದು ವಿಪರ್ಯಾಸದ ಸಂಗತಿ ಎಂದು ಟೀಕಿಸಿದರು. 

ನನ್ನ ಕಾದಂಬರಿ “ಕಿಲುಬು’ ನಲ್ಲಿ ರಾಜಕೀಯ ವಿಡಂಬಣೆಯಿದ್ದು, ಬಹುಶಃ ಕಾರಂತರ ಬಳಿಕ ಯಾವ ಲೇಖಕರು ಸಹ ರಾಜಕೀಯ ವಿಡಂಬಣೆ ಕುರಿತು ಬರೆದಿರಲಿಲ್ಲ. ಒಬ್ಬ ಲೇಖಕನಾದವನಿಗೆ ಪ್ರಶ್ನಿಸುವ ಹಕ್ಕಿರಬೇಕಿದ್ದಾಗ ಮಾತ್ರ ವಾಸ್ತವ ಸಂಗತಿಗಳನ್ನು ಬರೆಯಲು ಸಾಧ್ಯವಾಗುತ್ತದೆ ಎಂದ ಅವರು, ಕೆಲವು ರಾಜಕಾರಣಿಗಳು ಗೌರಿ ಹತ್ಯೆ ಆರೋಪಿಗಳ ಪರವಾಗಿ ಮಾತನಾಡುವ ಮೂಲಕ ಸಂವಿಧಾನಕ್ಕೆ ದ್ರೋಹವೆಸಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ವಿಮರ್ಶಕ ಡಾ.ಸಿ.ಎನ್‌.ರಾಮಚಂದ್ರನ್‌ ಮಾತನಾಡಿದರು. ಮುಖ್ಯಮಂತ್ರಿಯಾಗಲು ರಾಜಕೀಯ ಮುಖಂಡರೊಬ್ಬರು ನಡೆಸುವ ರಾಜಕೀಯ ತಂತ್ರಗಾರಿಕೆ ಈ ಕಾದಂಬರಿಯ ಕಥಾ ಹಂದರವಾಗಿದೆ. ಅನಿರೀಕ್ಷಿತವಾಗಿ ಕಾದಂಬರಿ ಮುಕ್ತಾಯಗೊಳ್ಳುತ್ತದೆ. ಆದರೆ, ಈ ರಾಜಕೀಯ ಪರಿಸ್ಥಿತಿ ಒಂದು ರೀತಿಯ ವಿಷ ಚಕ್ರವಿದ್ದಂತೆ ಹೀಗಾಗಿ ಎಲ್ಲಿಗೆ ಮುಗಿಸಿದರೂ ಅಷ್ಟೇ ಅರ್ಥವಿರುತ್ತದೆ ಎಂದು ಅಭಿಪ್ರಾಯಪಟ್ಟರು. 

ಕುಂ.ವೀರಭದ್ರಪ್ಪ ಅವರ ಕೃತಿಗಳು ಸಾಮಾಜಿಕ ನ್ಯಾಯದ ಬಗ್ಗೆ ರಚನೆಯಾಗಿರುವುದರಿಂದ ಅವರನ್ನು ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆ ಶಿಫಾರಸು ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು. 
-ಡಾ.ಮನು ಬಳಿಗಾರ್‌, ಕಸಾಪ ಅಧ್ಯಕ್ಷ

ಈವರೆಗೆ ಸಿಕ್ಕಿರುವ ಪ್ರಶಸ್ತಿಗಳಲ್ಲಿ ನಾನು ಖುಷಿ ಕಂಡಿದ್ದೇನೆ. ಹೀಗಾಗಿ ನನಗೆ ಯಾವ ಸೈಟೂ ಬೇಡ. ಕೊನೆಗಾಲದಲ್ಲಿ ಬೇಕಾದ ಆರು-ಮೂರು ಅಡಿ ಜಾಗವನ್ನು ನನ್ನೂರಿನಲ್ಲಿ ದೇವರು ನನಗೆ ಕೊಟ್ಟಿದ್ದಾನೆ. 
-ಕುಂ.ವೀರಭದ್ರಪ್ಪ, ಸಾಹಿತಿ

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.