ಮೇಯರ್‌, ಶಾಸಕಿಯಿಂದ ಪರಿಸರ ಪಾಠ


Team Udayavani, Aug 25, 2019, 3:05 AM IST

meyor

ಬೆಂಗಳೂರು: ಅಲ್ಲಿ ಮೇಯರ್‌ ಗಂಗಾಂಬಿಕೆ ಮತ್ತು ಶಾಸಕಿ ಸೌಮ್ಯಾ ರೆಡ್ಡಿ ಕೆಲ ಹೊತ್ತು ಶಿಕ್ಷಕಿಯರಾಗಿದ್ದರು. ವಿದ್ಯಾರ್ಥಿಗಳಿಗೆ ಪರಿಸರ ಸ್ನೇಹಿ ಗಣಪ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಪ್ರಶ್ನೆ ಕೇಳಿದರು. ಬಾಂಧವ ಸಂಸ್ಥೆ, ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಆಟದ ಮೈದಾನ ಸಮೀಪ ಶನಿವಾರ ಹಮ್ಮಿಕೊಂಡಿದ್ದ “ಮಣ್ಣಿನ ಗಣೇಶ ಬಳಕೆ’ ಕುರಿತ ಜಾಗೃತಿ ರ್ಯಾಲಿಯಲ್ಲಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಜತೆ ಮೇಯರ್‌ ಹಾಗೂ ಶಾಸಕಿ ಭಾಗವಹಿಸಿದ್ದರು.

ಈ ವೇಳೆ ಮೇಯರ್‌ ಗಂಗಾಂಬಿಕೆ ಮತ್ತು ಶಾಸಕಿ ಸೌಮ್ಯಾ ರೆಡ್ಡಿ, ಪಿಒಪಿ ಗಣಪತಿ ಬಳಕೆಯಿಂದ ನೀರಿನ ಮೂಲಗಳು ಹೇಗೆ ಮಲಿನವಾಗಲಿವೆ, ಬಣ್ಣದ ಗಣಪತಿ ಬಳಕೆ ಪರಿಸರದ ಮೇಲೆ ಹೇಗೆ ಪರಿಣಾಮ ಬೀರಲಿದೆ ಎಂಬ ಪ್ರಶ್ನೆಗಳನ್ನು ವಿದ್ಯಾರ್ಥಿಗಳಿಗೆ ಕೇಳಿದರು. ವಿದ್ಯಾರ್ಥಿಗಳು ಚುಟುಕಾಗಿ ಉತ್ತರಿಸಿದರು.

ಮಣ್ಣಿನ ಮೂರ್ತಿ ಬಳಸಿ: ಮೇಯರ್‌ ಗಂಗಾಂಬಿಕೆ ಮಾತನಾಡಿ, ಪಿಒಪಿ ಗಣಪನ ಮೂರ್ತಿ ಪರಿಸರದ ಮೇಲೆ ದುಷ್ಪರಿಣಾಮ ಬೀರಲಿದ್ದು, ಸಾರ್ವಜನಿಕರು ಪರಿಸರ ಸ್ನೇಹಿ ಮಣ್ಣಿನ ಗಣಪನನ್ನು ಬಳಸುವ ಮೂಲಕ ನಗರದ ನೀರಿನ ಮೂಲಗಳನ್ನು ಉಳಿಸಿಕೊಳ್ಳಲು ಸಹಕರಿಸಬೇಕು. ಬಾಂಧವ ಸಂಸ್ಥೆ ಕಳೆದ ಐದು ವರ್ಷಗಳಿಂದ ಸಾರ್ವಜನಿಕರಿಗೆ ಉಚಿತವಾಗಿ ಮಣ್ಣಿನ ಗಣಪತಿ ಮೂರ್ತಿ ನೀಡುವ ಮೂಲಕ ಪರಿಸರ ಜಾಗೃತಿ ಮೂಡಿಸುತ್ತಿದೆ. ಪಾಲಿಕೆ ಎಲ್ಲಾ ಸದಸ್ಯರು ಇಂತಹ ಕಾರ್ಯದಲ್ಲಿ ಕೈ ಜೋಡಿಸಬೇಕು ಎಂದರು.

ಪಿಒಪಿಯಿಂದ ಜಲಚರಗಳ ಸಾವು: ಶಾಸಕಿ ಸೌಮ್ಯಾ ರೆಡ್ಡಿ ಮಾತನಾಡಿ, ಪಿಒಪಿ ಗಣಪನ ಮೂರ್ತಿಯನ್ನು ನೀರಿಗೆ ಬಿಡುವುದರಿಂದ ದಕ್ಕೆ ಬಳಸಿದ ರಾಸಾಯನಿಕ ಬಣ್ಣಗಳು ನೀರಿನ ಮೂಲಗಳಲ್ಲಿ ಬೆರೆತು ಜಲಚರಗಳ ಸಾವಿಗೆ ಕಾರಣವಾಗುತ್ತದೆ. ಪಿಒಪಿ ಮೂರ್ತಿಗಳು ನೀರಲ್ಲಿ ಕರಗುವುದಿಲ್ಲ. ಹೀಗಾಗಿ ಮಣ್ಣಿನ ಗಣಪ ಬಳಸುವಂತೆ ಮನವಿ ಮಾಡಿದರು. ಬಾಂಧವ ಸಂಸ್ಥೆಯಿಂದ ಈ ಬಾರಿ ಸಾರ್ವಜನಿಕರಿಗೆ 5 ಸಾವಿರ ಮಣ್ಣಿನ ಗಣಪತಿ ಮೂರ್ತಿಗಳನ್ನು ಉಚಿತವಾಗಿ ನೀಡುವುದಾಗಿ ಪಾಲಿಕೆ ಸದಸ್ಯ ಎನ್‌.ನಾಗರಾಜ್‌ ಹೇಳಿದರು.

ಮಕ್ಕಳಿಂದ ಜಾಗೃತಿ ಜಾಥಾ: ಭೈರಸಂದ್ರ ಸರ್ಕಾರಿ ಶಾಲೆ ವಿದ್ಯಾರ್ಥಿಗಳು, ಸರ್ವೋದಯ ಶಾಲೆಯ ಮಕ್ಕಳು ಸೇರಿದಂತೆ ಹಲವು ಶಾಲೆಗಳ ವಿದ್ಯಾರ್ಥಿಗಳು ಬಿತ್ತಿಪತ್ರ ಹಿಡಿದು ಪರಿಸರ ಗಣಪತಿ ಬಳಕೆ ಕುರಿತ ಜಾಗೃತಿ ಜಾಥದಲ್ಲಿ ಭಾಗವಹಿಸಿದ್ದರು. ಜಯನಗರದ 4ನೇ ಹಂತದ ಕೆಲವು ರಸ್ತೆಗಳಲ್ಲಿ ವಿದ್ಯಾರ್ಥಿಗಳು ಮಣ್ಣಿನ ಗಣೇಶ ಮೂರ್ತಿ ಹಿಡಿದು ಜನರಲ್ಲಿ ಅರಿವು ಮೂಡಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.