ಆನೆಯ ಪಾದ ಸೇರಿ ಸುಮಾರು 1 ಕೋಟಿ ರೂ. ಮೌಲ್ಯದ ಪ್ರಾಚೀನ ವಸ್ತುಗಳ ಮಾರಾಟಕ್ಕೆ ಯತ್ನ
ಅನಾರೋಗ್ಯ ಪೀಡಿತ ಅಣ್ಣನ ಮಗನ ವೈದ್ಯಕೀಯ ಚಿಕಿತ್ಸೆಗಾಗಿ ಮಾರಾಟಕ್ಕೆ ಯತ್ನ
Team Udayavani, Nov 13, 2021, 10:28 AM IST
ಬೆಂಗಳೂರು: ಆನೆಯ ಪಾದ ಸೇರಿ ಸುಮಾರು 1 ಕೋಟಿ ರೂ. ಮೌಲ್ಯದ ಪ್ರಾಚೀನ ಕಾಲದ ವಸ್ತುಗಳನ್ನು ಮಾರಾಟಕ್ಕೆ ಯತ್ನಿಸಿದ ಆರೋಪಿಯನ್ನು ಕಾಡು ಗೊಂಡ ನಹಳ್ಳಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಕೆ.ಜಿ.ಹಳ್ಳಿಯ ಎಚ್ಬಿಆರ್ ಲೇಔಟ್ ನಿವಾಸಿ ಆರ್ಯನ್ ಖಾನ್ ಬಂಧಿತ. ಅರಣ್ಯ ಇಲಾಖೆಯಿಂದ ನಿರಾಕ್ಷೇಪಣ ಪ್ರಮಾಣಪತ್ರ ಪಡೆಯದೆ ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂದು ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಹೇಳಿದ್ದಾರೆ.
ಬಂಧಿತ ಆರೋಪಿಯಿಂದ ಆನೆ ಪಾದ, ತಾಮ್ರದ ಪ್ಲೇಟ್, ಒಂದು ಮಿಲ್ಕ್ ಜಗ್, ಒಂದು ಟೀ ಪಾಟ್, ಒಂದು ಮಗರ್ ಸ್ಟೇಯರ್, ಭೂತಾನ್ ಶೋ ಪೀಸ್, ಐರೀಷ್ ಟೀ ಮೇಕರ್, ಶುಗರ್ ಪಾಟ್, ಸ್ಮಾಲ್ ಮಿಲ್ಕ್ ಜಗ್, ಒಂದು ಜರ್ಮನ್ ಸಿಲ್ವರ್ ಸೌಟು, ಎರಡು ಜರ್ಮನ್ ಸಿಲ್ವರ್ ಆಶ್ ಟ್ರೇ, 5 ಚಿಕ್ಕ ಮಸ್ಟರ್ಡ್ ಟ್ರೇ, ಎರಡು ಚಿಕ್ಕ ಮಂಚಗಳು, ಎರಡು ಆಫ್ರಿಕನ್ ಆರ್ಟ್ವುಡ್ ಸ್ಪೂನ್, ಪ್ರಾಣಿಯ ಮೂಳೆಯಿಂದ ಮಾಡಿದ ಸ್ಪೂನ್, ಎರಡು ಜರ್ಮನ್ ಸಿಲ್ವರ್ ಫೋರ್ಕ್, ಟೇಬಲ್ ನೈಫ್ ಶಾರ್ಪ್ನರ್ ಹಾಗೂ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:- ಚಿಕ್ಕಮಗಳೂರು: ಪುನೀತ್ ರಿಂದ ಪ್ರೇರೇಪಣೆ, ದೇಹದಾನಕ್ಕೆ ಮುಂದಾದ ಕಾಫಿನಾಡ ದಂಪತಿಗಳು
ಅನಾರೋಗ್ಯ ಪೀಡಿತ ಅಣ್ಣನ ಮಗನ ವೈದ್ಯಕೀಯ ಚಿಕಿತ್ಸೆ ಕೊಡಿಸುವ ಸಲುವಾಗಿ ಮತ್ತು ತನ್ನ ಮನೆಯ ಬಾಡಿಗೆ ಕಟ್ಟಲು ಮಾಡಿ ಕೊಂಡಿರುವ ಸಾಲ ತೀರಿಸಲು ಈ ವಸ್ತುಗಳ ಮಾರಾಟಕ್ಕೆ ಪ್ರಯತ್ನಿಸುತ್ತಿರುವುದಾಗಿ ಪೊಲೀಸರ ಮುಂದೆ ತಿಳಿಸಿದ್ದಾನೆ. ವಶಪಡಿಸಿಕೊಂಡಿರುವ ವಸ್ತುಗಳಿಗೆ ಪಾಶ್ಚಿಮಾತ್ಯ ದೇಶಗಳಲ್ಲಿ ಅಪಾರ ಬೇಡಿಕೆ ಇದೆ ಎಂದು ತಿಳಿದು ಬಂದಿದೆ.
ಕಾಡುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಆರೋಪಿ ಆರ್ಯನ್ ಖಾನ್ ತಾತ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ ಆಂಗ್ಲೋ-ಇಂಡಿಯನ್ ಮಹಿಳೆ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಇಂಗ್ಲೆಂಡ್ಗೆ ಹೋಗುವಾಗ ಮನೆಯಲ್ಲಿದ್ದ ಪ್ರಾಚೀನ ವಸ್ತುಗಳನ್ನು ಉಡುಗೊರೆಯಾಗಿ ಆ ಮಹಿಳೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ