ಖಾಕಿ ಕಾವಲಲ್ಲಿ ಸರಸ್ವತಿ ವಿಗ್ರಹ ಸ್ಥಾಪನೆ


Team Udayavani, Aug 27, 2019, 3:08 AM IST

khaki

ಬೆಂಗಳೂರು: ಆರು ತಿಂಗಳಿಂದ ಸದ್ದು ಮಾಡುತಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಸರಸ್ವತಿ ಪ್ರತಿಮೆ ಪ್ರತಿಷ್ಠಾಪನೆ ಕಾರ್ಯ ಸೋಮವಾರ ಮುಂಜಾನೆ 5.45ಕ್ಕೆ ಪೊಲೀಸ್‌ ಸರ್ಪಗಾವಲಿನಲ್ಲಿ ನಡೆಯಿತು. ಸರಸ್ವತಿ ವಿಗ್ರಹ ಪ್ರತಿಷ್ಠಾಪನೆಗೆ ವಿದ್ಯಾರ್ಥಿಗಳ ನಡುವೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿದ್ದ ಕಾರಣ ವಿವಿ ಮುಂಭಾಗ 70ಕ್ಕೂ ಹೆಚ್ಚು ಪೊಲೀಸರ ಕಾವಲಿನಲ್ಲಿ ಕುಲಪತಿ ಪ್ರೊ. ಕೆ.ಆರ್‌.ವೇಣುಗೋಪಾಲ್‌ ಪೂಜೆ ನೆರವೇರಿಸಿ ಸರಸ್ವತಿ ವಿಗ್ರಹ ಪ್ರತಿಷ್ಠಾಪಿಸಿದರು.

ವಿಗ್ರಹ ಪ್ರತಿಷ್ಠಾಪನೆಗೆ ಎಂಟು ಲಕ್ಷ ರೂ. ಖರ್ಚಾಗಿದ್ದು, ಪೂರ್ಣ ವೆಚ್ಚವನ್ನು ಕುಲಪತಿ ಪ್ರೊ.ವೇಣುಗೋಪಾಲ್‌ ವೈಯಕ್ತಿಕವಾಗಿ ಭರಿಸಿದ್ದಾರೆ. ವಿಗ್ರಹಕ್ಕೆ ಎರಡೂವರೆ ಲಕ್ಷ ನೀಡಲಾಗಿದ್ದು, ವಿಗ್ರಹ ಪ್ರತಿಷ್ಠಾಪನಾ ಪೀಠ ಮತ್ತು ಗಾಜಿನ ಕವಚಕ್ಕೆ ಐದೂವರೆ ಲಕ್ಷ ಖರ್ಚಾಗಿದೆ ಎಂದು ಹೇಳಲಾಗಿದೆ. ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ.ಬಿ.ಕೆ.ರವಿ, ಮೌಲ್ಯಮಾಪನ ಕುಲಸಚಿವ ಪ್ರೊ.ಸಿ.ಶಿವರಾಜು, ಕೆಲ ಹಿರಿಯ ಪ್ರಾದ್ಯಾಪಕರು ಭಾಗವಹಿಸಿದ್ದರು.

ಏನಿದು ವಿಗ್ರಹ ವಿವಾದ?: ಬೆಂಗಳೂರು ವಿವಿ ಕೇಂದ್ರ ಕಚೇರಿ ಮುಂಭಾಗ ಈ ಹಿಂದೆ ಪ್ರತಿಷ್ಠಾಪಿಸಿದ್ದ ಸರಸ್ವತಿ ವಿಗ್ರಹದ ಕೈ ಮುರಿದಿತ್ತು. ಕಾರಣ, ಸಿಂಡಿಕೇಟ್‌ ಸಭೆಯ ಗಮನಕ್ಕೆ ತಾರದೆ ಕುಲಪತಿಗಳು ವಿಗ್ರಹವನ್ನು ತೆರವುಗೊಳಿಸಿದ್ದರು. ನಂತರ ಅವರದ್ದೇ ಸ್ವಂತ ಹಣದಿಂದ ವಿಗ್ರಹ ಪ್ರತಿಷ್ಠಾಪಿಸಲು ಮುಂದಾದ ವಿಷಯ ತಿಳಿದ ವಿದ್ಯಾರ್ಥಿಗಳು,ಹಿರಿಯ ಪ್ರಾಧ್ಯಾಪಕರಾದ ಬಿ.ಸಿ.ಮೈಲಾರಪ್ಪ ಮತ್ತು ಟಿ.ಎಚ್‌.ಮೂರ್ತಿ ನೇತೃತ್ವದಲ್ಲಿ ಸರಸ್ವತಿ ವಿಗ್ರಹವಿದ್ದ ಪೀಠದಲ್ಲಿ ಬುದ್ಧನ ಪ್ರತಿಮೆ ಪ್ರತಿಷ್ಠಾಪಿಸಿದ್ದರು ಎನ್ನಲಾಗಿತ್ತು.

ಇದರಿಂದ ವಿಶ್ವವಿದ್ಯಾಲಯದಲ್ಲಿ ಕೆಲ ದಿನ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಬಳಿಕ, ಸರ್ಕಾರ ಮಧ್ಯ ಪ್ರವೇಶಿಸಿ ಉನ್ನತ ಶಿಕ್ಷಣ ಪರಿಷತ್‌ ಮೂಲಕ, ಮೂಲ ವಿಗ್ರಹಗಳನ್ನು ಹೊರತುಪಡಿಸಿ ಬೇರಾವುದೇ ವಿಗ್ರಹಗಳನ್ನು ವಿವಿ ಆವರಣದಲ್ಲಿ ಪ್ರತಿಷ್ಠಾಪಿಸಲು ಅವಕಾಶ ನೀಡದಂತೆ ರಾಜ್ಯದ ಎಲ್ಲಾ ವಿವಿಗಳಿಗೆ ನಿರ್ದೇಶನ ನೀಡಲಾಗಿತ್ತು.

ನಂತರ ನಡೆದ ಸಿಂಡಿಕೇಟ್‌ ಸಭೆಯಲ್ಲಿ ರಾಜ್ಯಪಾಲರ ನಿರ್ದೇಶಿತ ಸಿಂಡಿಕೇಟ್‌ ಸದಸ್ಯ ಬಿ.ಶಿವಣ್ಣ ನೇತೃತ್ವದಲ್ಲಿ ಬುದ್ಧ ಹಾಗೂ ಸರಸ್ವತಿ ಎರಡೂ ವಿಗ್ರಹಗಳ ಪ್ರತಿಷ್ಠಾಪನೆಗೆ ಅವಕಾಶ ನೀಡಲು ತೀರ್ಮಾನಿಸಲಾಗಿತ್ತು. ಈ ಹಿಂದೆ ಸರಸ್ವತಿ ವಿಗ್ರಹವಿದ್ದ ಮೂಲ ಸ್ಥಳದಲ್ಲಿ ಹೊಸ ಸರಸ್ವತಿ ವಿಗ್ರಹವನ್ನೇ ಪ್ರತಿಸಾuಪಿಸಿ, ಬುದ್ಧನ ಪ್ರತಿಮೆಗೆ ಸೂಕ್ತ ಜಾಗ ಕಲ್ಪಿಸುವ ಭರವಸೆ ನೀಡಿದ್ದರು.

ಬುದ್ಧ ಪ್ರತಿಮೆ ಎಲ್ಲಿದೆ?: ಆರು ತಿಂಗಳ ಹಿಂದೆ ಸರಸ್ವತಿ ವಿಗ್ರಹವಿದ್ದ ಸ್ಥಳ ಖಾಲಿಯಾಗುತಿದ್ದಂತೆ ಅಲ್ಲಿ ಕೂರಿಸಿದ ಬುದ್ಧನ ಪ್ರತಿಮೆ ಕೆಳ ಮಹಡಿಯಲ್ಲಿ ಧೂಳು ಹಿಡಿಯುತಿದೆ. ವಿವಿ ಆವರಣದಲ್ಲಿ ಹಾಲಿ ನಿರ್ಮಾಣವಾಗುತ್ತಿರುವ ಬುದ್ಧ ಧ್ಯಾನ ಕೇಂದ್ರದಲ್ಲಿ ಅದನ್ನು ಪ್ರತಿಷ್ಠಾಪಿಸಲು ತೀರ್ಮಾನಿಸಲಾಗಿದೆ. ಧ್ಯಾನ ಮಂದಿರದ ನಿರ್ಮಾಣ ಮುಂದಿನ ವರ್ಷಕ್ಕೆ ಪೂರ್ಣಗೊಳ್ಳಲಿದೆ ಎಂದು ಕುಲಪತಿ ಪ್ರೊ.ಕೆ.ಆರ್‌.ವೇಣುಗೋಪಾಲ್‌ ತಿಳಿಸಿದರು.

ಗೊಂದಲ ಸೃಷ್ಟಿ?: ಬುದ್ಧನ ಪ್ರತಿಮೆ ಪ್ರತಿಷ್ಠಾಪನೆ ಮೂಲಕ ವಿವಾದದ ಕೇಂದ್ರ ಬಿಂದುವಾಗಿದ್ದ ಬೆಂಗಳೂರು ವಿಶವಿದ್ಯಾಲಯ ದೂರ ಶಿಕ್ಷಣ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಸಿ.ಮೈಲಾರಪ್ಪಗೆ ಸದ್ದಿಲ್ಲದೆ ಸರಸ್ವತಿ ವಿಗ್ರಹ ಪ್ರತಿಷ್ಠಾಪನೆಯ ಉಸ್ತವಾರಿ ವಹಿಸಿರುವುದು ತಲ್ಲಣ ಮೂಡಿಸಿತ್ತು. ಆರು ತಿಂಗಳ ಹಿಂದೆ ಇದೇ ಮೈಲಾರಪ್ಪ ವಿದ್ಯಾರ್ಥಿಗಳ ಸಮ್ಮುಖದಲ್ಲಿ ವಿವಿ ಆಡಳಿತ ಕಚೇರಿ ಎದುರು ಬುದ್ಧನ ವಿಗ್ರಹ ಪ್ರತಿಷ್ಠಾಪನೆಗೆ ಕಾರಣವಾಗಿದ್ದರು ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಯಾವುದೇ ಗೊಂದಲವಿಲ್ಲದೆ ಸಿಬ್ಬಂದಿ ಸಹಕಾರದಿಂದ ಸರಸ್ವತಿ ಪ್ರತಿಮೆ ಪ್ರತಿಷ್ಠಾಪಿಸಿದ್ದೇವೆ. ಬುದ್ಧನ ಪ್ರತಿಮೆಯನ್ನು ಬುದ್ಧ ಧ್ಯಾನ ಕೇಂದ್ರದಲ್ಲಿ ಪ್ರತಿಷ್ಠಾಪಿಸಲು ಸಿದ್ಧತೆ ನಡೆಯುತ್ತಿದೆ. ಉನ್ನತ ಶಿಕ್ಷಣ ಪರಿಷತ್‌ ಆದೇಶದಂತೆ ಮೂಲ ವಿಗ್ರಹ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ.
-ಪ್ರೊ.ಕೆ.ಆರ್‌.ವೇಣುಗೋಪಾಲ್‌, ಬೆಂಗಳೂರು ವಿವಿ ಕುಲಪತಿ

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.