ಮಹಾಕಾವ್ಯಗಳು ಬಹುಸಂಸ್ಕೃತಿ ವಾಹಕ


Team Udayavani, Jul 9, 2018, 12:12 PM IST

mahakavya.jpg

ಬೆಂಗಳೂರು: ಬಹುಸಂಸ್ಕೃತಿಯ ವಾಹಕವಾಗಿರುವ ರಾಮಾಯಣ ಹಾಗೂ ಮಹಾಭಾರತ ಮಹಾಕಾವ್ಯಗಳು ಎಲ್ಲ ಕಾಲದಲ್ಲಿಯೂ ಪ್ರಸ್ತುತ ಎಂದು ಸಂಸದ ವೀರಪ್ಪ ಮೊಯಿಲಿ ಅಭಿಪ್ರಾಯಪಟ್ಟಿದ್ದಾರೆ.

ಪಶ್ಚಿಮ ಕಾರ್ಡ್‌ ರಸ್ತೆಯ ಇಸ್ಕಾನ್‌ ಮಲ್ಟಿವಿಷನ್‌ ಥಿಯೇಟರ್‌ನಲ್ಲಿ ಭಾರತೀಯ ವಿದ್ಯಾಭವನ ಹಾಗೂ ಇಸ್ಕಾನ್‌ ಸಂಸ್ಥೆ ಹಮ್ಮಿಕೊಂಡಿದ್ದ ರಾಮಾಯಣ ಸಂದೇಶ ರಾಷ್ಟ್ರೀಯಾ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲೇ ರಾಮಾಯಣ ಹಾಗೂ ಮಹಾಭಾರತದಷ್ಟು ಸಂಸ್ಕೃತಿ ಕಟ್ಟುವ ಕೆಲಸವನ್ನು ಮತ್ಯಾವ ಕಾವ್ಯಗಳು ಮಾಡಿಲ್ಲ.

ಭೂತ ಹಾಗೂ ವರ್ತಮಾನದಲ್ಲಿನ ಪ್ರತಿಯೊಂದು ಸಾಂಸ್ಕೃತಿಕ ಅಂಶಗಳನ್ನು ನಾವು ಈ ಮಹಾಕಾವ್ಯಗಳಲ್ಲಿ ಕಾಣಬಹುದು. ಹಾಗಾಗಿಯೇ ಭವಿಷ್ಯದಲ್ಲಿ ಸಂಸ್ಕೃತಿ ಜೀವಂತವಾಗಿರಬೇಕೆಂದರೆ ಜನರ ಮನದಲ್ಲಿ ಈ ಮಹಾಕಾವ್ಯಗಳು ನೆಲಸಲೇಬೇಕು ಎಂದು ಹೇಳಿದರು.

ಸಂಸ್ಕೃತಿ ಹಾಗೂ ನಗರೀಕರಗಳನ್ನು ಹೋಲಿಕೆ ಮಾಡಿ ನೋಡಿದರೆ ಮಹಾಭಾರತಕ್ಕಿಂತ ಮೊದಲು ರಾಮಾಯಣ ಸೃಷ್ಟಿಯಾಗಿದೆ. ರಾಮಾಯಣವು ಪ್ರಪಂಚದ ಅನೇಕ ದೇಶಗಳಲ್ಲಿ ಅಲ್ಲಿನ ಸಾಂಸ್ಕೃತಿಕ ಅಂಶಗಳ ಆಧಾರದ ಮೇಲೆ ರಚನೆಯಾಗಿ ಆ ದೇಶಗಳ ಮಹಾಕಾವ್ಯವಾಗಿರುವುದು ವಿಶೇಷ.

ರಾಮಾಯಣದಲ್ಲಿ ಭೌಗೋಳಿಕ ಹಿನ್ನೆಲೆಯಲ್ಲಿ ವಿವಿಧ ಸಂಸ್ಕೃತಿಗಳನ್ನು ವಿವರಿಸಿದ್ದು, ಮುಖ್ಯವಾಗಿ ಅಯೋಧ್ಯದ ಮೂಲಕ ನಗರ ಸಂಸ್ಕೃತಿ, ಕಿಷ್ಕಿಂದ ಮೂಲಕ ಅರಣ್ಯ ಸಂಸ್ಕೃತಿ ಹಾಗೂ ಲಂಕಾದ ಮೂಲಕ ದ್ವೀಪ ಸಂಸ್ಕೃತಿಗಳನ್ನು  ಸುವಿಸ್ತಾರವಾಗಿ ತಿಳಿಸಲಾಗಿದೆ. ಆದರೆ ಇಂದು ನಾವೆಲ್ಲ ನಗರ ಸಂಸ್ಕೃತಿಗೆ ಕಟ್ಟುಬಿದ್ದು, ನಗರೀಕರಣದ ಹೆಸರಿನಲ್ಲಿ ಅರಣ್ಯ ನಾಶಮಾಡುತ್ತಾ ಆ  ಸಂಸ್ಕೃತಿಯನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.  
ಸತ್ಯ, ಧರ್ಮ, ಶಾಂತಿ, ಪ್ರೇಮ ಹಾಗೂ ಅಹಿಂಸೆ ಎಂಬ 5 ಮೌಲ್ಯಗಳಿಂದ ರಾಮಾಯಣ ರಚಿತವಾಗಿದ್ದು, ಆಳವಾಗಿ ಅಧ್ಯಯನ ಮಾಡುತ್ತಾ ಹೋದಂತೆ ಸಾಕಷ್ಟು ಹೊಸ ಹೊಸ ಅಂಶಗಳು ದೊರೆಯುತ್ತವೆ. ಹೀಗಾಗಿ, ಇಂದಿಗೂ ಅನೇಕ ಬರಹಗಾರರಿಗೆ ರಾಮಾಯಣ ಸಾಹಿತ್ಯ ಸಾಮಗ್ರಿಯಾಗಿದೆ. ಭಾರತದ ಎಲ್ಲಾ ಭಾಷೆಗಳಲ್ಲೂ ರಚನೆಯಾಗಿರುವುದಲ್ಲದೇ, 34 ವಿದೇಶಿ ಭಾಷೆಗಳಿಗೆ ಭಾಷಾಂತರವಾಗಿದೆ.

ಇನ್ನು 1000ಕ್ಕೂ ಹೆಚ್ಚು ರಾಮಾಯಣ ಆಧಾರಿತ  ಕೃತಿಗಳು ಪ್ರಕಟಗೊಂಡಿವೆ. ಆದರೆ, ಇಂತಹ ಮಹಾಕಾವ್ಯವನ್ನು ಒಂದು ಧರ್ಮಕ್ಕೆ ಸೀಮಿತ ಮಾಡಿ ಸಂಕುಚಿತಗೊಳಿಸಬಾರದು ಎಂದು ತಿಳಿಸಿದರು. ಭಾರತೀಯ ವಿದ್ಯಾಭವನದ ನಿರ್ದೇಶಕ ಸುರೇಶ್‌ ಹಾಗೂ ಇಸ್ಕಾನ್‌ ಸಂಸ್ಥೆಯ ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

6-bng-crime

Drugs ಮಾರಾಟ: ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಬಂಧನ ‌

5-bng-crime-1

Bengaluru Crime: ಮನೆ ಮಾಲಕಿಯ ಕೊಂದು ಚಿನ್ನ ದೋಚಿದಳು!

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.