ವೃತ್ತಿಯಲ್ಲಿ ಉದ್ಯಮಿ, ಪ್ರವೃತ್ತಿಯಲ್ಲಿ ಸಾಹಿತಿ


Team Udayavani, Jul 1, 2019, 3:06 AM IST

vrutti

ಬೆಂಗಳೂರು: ಬಹುಮುಖ ವ್ಯಕ್ತಿತ್ವದ ಸಾಹಿತಿ ಡಿ.ಕೆ.ಚೌಟ, ಸಮಾಜಮುಖೀ ಚಿಂತನೆಗಳನ್ನು ಹೊಂದಿದ್ದರು ಎಂದು ನಿವೃತ್ತ ಐಎಎಸ್‌ ಅಧಿಕಾರಿ ಡಾ.ಸಿ. ಸೋಮಶೇಖರ್‌ ತಿಳಿಸಿದರು. ನಗರದ ಬಂಟರ ಸಂಘದಲ್ಲಿ ಭಾನುವಾರ ಹಮ್ಮಿಕೊಂಡಿದ್ದ “ಚೌಟ ಅವರಿಗೆ ಭಾವನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೃತ್ತಿಯಲ್ಲಿ ಚೌಟ ವಾಣಿಜ್ಯೋದ್ಯಮಿ ಆಗಿದ್ದರೆ, ಪ್ರವೃತ್ತಿಯಲ್ಲಿ ಒಬ್ಬ ಸಾಹಿತಿ ಆಗಿದ್ದರು.

ರಂಘ ಸಂಘಟಕರಾಗಿದ್ದರು. ವರ್ಣರಂಜಿತ ಬದುಕು ಪೂರೈಸಿದ ಅವರದ್ದು ಸಾರ್ವಜನಿಕ ವ್ಯಕ್ತಿತ್ವ. ನಮಗಾಗಿ ದುಡಿದವರಿಗೆ ಕೃತಜ್ಞತೆ ಸಲ್ಲಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು. ಅಂತರ್ಮುಖೀಯೂ ಮತ್ತು ಬಹುರ್ಮುಖೀಯೂ ಆಗಿದ್ದ ಸಾಹಿತಿ ಡಿ.ಕೆ. ಚೌಟ, ಸಮಾಜಮುಖೀ ಚಿಂತನೆಗಳನ್ನು ಹೊಂದಿದ್ದ ಅಪರೂಪದ ವ್ಯಕ್ತಿ. ಚಿತ್ರಕಲೆ, ಯಕ್ಷಗಾನ, ಸಾಹಿತ್ಯಕ್ಕೆ ಅವರು ನೀಡಿದ ಕೊಡುಗೆ ಅಪಾರ. ಬಟ್ಟೆಯನ್ನು ಕಳಚುವಂತೆ ಆತ್ಮವು ಆಗಾಗ ಶರೀರವನ್ನು ಬದಲಿಸುತ್ತದೆ.

ಚೌಟ ಅವರ ಅಗಲಿಕೆ ನಮಗೆ ಸಂಕಟ ಉಂಟುಮಾಡಿದೆ ಎಂದ ಅವರು, ಚೌಟ ಮನೆಗೆ ನಮ್ಮ ಮನೆ ಹೊಂದಿಕೊಂಡಿತ್ತು. ಅವರ ಮನೆಯ ಊಟ ನಮ್ಮ ಮನೆಗೆ ಬರುತ್ತಿತ್ತು. ಯಾರಿಗಾದರೂ ಮನೆಯ ವಿಳಾಸ ಹೇಳುವಾಗ ನಾವಿಬ್ಬರೂ ಪರಸ್ಪರರ ಮನೆಯ “ಲೊಕೇಷನ್‌’ ಹೇಳುತ್ತಿದ್ದೆವು ಎಂದು ಮೆಲುಕು ಹಾಕಿದರು. ಬಂಟರ ಸಂಘದ ಗೌರವ ಕಾರ್ಯದರ್ಶಿ ಮಧುಕರ ಎಂ. ಶೆಟ್ಟಿ ಮಾತನಾಡಿ, ಎಲ್ಲ ರಂಗಗಳಲ್ಲೂ ಚೌಟ ಸಂಭ್ರಮದ ಛಾಯೆ ಮೂಡಿಸಿದರು.

ಆದರೆ, ನಮ್ಮಲ್ಲಿ ಸೂತಕದ ಛಾಯೆ ಮೂಡಿಸಿದ್ದಾರೆ. ಸಂಕಟವಾಗಿದ್ದರೂ ಅದನ್ನು ಹೇಳಿಕೊಳ್ಳುವಂತಿಲ್ಲ; ಮನಸ್ಸಿನಲ್ಲಿಯೂ ಇಟ್ಟುಕೊಳ್ಳುವಂತಿಲ್ಲ ಎಂದು ಶೋಕ ವ್ಯಕ್ತಪಡಿಸಿದರು. ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ ಮಾತನಾಡಿ, ಚೌಟ ಅವರ ಬದುಕನ್ನು ಯುವಕರಿಗೆ ಪರಿಚಯಿಸುವ ಪ್ರಯತ್ನ ಈ ಭಾವ ನಮನ. ನನಗೆ ಅವರೊಬ್ಬ ಸ್ನೇಹಿತ, ತತ್ವಜ್ಞಾನಿ, ಮಾರ್ಗದರ್ಶಕರಾಗಿದ್ದರು. ಸಮಾಜಕ್ಕೆ ಅವರ ಕೊಡುಗೆ ಅಪಾರ. ಬಂಟರ ಸಮಾಜಕ್ಕೆ ಅವರಿಂದ ಹೆಸರು ಬಂದಿದೆ ಎಂದು ಸ್ಮರಿಸಿದರು.

ಕಲಾ ನಿರ್ದೇಶಕ ಶಶಿಧರ್‌ ಅಡಪ ಮಾತನಾಡಿ, ಒಬ್ಬ ವ್ಯಕ್ತಿ ಜತೆ ಭಾವನಾತ್ಮಕ ಸಂಬಂಧ ಹೊಂದಿದ್ದರೆ, ಅವರನ್ನು ವಿಶ್ಲೇಷಣೆ ಹಾಗೂ ತೂಕ ಹಾಕುವದಾಗಲಿ ಬಹಳ ಕಷ್ಟದ ಮಾತು. ನಮಗಾಗಿ ದುಡಿದವರಿಗೆ ನಾವು ಕೃತಜ್ಞತೆಯನ್ನು ಸಲ್ಲಿಸದೆ ಇರಬಾರದು ಎನ್ನುವುದನ್ನು ಅವರಿಂದ ಕಲಿತಿದ್ದೇನೆ. ಕೆಲವರು ನನ್ನಲಿದೆ ಎಂದು ದಾನ ಮಾಡುತ್ತಾರೆ, ಮತ್ತೆ ಕೆಲವರು ಇನ್ನೊಬ್ಬರಿಗೆ ಅವಶ್ಯಕತೆಯಿದೆ ಎಂದು ದಾನ ಮಾಡುತ್ತಾರೆ. ಇದರಲ್ಲಿ ಚೌಟ ಅವರು ಎರಡನೇ ಸಾಲಿಗೆ ಸೇರುತ್ತಾರೆ ಎಂದು ಹೇಳಿದರು.

ರಂಗ ಕಲಾವಿದ ಕೃಷ್ಣಮೂರ್ತಿ ಕವತ್ತಾರ್‌, ಶಿಕ್ಷಣ ತಜ್ಞ ಪ್ರೊ.ಕೆ.ಇ. ರಾಧಾಕೃಷ್ಣ, ಪದಾಧಿಕಾರಿಗಳಾದ ಎ.ಎನ್‌. ಶೆಟ್ಟಿ, ತೊ. ನಂಜುಂಡಸ್ವಾಮಿ, ಹರೀಶ್‌ ಕುಮಾರ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.