![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಮಹಾಕಾವ್ಯಗಳು ಬಹುಸಂಸ್ಕೃತಿ ವಾಹಕ
Team Udayavani, Jul 9, 2018, 12:12 PM IST
![mahakavya.jpg](https://www.udayavani.com/wp-content/uploads/2018/07/9/mahakavya.jpg)
ಬೆಂಗಳೂರು: ಬಹುಸಂಸ್ಕೃತಿಯ ವಾಹಕವಾಗಿರುವ ರಾಮಾಯಣ ಹಾಗೂ ಮಹಾಭಾರತ ಮಹಾಕಾವ್ಯಗಳು ಎಲ್ಲ ಕಾಲದಲ್ಲಿಯೂ ಪ್ರಸ್ತುತ ಎಂದು ಸಂಸದ ವೀರಪ್ಪ ಮೊಯಿಲಿ ಅಭಿಪ್ರಾಯಪಟ್ಟಿದ್ದಾರೆ.
ಪಶ್ಚಿಮ ಕಾರ್ಡ್ ರಸ್ತೆಯ ಇಸ್ಕಾನ್ ಮಲ್ಟಿವಿಷನ್ ಥಿಯೇಟರ್ನಲ್ಲಿ ಭಾರತೀಯ ವಿದ್ಯಾಭವನ ಹಾಗೂ ಇಸ್ಕಾನ್ ಸಂಸ್ಥೆ ಹಮ್ಮಿಕೊಂಡಿದ್ದ ರಾಮಾಯಣ ಸಂದೇಶ ರಾಷ್ಟ್ರೀಯಾ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲೇ ರಾಮಾಯಣ ಹಾಗೂ ಮಹಾಭಾರತದಷ್ಟು ಸಂಸ್ಕೃತಿ ಕಟ್ಟುವ ಕೆಲಸವನ್ನು ಮತ್ಯಾವ ಕಾವ್ಯಗಳು ಮಾಡಿಲ್ಲ.
ಭೂತ ಹಾಗೂ ವರ್ತಮಾನದಲ್ಲಿನ ಪ್ರತಿಯೊಂದು ಸಾಂಸ್ಕೃತಿಕ ಅಂಶಗಳನ್ನು ನಾವು ಈ ಮಹಾಕಾವ್ಯಗಳಲ್ಲಿ ಕಾಣಬಹುದು. ಹಾಗಾಗಿಯೇ ಭವಿಷ್ಯದಲ್ಲಿ ಸಂಸ್ಕೃತಿ ಜೀವಂತವಾಗಿರಬೇಕೆಂದರೆ ಜನರ ಮನದಲ್ಲಿ ಈ ಮಹಾಕಾವ್ಯಗಳು ನೆಲಸಲೇಬೇಕು ಎಂದು ಹೇಳಿದರು.
ಸಂಸ್ಕೃತಿ ಹಾಗೂ ನಗರೀಕರಗಳನ್ನು ಹೋಲಿಕೆ ಮಾಡಿ ನೋಡಿದರೆ ಮಹಾಭಾರತಕ್ಕಿಂತ ಮೊದಲು ರಾಮಾಯಣ ಸೃಷ್ಟಿಯಾಗಿದೆ. ರಾಮಾಯಣವು ಪ್ರಪಂಚದ ಅನೇಕ ದೇಶಗಳಲ್ಲಿ ಅಲ್ಲಿನ ಸಾಂಸ್ಕೃತಿಕ ಅಂಶಗಳ ಆಧಾರದ ಮೇಲೆ ರಚನೆಯಾಗಿ ಆ ದೇಶಗಳ ಮಹಾಕಾವ್ಯವಾಗಿರುವುದು ವಿಶೇಷ.
ರಾಮಾಯಣದಲ್ಲಿ ಭೌಗೋಳಿಕ ಹಿನ್ನೆಲೆಯಲ್ಲಿ ವಿವಿಧ ಸಂಸ್ಕೃತಿಗಳನ್ನು ವಿವರಿಸಿದ್ದು, ಮುಖ್ಯವಾಗಿ ಅಯೋಧ್ಯದ ಮೂಲಕ ನಗರ ಸಂಸ್ಕೃತಿ, ಕಿಷ್ಕಿಂದ ಮೂಲಕ ಅರಣ್ಯ ಸಂಸ್ಕೃತಿ ಹಾಗೂ ಲಂಕಾದ ಮೂಲಕ ದ್ವೀಪ ಸಂಸ್ಕೃತಿಗಳನ್ನು ಸುವಿಸ್ತಾರವಾಗಿ ತಿಳಿಸಲಾಗಿದೆ. ಆದರೆ ಇಂದು ನಾವೆಲ್ಲ ನಗರ ಸಂಸ್ಕೃತಿಗೆ ಕಟ್ಟುಬಿದ್ದು, ನಗರೀಕರಣದ ಹೆಸರಿನಲ್ಲಿ ಅರಣ್ಯ ನಾಶಮಾಡುತ್ತಾ ಆ ಸಂಸ್ಕೃತಿಯನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.
ಸತ್ಯ, ಧರ್ಮ, ಶಾಂತಿ, ಪ್ರೇಮ ಹಾಗೂ ಅಹಿಂಸೆ ಎಂಬ 5 ಮೌಲ್ಯಗಳಿಂದ ರಾಮಾಯಣ ರಚಿತವಾಗಿದ್ದು, ಆಳವಾಗಿ ಅಧ್ಯಯನ ಮಾಡುತ್ತಾ ಹೋದಂತೆ ಸಾಕಷ್ಟು ಹೊಸ ಹೊಸ ಅಂಶಗಳು ದೊರೆಯುತ್ತವೆ. ಹೀಗಾಗಿ, ಇಂದಿಗೂ ಅನೇಕ ಬರಹಗಾರರಿಗೆ ರಾಮಾಯಣ ಸಾಹಿತ್ಯ ಸಾಮಗ್ರಿಯಾಗಿದೆ. ಭಾರತದ ಎಲ್ಲಾ ಭಾಷೆಗಳಲ್ಲೂ ರಚನೆಯಾಗಿರುವುದಲ್ಲದೇ, 34 ವಿದೇಶಿ ಭಾಷೆಗಳಿಗೆ ಭಾಷಾಂತರವಾಗಿದೆ.
ಇನ್ನು 1000ಕ್ಕೂ ಹೆಚ್ಚು ರಾಮಾಯಣ ಆಧಾರಿತ ಕೃತಿಗಳು ಪ್ರಕಟಗೊಂಡಿವೆ. ಆದರೆ, ಇಂತಹ ಮಹಾಕಾವ್ಯವನ್ನು ಒಂದು ಧರ್ಮಕ್ಕೆ ಸೀಮಿತ ಮಾಡಿ ಸಂಕುಚಿತಗೊಳಿಸಬಾರದು ಎಂದು ತಿಳಿಸಿದರು. ಭಾರತೀಯ ವಿದ್ಯಾಭವನದ ನಿರ್ದೇಶಕ ಸುರೇಶ್ ಹಾಗೂ ಇಸ್ಕಾನ್ ಸಂಸ್ಥೆಯ ಸದಸ್ಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.