ಆಧಾರ್‌ ಅನುಷ್ಠಾನದಲ್ಲಿ ದೋಷ


Team Udayavani, Oct 30, 2017, 11:42 AM IST

jai-ram-ramesh.jpg

ಬೆಂಗಳೂರು: ಸರ್ಕಾರ ವಿವಿಧ ಯೋಜನೆಗಳನ್ನು ನೇರವಾಗಿ ಫ‌ಲಾನುಭವಿಗೆ ತಲುಪಿಸಲು ಪರಿಚಯಿಸಿದ ತಂತ್ರಜ್ಞಾನ “ಆಧಾರ್‌’. ಆದರೆ, 2014ರ ನಂತರ ಅದರ ಮೂಲ ಪರಿಕಲ್ಪನೆಯೇ ಬದಲಾಗಿದೆ ಎಂದು ಕೇಂದ್ರ ಮಾಜಿ ಸಚಿವ ಜೈರಾಮ್‌ ರಮೇಶ್‌ ತಿಳಿಸಿದರು. 

ನಗರದ ಲಲಿತ್‌ ಅಶೋಕ್‌ ಹೋಟೆಲ್‌ನಲ್ಲಿ ಹಮ್ಮಿಕೊಂಡ ಎರಡು ದಿನಗಳ ಸಾಹಿತ್ಯ ಉತ್ಸವದಲ್ಲಿ ಭಾನುವಾರ “ಆಧಾರ್‌: ಡಿಸ್ಟೋಪಿಯ ಆರ್‌ ಯುಟೋಪಿಯ’ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು. 

ಸರ್ಕಾರದ ಅನೇಕ ಯೋಜನೆಗಳು ಅರ್ಹರಿಗೆ ತಲುಪಬೇಕು. ಅನರ್ಹರ ಪಾಲಾಗಬಾರದು, ಯೋಜನೆಗಳು ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳ್ಳಬೇಕು ಎಂಬ ಉದ್ದೇಶದಿಂದ 2009ರಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಹಲವು ಯೋಜನೆಗಳಲ್ಲಿ ಈ ತಂತ್ರಜ್ಞಾನ ಪರಿಚಯಿಸಲಾಯಿತು.

ಇದು ಕಡ್ಡಾಯವೂ ಆಗಿರಲಿಲ್ಲ; ಬದಲಿಗೆ ಒಂದು ಆಯ್ಕೆಯಾಗಿತ್ತು. ಆದರೆ, 2014ರ ನಂತರ ಇದರ ಮೂಲ ಪರಿಕಲ್ಪನೆಯೇ ಬದಲಾಯಿತು. ಜನನ-ಮರಣ ಪ್ರಮಾಣಪತ್ರ, ಮೊಬೈಲ್‌ ನಂಬರ್‌ ಹೀಗೆ ಎಲ್ಲದಕ್ಕೂ “ಆಧಾರ್‌’ ನೀಡಬೇಕಾಯಿತು. ಹಾಗಾಗಿ, ತಂತ್ರಜ್ಞಾನದಲ್ಲಿ ಲೋಪವಿಲ್ಲ, ಅದರ ಅನುಷ್ಠಾನದಲ್ಲಿ ಸಮಸ್ಯೆ ಇದೆ ಎಂದು ವಿಶ್ಲೇಷಿಸಿದರು. 

“ಈ ಹಿನ್ನೆಲೆಯಲ್ಲಿ ನನ್ನ ಪ್ರಕಾರ ಯಾವ ಉದ್ದೇಶಕ್ಕೆ “ಆಧಾರ್‌’ ಪರಿಚಯಿಸಲಾಯಿತೋ ಅದಕ್ಕಾಗಿ ಆ ತಂತ್ರಜ್ಞಾನ ಸೀಮಿತಗೊಳಿಸಬೇಕು. ನಂತರ ಹಂತ-ಹಂತವಾಗಿ ಅದನ್ನು ಇತರ ಯೋಜನೆಗಳಿಗೆ ವಿಸ್ತರಿಸಬೇಕು’ ಎಂದು ಅಭಿಪ್ರಾಯಪಟ್ಟರು. 

ಆಧಾರ್‌ ವಿಷಯದಲ್ಲಿ ಕೇಂದ್ರ ಸರ್ಕಾರ ಅಂಕಿ-ಸಂಖ್ಯೆಗಳ ಆಟವಾಡುತ್ತಿದೆ. ಎಲ್‌ಪಿಜಿಯಲ್ಲಿ ಆಧಾರ್‌ ತಂತ್ರಜ್ಞಾನದಿಂದ ಬಿಲಿಯನ್‌ ಡಾಲರ್‌ಗಟ್ಟಲೆ ಉಳಿತಾಯವಾಯಿತು ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ, ಕಲ್ಲಿದ್ದಲು ಹಗರಣ, “2ಜಿ ಸ್ಪೆಕ್‌óಂ’ ಹಗರಣವನ್ನು ಬಯಲು ಮಾಡಿದ ಸ್ವತಃ ಸಿಎಜಿ ಕೇಂದ್ರ ಸರ್ಕಾರದ ವಾದವನ್ನು ತಳ್ಳಿಹಾಕಿದೆ ಎಂದು ಇದೇ ವೇಳೆ ತಿಳಿಸಿದರು. 

ಆಧಾರ್‌; ಜನರ ಹೊಣೆಗಾರಿಕೆ
ಯೋಜನಾ ಆಯೋಗದ ಮಾಜಿ ಸದಸ್ಯ ಅರುಣ್‌ ಮೈರಾ ಮಾತನಾಡಿ, ಇಂಟರ್‌ನೆಟ್‌, ಗೂಗಲ್‌, ಫೇಸ್‌ಬುಕ್‌ ಕೂಡ ಇದೆ. ಹಾಗಾಗಿ, ತಂತ್ರಜ್ಞಾನದ ಸದ್ಬಳಕೆಯೂ ಇದೆ; ದುರ್ಬಳಕೆಯೂ ಇದೆ. ಅದರಂತೆ ಆಧಾರ್‌ ಕೂಡ ಒಂದು ತಂತ್ರಜ್ಞಾನ. ಈ ತಂತ್ರಜ್ಞಾನದ ಬಳಕೆ ಮನುಷ್ಯನ ಕೈಯಲ್ಲಿದೆ. ಹಾಗಾಗಿ, ಈ ಉಪಕರಣದ ಸಮರ್ಪಕ ಅನುಷ್ಠಾನದ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು. 

ಭಾರತೀಯ ವಿಶೇಷ ಗುರುತಿನ ಪ್ರಾಧಿಕಾರದ ಪ್ರಾಡಕ್ಟ್ ಮ್ಯಾನೇಜರ್‌ ಸಂಜಯ್‌ ಜೈನ್‌ ಮಾತನಾಡಿ, “ಆಧಾರ್‌’ ಶೇ. 98ರಷ್ಟು ಯಶಸ್ವಿಯಾಗಿದೆ. ಉಳಿದ ಶೇ. 2ರಷ್ಟು ಮಾತ್ರ ದೂರುಗಳು ಕೇಳಿಬರುತ್ತಿವೆ. ಹಿರಿಯ ನಾಗರಿಕರ ಬಯೋಮೆಟ್ರಿಕ್‌ ದತ್ತಾಂಶ ಸಂಗ್ರಹ ಮತ್ತಿತರ ಸಮಸ್ಯೆಗಳು ಕೇಳಿಬರುತ್ತಿವೆ. ಇದು ಕೂಡ ಕೆಲವೇ ದಿನಗಳಲ್ಲಿ ಪರಿಹಾರ ಆಗಲಿದೆ ಎಂದು ತಿಳಿಸಿದರು. 

ನನ್ನ ಪಾನ್‌ ಸಂಖ್ಯೆಗೆ ಆಧಾರ್‌ ಜೋಡಣೆ
ಸಂಸತ್ತಿನಲ್ಲಿ ನಾನು “ಆಧಾರ್‌’ ಅನ್ನು ವಿರೋಧಿಸಿದರೂ, ನನ್ನ ಪಾನ್‌ ಸಂಖ್ಯೆಯೊಂದಿಗೆ ಆಧಾರ್‌ ಸಂಖ್ಯೆ ಜೋಡಣೆ ಮಾಡಿಸುವುದನ್ನು ಮರೆತಿಲ್ಲ…
– “ನಿಮ್ಮ ಖಾತೆಗೆ ಆಧಾರ್‌ ಸಂಖ್ಯೆ ಜೋಡಣೆ ಮಾಡಿಲ್ಲ ಎಂಬ ಎಚ್ಚರಿಕೆ ಸಂದೇಶಗಳು ನಿತ್ಯ ಮೊಬೈಲ್‌ಗೆ ಬರುತ್ತವೆ. ಈ ಬಗ್ಗೆ ಆಧಾರ್‌ ವಿಮರ್ಶಿಸುವ ನಿಮ್ಮ ಸಲಹೆ (ಜೈರಾಂ ರಮೇಶ್‌) ನಿಮ್ಮ ಸಲಹೆ ಏನು’ ಎಂದು ವ್ಯಕ್ತಿಯೊಬ್ಬರಿಂದ ತೂರಿಬಂದ ಪ್ರಶ್ನೆಗೆ ಜೈರಾಂ ರಮೇಶ್‌ ಪ್ರತಿಕ್ರಿಯೆ ಇದು. 

“ಆಧಾರ್‌ ಕಡ್ಡಾಯ ಎಂದು ಸರ್ಕಾರ ನಿಯಮ ಮಾಡಿದೆ. ಆ ನಿಯಮವನ್ನು ನಾವು ಮೊದಲು ಪಾಲಿಸೋಣ. ಮತ್ತೂಂದೆಡೆ ಬೇಕಿದ್ದರೆ ಹೋರಾಟ ಮಾಡೋಣ. ಸ್ವತಃ ನಾನು ಕೂಡ ಸಂಸತ್ತಿನ ಒಳಗಡೆ ನಿಂತು ಇದರ ವಿರುದ್ಧ ಮಾತನಾಡುತ್ತೇನೆ. ಆದರೆ, ನನ್ನ ಪಾನ್‌ ಸಂಖ್ಯೆಯೊಂದಿಗೆ ಆಧಾರ್‌ ಸಂಖ್ಯೆ ಜೋಡಣೆ ಮಾಡಿದ್ದೇನೆ’ ಎಂದು ಹೇಳಿದರು. 

ಸಕ್ರಮ ಅನುಷ್ಠಾನಕ್ಕೆ ಬಹುಮತ
“ಆಧಾರ್‌’ ಇರಬೇಕು ಎಂದು ಬಯಸುವವರು ಎಷ್ಟು ಜನ ಎಂದು ಜೈರಾಂ ಕೇಳಿದಾಗ, ಸಭೆಯಲ್ಲಿದ್ದ ಶೇ. 65ಕ್ಕೂ ಹೆಚ್ಚು ಜನ ಕೈ ಎತ್ತಿದರು. ಬೆನ್ನಲ್ಲೇ “ಆಧಾರ್‌’ ಸರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಎಷ್ಟು ಜನ ಬಯಸುತ್ತೀರಾ ಎಂದು ಕೇಳಿದರು. ಆಗ, ಶೇ. 85ರಷ್ಟು ಜನ ಕೈ ಎತ್ತಿದರು. 

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.