ರಾಜ್ಯದಲ್ಲಿ 38 ಮತ ಎಣಿಕೆ ಕೇಂದ್ರ ಸ್ಥಾಪನೆ


Team Udayavani, May 14, 2018, 6:55 AM IST

Kumar,-Election-Commission,.jpg

ಬೆಂಗಳೂರು: ಸುಸೂತ್ರ, ಶಾಂತಿಯುತ ಮತ್ತು ದಾಖಲೆ ಮತದಾನದ ಬಳಿಕ ಇದೀಗ ಚುನಾವಣಾ ಆಯೋಗ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಇಡೀ ರಾಜ್ಯದಲ್ಲಿ 38 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ
ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ನಾಲ್ಕು, ತುಮಕೂರು ಜಿಲ್ಲೆಯಲ್ಲಿ ಮೂರು, ಚಿತ್ರದುರ್ಗ, ದಕ್ಷಿಣ ಕನ್ನಡ ಹಾಗೂ ಮೈಸೂರು ಜಿಲ್ಲೆಯಲ್ಲಿ ತಲಾ ಎರಡರಂತೆ 33 ಚುನಾವಣಾ ಜಿಲ್ಲೆಗಳಲ್ಲಿ ಒಟ್ಟು 38 ಮತ ಎಣಿಕೆ ಕೇಂದ್ರ ಸ್ಥಾಪಿಸಲಾಗಿದೆ. ನಿಗದಿಯಂತೆ ಮಂಗಳವಾರ ಎಲ್ಲ ಕೇಂದ್ರಗಳಲ್ಲಿ ಏಕಕಾಲಕ್ಕೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ ಎಂದರು.

ಮತಯಂತ್ರಗಳನ್ನು ಸಂಗ್ರಹಿಸಿಟ್ಟಿರುವ ಕೇಂದ್ರಗಳಿಗೆ ಅರೆಸೇನಾ ಪಡೆ, ಕೇಂದ್ರ ಮೀಸಲು ಪಡೆಯ ಶಸOಉಸಜ್ಜಿತ ಸಿಬ್ಬಂದಿ ನಿಯೋಜಿಸಲಾಗಿದೆ. ಮತಯಂತ್ರಗಳಿರುವ ಸ್ಟ್ರಾಂಗ್‌ ರೂಂಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, 24 ಗಂಟೆ ಕಟ್ಟೆಚ್ಚರ ವಹಿಸಲಾಗುತ್ತದೆ. ಮತ ಎಣಿಕೆ ದಿನ ಕೇಂದ್ರಗಳ ಸುತ್ತ ಬಿಗಿ ಬಂದೋಬಸ್ತ್ಏರ್ಪಡಿಸಲಾಗುವುದು ಎಂದು ತಿಳಿಸಿದರು.

ಮಹಾನಗರಗಳಲ್ಲಿ ಕಮೀಷನರ್‌ಗಳು, ವಲಯವಾರು ಐಜಿಪಿಗಳು, ಜಿಲ್ಲಾ ಕೇಂದ್ರಗಳಲ್ಲಿ ಎಸ್‌ಪಿಗಳು ಭದ್ರತೆಯ ನಿಗಾವಹಿಸಿದ್ದಾರೆ. ಚುನಾವಣೆಯ ಭದ್ರತೆಗಾಗಿ ಕೇಂದ್ರದಿಂದ ಬಂದಿರುವ ಅರೆ ಸೇನಾಪಡೆಯ 40 ಕಂಪನಿಗಳು ಸೇರಿ ಕೇಂದ್ರ ಮೀಸಲು ಪಡೆಯ 585 ಕಂಪನಿಗಳನ್ನು ಮತ ಎಣಿಕೆ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಗೆ
ಬಳಸಿಕೊಳ್ಳಲಾಗುತ್ತಿದೆ. ಜತೆಗೆ ರಾಜ್ಯ ಮೀಸಲು ಪಡೆ, ಸಿಎಆರ್‌, ಡಿಎಆರ್‌ 754 ತುಕಡಿಗಳು 278 ಡಿವೈಎಸ್‌ಪಿಗಳು, 947 ಮಂದಿ ಪೊಲೀಸ್‌ ಇನ್ಸ್‌ಪೆಕ್ಟರ್‌ಗಳು, 5,322 ಎಎಸ್‌ಐಗಳು, 45,685 ಮುಖ್ಯಪೇದೆ-ಪೇದೆಗಳು, 26,672 ಗೃಹರಕ್ಷಕ ಸಿಬ್ಬಂದಿ ಭದ್ರತೆಯಲ್ಲಿ ತೊಡಗಲಿದ್ದಾರೆ ಎಂದು ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಕಮಲ್‌ಪಂತ್‌ ಇದೇ ವೇಳೆ ತಿಳಿಸಿದ್ದಾರೆ. 

ಐಟಿ ಅಧಿಕಾರಿಗಳಿಗೆ ಜೀವ ಬೆದರಿಕೆ
ಬೆಂಗಳೂರು
: ಚುನಾವಣಾ ಪೂರ್ವದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ ಬಂದಿದೆ.

ಕಾರ್ಯಾಚರಣೆ ಮುಂದುವರಿಸಬೇಕಾಗಿರುವುದರಿಂದ ನಮ್ಮ ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ಕೊಡಿ ಎಂದು ಆದಾಯ ತೆರಿಗೆ ಇಲಾಖೆ ಮಹಾನಿರ್ದೇಶಕ ಬಿ.ಆರ್‌.ಬಾಲಕೃಷ್ಣನ್‌ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಮೇ 11ರಂದು ಬಾಲಕೃಷ್ಣನ್‌ ಅವರು ಮುಖ್ಯ ಕಾರ್ಯದರ್ಶಿಗೆ ಈ ಪತ್ರ ಬರೆದಿದ್ದು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರಾಜ್ಯದಲ್ಲಿ ಇನ್ನೂ ತಮ್ಮ ಕಾರ್ಯಾಚರಣೆ ಮುಂದುವರಿಸಬೇಕಿದೆ.

ಹೀಗಾಗಿ ಅವರಿಗೆ ಸೂಕ್ತ ರಕ್ಷಣೆ ಒದಗಿಸಿ ಎಂದು ಮನವಿ ಮಾಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ
ನಿಗದಿಯಾಗುತ್ತಿದ್ದಂತೆ ಐಟಿ ಅಧಿಕಾರಿಗಳು ರಾಜ್ಯಾ ದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿದರು. ರಾಜಕೀಯ ಮುಖಂಡರು, ಅವರ ಆಪ್ತರು ಹಾಗೂ ತೆರಿಗೆ ವಂಚಕರ ನಿವಾಸ ಮತ್ತು ಕಚೇರಿಗಳ ಮೇಲೆ ಸರಣಿ ದಾಳಿ ನಡೆಸಿ, ಕೋಟ್ಯಂತರ ರೂ. ಹಣ ಹಾಗೂ ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದ್ದರು. ಈ ದಾಳಿ ವೇಳೆ ಅಘೋಷಿತ 34 ಕೋಟಿ ರೂ. ಮೌಲ್ಯದ ನಗದು ಪತ್ತೆ ಹಚ್ಚಿದ್ದರು.

ಇದಕ್ಕೆ ಆಕ್ರೋಶಗೊಂಡಿರುವ ಕೆಲ ರಾಜಕೀಯ ಮುಖಂಡರು ಹಾಗೂ ಕಿಡಿಗೇಡಿಗಳು ದಾಳಿ ನಡೆಸಿದ ಐಟಿ ಅಧಿಕಾರಿಗಳ ಮೇಲೆ ಹಲ್ಲೆ ಮಾತ್ರವಲ್ಲದೆ, ಕೊಲೆಗೂ ನಿರ್ಧರಿಸಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ಬಂದಿದೆ. ಅಲ್ಲದೆ, ಈ ವಿಚಾರ ರಾಜ್ಯ ಪೊಲೀಸರ ಗಮನಕ್ಕೂ ಬಂದಿದ್ದು, ಕೆಲ ದಿನಗಳ ಹಿಂದೆ ಸರಣಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಜಿಲ್ಲೆಗಳಲ್ಲಿ ಇನ್ನೂ ಕೆಲವೆಡೆ ದಾಳಿ ನಡೆಸಬೇಕಿದೆ.

ಹೀಗಾಗಿ ಮುಂದಿನ ದಿನಗಳಲ್ಲಿ ಕೆಲ ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳ ಮೇಲೆ ದಾಳಿಗೆ ಐಟಿ ಸಿದಟಛಿತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಗುಪ್ತಚರ ಇಲಾಖೆ ಹಾಗೂ ಪೊಲೀಸರು ಐಟಿ ತನಿಖಾಧಿಕಾರಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದ್ದಾರೆ. ಹೀಗಾಗಿ ಬೆಂಗಳೂರು ಹಾಗೂ ಇತರೆ ಜಿಲ್ಲೆಗಳಲ್ಲಿರುವ ಐಟಿ ಅಧಿಕಾರಿಗಳಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಮಹಾನಿರ್ದೇಶಕ ಬಿ.ಆರ್‌.ಬಾಲಕೃಷ್ಣನ್‌ ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.