ಎಸ್ಕೇಪ್ ಕಾರ್ತಿಕ್ ಪೊಲೀಸರ ಬಲೆಗೆ
Team Udayavani, Mar 23, 2019, 6:54 AM IST
ಬೆಂಗಳೂರು: ಮನೆಗಳ ಬೀಗ ಮುರಿದು ಕಳವು ಮಾಡುತ್ತಿದ್ದ ಕುಖ್ಯಾತ ಕಳ್ಳ ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ (30) ಜೈಲಿನಿಂದ ಹೊರ ಬಂದ ಎರಡೇ ತಿಂಗಳಲ್ಲಿ ಕೊತ್ತನೂರು ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆತನಿಂದ 13 ಲಕ್ಷ ರೂ. ಮೌಲ್ಯದ 400 ಗ್ರಾಂ ಚಿನ್ನಾಭರಣ ಹಾಗೂ ದುಬಾರಿ ಬೆಲೆಯ ಒಂದು ಕೆಟಿಎಂ ಬೈಕ್ ವಶಪಡಿಸಿಕೊಳ್ಳಲಾಗಿದೆ.
ಹದಿನೈದು ವರ್ಷಗಳಿಂದ ಮನೆಗಳ್ಳತನ ಮಾಡುವುದನ್ನೇ ವೃತ್ತಿಯನ್ನಾಗಿಸಿಕೊಂಡಿರುವ ಆರೋಪಿ ವಿರುದ್ಧ ರಾಜ್ಯದ ವಿವಿಧ ಠಾಣೆಗಳಲ್ಲಿ ಸುಮಾರು 70ಕ್ಕೂ ಅಧಿಕ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಎರಡು ಬಾರಿ ಪರಪ್ಪನ ಅಗ್ರಹಾರ ಕಾರಗೃಹದಿಂದ ಪರಾರಿಯಾಗಿದ್ದ. ಹೀಗಾಗಿ, ಆತನಿಗೆ ಎಸ್ಕೇಪ್ ಕಾರ್ತಿಕ್ ಎಂದು ಕರೆಯಲಾಗುತ್ತದೆ ಎಂದು ಪೊಲೀಸರು ಹೇಳಿದರು.
ಜನವರಿಯಲ್ಲಿ ಷರತ್ತು ಬದ್ಧ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ ಕಾರ್ತಿಕ್, ನಂತರ ಕೊತ್ತನೂರು, ಸಂಪಿಗೆಹಳ್ಳಿ ಹಾಗೂ ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಗಳಲ್ಲಿ ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಆಧರಿಸಿ ಮತ್ತೆ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಾರ್ತಿಕ್ ಬಂಧನದಿಂದ ಕೊತ್ತನೂರು, ರಾಮಮೂರ್ತಿ ನಗರ ಠಾಣೆಯ ತಲಾ ಒಂದು ಹಾಗೂ ಸಂಪಿಗೆಹಳ್ಳಿಯ ಎರಡು ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಕಳವು ವಸ್ತುಗಳನ್ನು ಕಡಿಮೆ ವೊತ್ತಕ್ಕೆ ಮಾರಾಟ ಮಾಡುತ್ತಿದ್ದ ಆರೋಪಿ, ಮೋಜಿನ ಜೀವನ ನಡೆಸುತ್ತಿದ್ದ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ