ಬೆಂ.ವಿವಿ ಪ್ರತಿಮೆಗಳ ಪ್ರತಿಷ್ಠಾಪನೆ ಕಗ್ಗಂಟು


Team Udayavani, May 8, 2019, 3:06 AM IST

BENGLORE-VV

ಬೆಂಗಳೂರು: ಸರಸ್ವತಿ ಪ್ರತಿಮೆ ಜಾಗದಲ್ಲಿ ಬುದ್ಧ ಪ್ರತಿಮೆ ಪ್ರತಿಷ್ಠಾಪನೆ ವಿಚಾರದಲ್ಲಿ ಬೆಂಗಳೂರು ವಿವಿ ಕೆಲ ಪ್ರಾಧ್ಯಾಪಕ ವರ್ಗ ಹಾಗೂ ಆಡಳಿತ ಮಂಡಳಿ ನಡುವೆ ಮುಸುಕಿನ ಗುದ್ದಾಟ ನಡೆದಿದ್ದು, ವಿವಾದದ ಸ್ವರೂಪ ಪಡೆದಿದೆ.

ಸರಸ್ವತಿ ಪ್ರತಿಮೆ ಜಾಗದಲ್ಲಿ ಬುದ್ಧನ ಪ್ರತಿಮೆ ಪ್ರತಿಷ್ಠಾಪನೆ ವಿಚಾರ ಪ್ರತಿಷ್ಠೆಯಾಗಿ ಮಾರ್ಪಟ್ಟಿದ್ದು, ಸರಸ್ವತಿ ಪ್ರತಿಮೆ ಅಕ್ಕ ಪಕ್ಕದಲ್ಲಿ ಬುದ್ಧ ಹಾಗೂ ಬಸವಣ್ಣನ ಪ್ರತಿಮೆಯೂ ಪ್ರತಿಷ್ಠಾಪನೆ ಮಾಡಬೇಕು ಎಂಬ ವಿಚಾರದಲ್ಲಿ ಹಗ್ಗ ಜಗ್ಗಾಟ ನಡೆದಿದೆ.

ಸರಸ್ವತಿ ಪ್ರತಿಮೆಯ ಜಾಗದಲ್ಲಿ ಬುದ್ಧನ ಪ್ರತಿಮೆ ಪ್ರತಿಷ್ಠಾಪಿಸಿದ್ದಕ್ಕೆ ವಿವಿ ಪ್ರಾಧ್ಯಾಪಕ ಹಾಗೂ ವಿದ್ಯಾರ್ಥಿಗಳ ವಲಯದಲ್ಲಿ ಪರ ವಿರೋಧದ ಚರ್ಚೆ ಆರಂಭವಾಗಿದೆ. ಬುದ್ಧನ ಪ್ರತಿಮೆ ಪ್ರತಿಷ್ಠಾಪಿಸಿದ್ದು ತಪ್ಪಲ್ಲ ಎಂದು ಒಂದು ವರ್ಗ ವಾದಿಸಿದರೆ , ಸರಸ್ವತಿ ಪ್ರತಿಮೆ ಮೊದಲಿನ ಜಾಗದಲ್ಲೇ ಇರಬೇಕು ಎಂದು ಇನ್ನೊಂದು ವರ್ಗ ಪಟ್ಟು ಹಿಡಿದಿದೆ.

ಸೋಮವಾರ ನಡೆದಿದ್ದ ತುರ್ತು ಸಿಂಡಿಕೇಟ್‌ ಸಭೆಯಲ್ಲಿ ಸರಸ್ವತಿ ಪ್ರತಿಮೆಯನ್ನು ಮೊದಲಿದ್ದ ಜಾಗದಲ್ಲೇ ಪ್ರತಿಷ್ಠಾಪಿಸಬೇಕು ಎಂಬ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಅಲ್ಲದೆ, ಬುದ್ಧನ ಪ್ರತಿಮೆಯ ಪ್ರತಿಷ್ಠಾಪನೆಗೆ ಜಾಗ ಗುರುತಿಸಲು ಸಿಂಡಿಕೇಟ್‌ ಉಪಸಮಿತಿ ಕೂಡ ರಚನೆ ಮಾಡಲಾಗಿತ್ತು.

ಸಿಂಡಿಕೇಟ್‌ ಉಪಸಮಿತಿ ಮಂಗಳವಾರ ಸಭೆ ಸೇರಿ, ಸರಸ್ವತಿ ಪ್ರತಿಮೆಯ ಒಂದು ಪಕ್ಕದಲ್ಲಿ ಬುದ್ಧನ ಪ್ರತಿಮೆ ಹಾಗೂ ಇನ್ನೊಂದು ಪಕ್ಕದಲ್ಲಿ ಬಸವಣ್ಣನ ಪ್ರತಿಮೆ ಪ್ರತಿಷ್ಠಾಪಿಸಬೇಕು ಎಂದು ವರದಿ ನೀಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಸರಸ್ವತಿ ಪ್ರತಿಮೆ ಇರುವ ಜಾಗದಲ್ಲಿ ಬುದ್ಧನ ಪ್ರತಿಮೆ ಪ್ರತಿಷ್ಠಾಪನೆ ಮಾಡಿರುವುದು ಯಾರು ಎಂಬುದು ಬೆಂವಿವಿ ಆಡಳಿತ ಮಂಡಳಿಯವರಿಗೆಲ್ಲರಿಗೂ ತಿಳಿದಿದೆ. ಸಿಸಿ ಕ್ಯಾಮೆರಾದ ದೃಶ್ಯಾವಳಿಗಳು ವಿವಿಯ ಬಳಿ ಇದೆ. ಆದರೆ, ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಸರಸ್ವತಿ ಪ್ರತಿಮೆಯನ್ನು ಅಲ್ಲೇ ಪಕ್ಕದಲ್ಲಿ ಪ್ರತಿಷ್ಠಾಪಿಸಿ, ಆದರೆ, ಬುದ್ಧನ ಪ್ರತಿಮೆ ತೆಗೆಯಕೂಡದು ಎಂಬ ತಾಕೀತು ಕೂಡ ಹಾಕುತ್ತಿದ್ದಾರೆ ಮತ್ತು ಈ ವಿಚಾರದಲ್ಲಿ ಬೆಂವಿವಿ ತನ್ನ ಸಿಂಡಿಕೇಟ್‌ ನಿರ್ಣಯಕ್ಕೆ ತಕ್ಕಂತೆ ನಡೆದುಕೊಳ್ಳಲು ಸಾಧ್ಯವಾಗದ ಸ್ಥಿತಿಗೆ ತಲುಪಿದೆ ಎಂದು ಹೇಳಲಾಗಿದೆ.

ಬುದ್ಧನ ಪ್ರತಿಮೆ ಎಲ್ಲಿಂದ ಬಂತು?: ಬುದ್ಧನ ಪ್ರತಿಮೆ ಬೆಂಗಳೂರು ವಿವಿಯ ಜ್ಞಾನಭಾರತಿ ಆವರಣದಲ್ಲಿ ಅಂಬೇಡ್ಕರ್‌ ಅಧ್ಯಯನ ಮತ್ತು ಸಂಶೋಧನಾ ಪೀಠದ ಮುಂಭಾಗದಲ್ಲಿ ಬುದ್ಧನ ವಿಗ್ರಹ ಪ್ರತಿಷ್ಠಾಪಿಸಿ, ಬುದ್ಧವಿಹಾರ ನಿರ್ಮಿಸಲು ಈಗಾಗಲೇ ಯೋಜನೆ ಸಿದ್ಧಪಡಿಸಲಾಗಿತ್ತು. ಅದಕ್ಕಾಗಿ ಬುದ್ಧನ ಕಲ್ಲಿನ ಪ್ರತಿಮೆಯನ್ನು ಕೆತ್ತಿಡಲಾಗಿತ್ತು.

ಆದರೆ, ವಿವಿಯ ತಾಂತ್ರಿಕ ಕಾರಣಗಳಿಂದಾಗಿ ಪ್ರತಿಮೆಯನ್ನು ಪ್ರತಿಷ್ಠಾಪಿಸಿರಲಿಲ್ಲ. ಇದೇ ಸಮಯನ್ನು ಬಳಸಿಕೊಂಡು ವಿಶ್ವವಿದ್ಯಾಲಯದ ಕೆಲವು ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿಕೊಂಡು ಸರಸ್ವತಿ ಪ್ರತಿಮೆ ಇದ್ದ ಜಾಗದಲ್ಲಿ ಬುದ್ಧನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ.

ವಿವಾದ ಹೇಗಾಯ್ತು?: ಬುದ್ಧನ ವಿಗ್ರಹ ಪ್ರತಿಷ್ಠಾಪಿಸಲು ಪ್ರತ್ಯೇಕ ಸ್ಥಳ ಈಗಾಗಲೇ ನಿರ್ಧರಿಸಿದ್ದರೂ, ಸರಸ್ವತಿ ಪ್ರತಿಮೆ ಇರುವ ಜಾಗದಲ್ಲಿ ಅದನ್ನು ಏಕಾಏಕಿ ತಂದಿಟ್ಟು, ವಿವಾದ ಸೃಷ್ಟಿಸುವುದೇ ಅವರ ಉದ್ದೇಶವಾಗಿತ್ತು. ಅಲ್ಲದೆ, ಸರಸ್ವತಿ ಪ್ರತಿಮೆಗೂ ಬುದ್ಧನ ಪ್ರತಿಮೆಗೂ ಸಂಬಂಧವೇ ಇಲ್ಲ.

ಬೆಂವಿವಿ ಆಡಳಿತ ಕಚೇರಿಯ ಮುಂಭಾಗದಲ್ಲಿ ಅಂಬೇಡ್ಕರ್‌ ಅವರ ಪ್ರತಿಮೆ ಇದೆ. ಗಾಂಧಿ ಅಧ್ಯಯನ ಪೀಠದಲ್ಲಿ ಗಾಂಧೀಜಿಯವರ ಪ್ರತಿಮೆ ಇದೆ. ಆಯಾ ವಿಭಾಗಕ್ಕೆ ಸಂಬಂಧಿಸಿದ ಜಾಗದಲ್ಲಿ ಪ್ರತಿಮೆ ಸ್ಥಾಪಿಸುವುದು ತಪ್ಪಲ್ಲ.

ಆದರೆ, ಸರಸ್ವತಿ ಪ್ರತಿಮೆ ಇರುವ ಜಾಗದಲ್ಲಿ ಬುದ್ಧನ ಪ್ರತಿಮೆ ಇಟ್ಟು ಅದನ್ನು ತೆಗೆಯಬಾರದು ಎಂದು ಆಡಳಿತ ಮಂಡಳಿಗೆ ತಾಕೀತು ಮಾಡುವುದು ನೋಡಿದರೆ, ಇಡೀ ಪ್ರಕರಣದ ಹಿಂದೆ ಯಾರೋ ಪ್ರಭಾವಿಗಳಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಉದ್ದೇಶ ಪೂರ್ವಕವಾಗಿಯೇ ಹೀಗೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವರದಿ ಕೇಳಿದ್ದೇನೆ – ಎಂ.ಬಿ.ಪಾಟೀಲ್‌: ಬೆಂಗಳೂರು ವಿವಿ ಆವರಣದಲ್ಲಿ ಸರಸ್ವತಿ ಮೂರ್ತಿ ತೆರವು ಮಾಡಿ ಬುದ್ಧ ಪ್ರತಿಮೆ ಸ್ಥಾಪನೆ ಮಾಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಿರುವ ವಿವಾದ ಕುರಿತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಂದ ವರದಿ ಕೇಳಿದ್ದೇನೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ಯಾವುದೇ ಮೂರ್ತಿ ತೆಗೆದು ಬೇರೆ ಮೂರ್ತಿ ಸ್ಥಾಪನೆ ಮಾಡುವುದು ಸರಿಯಲ್ಲ. ಸರಸ್ವತಿ, ಬುದ್ಧ ಎಲ್ಲರ ಮೇಲೂ ಗೌರವವಿದೆ ಎಂದು ಹೇಳಿದರು. ಯಾರ ಭಾವನೆಗಳಿಗೂ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕು. ಅಲ್ಲಿ ಯಾವುದೇ ವಿವಾದಕ್ಕೆ ಅವಕಾಶ ಮಾಡಿಕೊಡಬಾರದು. ಎಂದು ಸೂಚನೆ ನೀಡಲಾಗಿದೆ ಎಂದರು.

“ಬೆಂಗಳೂರು ವಿಶ್ವವಿದ್ಯಾಲಯ ಕುಲಸಚಿವರು ತಮ್ಮ ಕಚೇರಿ ಮುಂಭಾಗ ಭದ್ರತೆ ಒದಗಿಸುವಂತೆ ಕೋರಿದ್ದು ಸ್ಥಳೀಯ ಠಾಣೆ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ. ದೂರು ನೀಡಿದರೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತದೆ’
-ರವಿ ಡಿ ಚೆನ್ನಣ್ಣವರ್‌, ಡಿಸಿಪಿ, ಪಶ್ಚಿಮ ವಿಭಾಗ

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.