ಪರಿಸರಕ್ಕಾಗುವ ಪರಿಣಾಮ ಪರಿಶೀಲನೆ


Team Udayavani, Jul 31, 2018, 11:03 AM IST

blore-5.jpg

ಬೆಂಗಳೂರು: ನಗರದ ಸಂಚಾರ ದಟ್ಟಣೆ ತಗ್ಗಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಜಾರಿಗೆ ತರಲಾಗುತ್ತಿರುವ 102 ಕಿ.ಮೀ ಉದ್ದದ “ಎಲೆವೇಟೆಡ್‌ ಕಾರಿಡಾರ್‌’ ಯೋಜನೆಯ “ಪರಿಸರ ಪರಿಣಾಮ ಹಾಗೂ ಮೌಲ್ಯಮಾಪನ ವರದಿ’ ಸಿದ್ಧಪಡಿಸಿ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಯೋಜನೆ ಕುರಿತು ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ, ಅಧಿಕಾರಿಗಳು ಪ್ರಸ್ತುತಪಡಿಸಿದ “ವಿಸ್ತೃತ ಸಂಭವನೀಯ ವರದಿ’ಯನ್ನು (ಡಿಟೇಲ್ಡ್‌ μಸಿಬಿಲಿಟಿ ರಿಪೋರ್ಟ್‌) ಅವಲೋಕಿಸಿದ ಮುಖ್ಯಮಂತ್ರಿಯವರು, ಯೋ ಜನೆ ಜಾರಿಗೆ ತರಬೇಕಾದರೆ ಪರಿಸರಕ್ಕೆ ಸಂಬಂಧಿಸಿದ ವಿಷಯಗಳ ಕಾರಣಕ್ಕೆ ಕೆಲವೊಂದು ಸಂದೇಹಗಳು, ಗೊಂದಲಗಳು ಉಂಟಾಗಿ ವಿರೋಧ ವ್ಯಕ್ತವಾಗುವ ಸಾಧ್ಯತೆಗಳನ್ನು ಅಲ್ಲಗಳೆಯಲು ಆಗುವುದಿಲ್ಲ. ಹಾಗಾಗಿ ಯೋಜನೆ ಬಗ್ಗೆ ಪರಿಸರ ಪರಿಣಾಮ ಹಾಗೂ ಮೌಲ್ಯಮಾಪನ ವರದಿ ಸಿದ್ಧಪಡಿಸಿ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರು. ತಮ್ಮ ಬಜೆಟ್‌ನಲ್ಲಿ ಕುಮಾರಸ್ವಾಮಿ ಈ ಯೋಜನೆ ಘೋಷಣೆ ಮಾಡಿದ್ದರು.

ಬೆಂಗಳೂರಿನ ವಾಹನ ದಟ್ಟಣೆಯನ್ನು ಸುಗಮಗೊಳಿಸಲು, ಪ್ರಯಾಣದ ಸಮಯವನ್ನು ಕಡಿತಗೊಳಿಸಲು ಹಾಗೂ ಇಂಗಾಲ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶದಿಂದ ನಗರದಲ್ಲಿ ಮೂರು ಎಲಿವೆಟೆಡ್‌ ಕಾರಿಡಾರ್‌ ಹಾಗೂ 3 ಸಂಪರ್ಕ ಕಾರಿಡಾರ್‌ ಸೇರಿ ಒಟ್ಟು 102. 04 ಕಿ.ಮೀ ಉದ್ದದ 6 ಕಾರಿಡಾರ್‌ಗಳನ್ನು ನಿರ್ಮಿಸುವ ಯೋಜನೆ ಇದಾಗಿದ್ದು, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಏಕಾಂ, ಡೆಲಾಯಿಟ… ಹಾಗೂ ಇರ್ನ್ಪ್ರಸಪೋರ್ಟ್‌ ಸಂಸ್ಥೆಗಳ ಸಹಯೋಗದೊಂದಿಗೆ ವಿಸ್ತೃತ ಸಂಭವನೀಯ ವರದಿ’ ಸಿದ್ಧಪಡಿಸಲಾಗಿದೆ. 

ವೇಗವಾಗಿ ಬೇಳೆಯುತ್ತಿರುವ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ಸಾರ್ವಜನಿಕ ಸಾರಿಗೆಗೆ ಒತ್ತು ಕೊಡಬೇಕಾಗಿದೆ. ಆದರೆ, ಮೆಟ್ರೋ, ಬಿಎಂಟಿಸಿ, ಮೊನೊ ರೈಲು, ಕೇಬಲ್‌ ಕಾರ್‌ ಇಂತಹ ಯೋಜನೆಗಳಿಂದ ಒಂದಿಷ್ಟು
ಒತ್ತಡ ಕಡಿಮೆಯಾಗ ಬಹುದು. ಆದರೆ, ಇವುಗಳಿಂದ ಮಾತ್ರ ಸಂಚಾರ ಸುಗಮವಾಗುತ್ತದೆ ಎಂದು ಹೇಳಲಿಕ್ಕಾಗುವುದಿಲ್ಲ. ಎಲಿವೆಟೆಡ್‌ ಕಾರಿಡಾರ್‌ನಂತ ಯೋಜನೆಗಳನ್ನೂ ಜಾರಿಗೆ ತರಬೇಕಾಗುತ್ತದೆ. ಮೆಟ್ರೋ 3ನೇ ಹಂತದ ಜೊತೆಗೆ ಅದಕ್ಕೆ ಸಂಪರ್ಕ ಕಲ್ಪಿಸುವ ಯೋಜನೆಗಳನ್ನು ಕಾರ್ಯಗತಗೊಳಿಸಿದಾಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಎಲಿವೆಟೆಡ್‌ ಕಾರಿಡಾರ್‌ ಯೋಜನೆ ಬಗ್ಗೆ ಪ್ರಾಥಮಿಕ ಹಂತದ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಲೋಕೋಪಯೋಗಿ ಸಚಿವ ಹೆಚ್‌.ಡಿ.ರೇವಣ್ಣ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌, ಗೃಹ ಹಾಗೂ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಧಿಕಾರಿಗಳು ಉಪಸ್ಥಿತರಿದ್ದರು.

ರೇವಣ್ಣ ಉಪಸ್ಥಿತಿ; ಸಿಎಂ ಸಮಜಾಯಿಷಿ ಎಲಿವೇಟೆಡ್‌ ಕಾರಿಡಾರ್‌ ಯೋಜನೆ ಸಂಬಂಧಿತ ಸಭೆಯಲ್ಲಿ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಸಹ ಉಪಸ್ಥಿತರಿದ್ದರು. ಇದಕ್ಕೆ ಸಮಜಾಯಿಷಿ ನೀಡಿದ ಮುಖ್ಯಮಂತ್ರಿ ಎಚ್‌ಡಿಕೆ, ಈ ಯೋಜನೆ ಲೋಕೋಪಯೋಗಿ ಇಲಾಖೆ ವ್ಯಾಪಿಗೆ ಬರಲಿದೆ, ಹೀಗಾಗಿ ರೇವಣ್ಣ ಬಂದಿದ್ದಾರೆ. ಮಾಧ್ಯಮದವರು, ಬೆಂಗಳೂರು ಅಭಿವೃದ್ಧಿಯನ್ನು ರೇವಣ್ಣ ಅವರು ಹೈಜಾಕ್‌ ಮಾಡುತ್ತಿದ್ದಾರೆ ಎಂದು ಬಿಂಬಿಸಬೇಡಿ ಎಂದು ಚಟಾಕಿ ಹಾರಿಸಿದರು.

14 ವರ್ಷಗಳಿಂದ ಪ್ರಸ್ತಾವನೆಯಲ್ಲಿರುವ ಎಲಿವೆಟೆಡ್‌ ಕಾರಿಡಾರ್‌ ಯೋಜನೆ ಬಗ್ಗೆ ಇಂದು ಪ್ರಾಥಮಿಕ ಚರ್ಚೆ ನಡೆಸಿದ್ದೇವೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಯೋಜನೆ ಕಾರ್ಯಗತ ಗೊಳಿಸಲಾಗುವುದು. ಒಂದೊಮ್ಮೆ
ಜನ, ಯೋಜನೆ ಬೇಡ, ನಾವು ಟ್ರಾಫಿಕ್‌ನಲ್ಲೇ ಓಡಾಡುತ್ತೇವೆ ಎಂದರೆ ನಾವೇನೂ ಮಾಡಲಾಗುವುದಿಲ್ಲ.
ಎಚ್‌.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ 

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.