ವಾರ್‌ ರೂಮ್‌ ಸ್ಥಾಪನೆ


Team Udayavani, Mar 20, 2020, 11:17 AM IST

ವಾರ್‌ ರೂಮ್‌ ಸ್ಥಾಪನೆ

ಬೆಂಗಳೂರು: ನಗರದಲ್ಲಿ ಕೋವಿಡ್ 19 ಮುಂಜಾಗ್ರತಾ ಕ್ರಮವಾಗಿ ಪಾಲಿಕೆ ” ಕೋವಿಡ್ 19  ವಾರ್‌ ರೂಮ್‌’ ತಂಡ ರಚನೆ ಮಾಡಿದೆ ಎಂದು ಪಾಲಿಕೆ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ತಿಳಿಸಿದರು.

ಈ ಸಂಬಂಧ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಆಯುಕ್ತರು, ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಈ ತಂಡ ಕಾರ್ಯನಿರ್ವಹಿಸಲಿದ್ದು, ಪಾಲಿಕೆ ವ್ಯಾಪ್ತಿ ದಾಖಲಾಗುತ್ತಿರುವ ಕೋವಿಡ್ 19 ಪ್ರಕರಣಗಳನ್ನು ರಿಜಿಸ್ಟರ್‌ ಮಾಡಿಕೊಳ್ಳಲಿದೆ. ಕೋವಿಡ್ 19  ಪ್ರಕರಣ ದೃಢಪಟ್ಟ ಪ್ರದೇಶಗಳ ಬಫ‌ರ್‌ ಜೋನ್‌ಗಳಲ್ಲಿನ ಮನೆಗಳ ನಕ್ಷೆ ತಯಾರಿಸುವುದು ಮತ್ತು ಜನಸಂಖ್ಯೆ ಪಟ್ಟಿ ಸಿದ್ಧಪಡಿಸಿಕೊಂಡು, ಜಾಗೃತಿ ಮೂಡಿಸಲಿದೆ. ಬೆಂಗಳೂರು ಸ್ಮಾರ್ಟ್‌ಸಿಟಿ ಲಿ. ವ್ಯವಸ್ಥಾಪಕ ನಿರ್ದೇಶಕಿ ಹೆಪ್ಸಿ ಬಾರಾಣಿ ಕೊರ್ಲಪಾಟಿ ಅವರು ಇದರ ಮೇಲ್ವಿಚಾರಣೆ ಮಾಡಲಿದ್ದಾರೆ ಎಂದರು.

ಈ ತಂಡದ ಒಳನಿರ್ವಹಣೆಗೆ ಡಾ. ವೆಂಕಟೇಶ್‌ ಹಾಗೂ ಬಫ‌ರ್‌ಜೋನ್‌ ಭಾಗದಲ್ಲಿ ಬಿಬಿಎಂಪಿ ಜಂಟಿ ಆಯುಕ್ತ ಹಣಕಾಸು ವೆಂಕಟೇಶ್‌ ಕೆಲಸ ಮಾಡಲಿದ್ದಾರೆ. ಸಹಾಯಕರಾಗಿ ಡಾ. ಮಧು ಸೂದನ್‌ ಅವರನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಪಾಲಿಕೆ ತಜ್ಞ ವೈದ್ಯರ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚನೆ ಮಾಡಿಕೊಂಡಿದೆ. ಮುನ್ನೆಚ್ಚರಿಕೆ, ಸೋಂಕಿತರ ಚಿಕಿತ್ಸೆ, ಸಿಬ್ಬಂದಿಗೆ ತರಬೇತಿ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ತಂಡ ರಚನೆ ಮಾಡಿ ಕೊಳ್ಳುತ್ತಿದ್ದೇವೆ. ಬಿಬಿಎಂಪಿ ಕಚೇರಿಯಲ್ಲಿ ಸಭೆ, ಕಚೇರಿಗಳ ಸ್ವತ್ಛತೆ ಹಾಗೂ ಸ್ಯಾನಿಟೈಸರ್‌ ಮತ್ತು ನೆಲ ಸ್ವತ್ಛಗೊಳಿಸುವ ನಿಟ್ಟಿನಲ್ಲಿ ಡಾ. ಶೋಭಾ ಅವರು ನಿರ್ವಹಿಸಲಿದ್ದಾರೆ ಎಂದು ಹೇಳಿದರು.

ಪ್ರತಿಯೊಂದು ತಂಡ ಒಬ್ಬ ತಜ್ಞ ವೈದ್ಯರ ನೇತೃತ್ವದಲ್ಲಿ ಕಾರ್ಯನಿರ್ವಹಿಸಲಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ತಂಬಾಕು ಮುಕ್ತ ಆಂದೋಲನ, ಎಚ್‌ಐವಿ ಸೇರಿದಂತೆ ವಿವಿಧ ವಿಚಾರಗಳ ಜಾಗೃತಿ ಮೂಡಿಸುತ್ತಿರುವ ವೈದ್ಯರ ಸೇರ್ಪಡೆ ಮಾಡಲಾಗಿದೆ.

ವಲಯಕ್ಕೊಂದು ಕ್ಷಿಪ್ರ ಸ್ಪಂದನಾ ತಂಡ ಟೀಂ: ಎಂಟು ವಲಯಗಳಿಗೆ ಒಂದರಂತೆ ಕ್ಷಿಪ್ರ ಸ್ಪಂದನಾ ತಂಡ ರೆಸ್ಪಾನ್ಸ್‌ ಟೀಂ (ರಚನೆ ಮಾಡಲಾಗುವುದು. ಈ ತಂಡ ಆಯಾ ವಲಯದ ಆರೋಗ್ಯಾಧಿಕಾರಿ ನೇತೃತ್ವದಲ್ಲಿ ಕಾರ್ಯನಿರ್ವಹಿಸಲಿದೆ. ಈ ತಂಡ ತಮ್ಮ ವಲಯದಲ್ಲಿ ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟರೆ ಆ ಪ್ರದೇಶದ ಮೂರು ಕಿ.ಮೀ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಪರೀಕ್ಷೆ ನಡೆಸಲಿದ್ದಾರೆ. 14 ದಿನ ಎಲ್ಲ ಕುಟುಂಬ ಸದಸ್ಯರ ಮೇಲೆ ನಿಗಾ ವಹಿಸಲಿದೆ.

 ನಾಲ್ಕು ತಂಡಗಳ ಕರ್ತವ್ಯ :

1.ಕಣ್ಗಾವಲು ಪಡೆ (ಸರ್ವೇಲೆನ್ಸ್‌ ಟೀಂ) :  ಕೋವಿಡ್ 19 ಸೋಂಕು ಪತ್ತೆಯಾದ ವ್ಯಕ್ತಿಯ ಪ್ರಾಥಮಿಕ ಹಾಗೂ ಪರೋಕ್ಷ ಸಂಪರ್ಕ ಪತ್ತೆ ಮಾಡುವುದು. ಸೋಂಕಿತ ವ್ಯಕ್ತಿ ಯಾವ ಹೋಟೆಲ್‌, ಕಚೇರಿಗೆ ಭೇಟಿ ನೀಡಿದ್ದಾನೆಯೇ , ಯಾವ ವಾಹನದಲ್ಲಿ ಪ್ರಯಾಣಿಸಿದ್ದಾನೆ,ಯಾವಾಗ ನಗರಕ್ಕೆ ಬಂದರು ಎಂಬ ಮಾಹಿತಿ ಸಂಗ್ರಹ.

2.ಕಂಟೈನ್ಮೆಂಟ್‌ ಟೀಂ: ಕಂಟೈನ್ಮೆಂಟ್‌ ಟೀಂ (ಅಪಾಯಕಾರಿ ಸನ್ನಿವೇಶ ನಿಭಾಯಿಸುವ ತಂಡ) ಪಾಲಿಕೆಯ ಎಂಟು ವಲಯದಲ್ಲಿ ರಚನೆ ಮಾಡಿ ರ್ಯಾಪಿಡ್‌ ರೆಸ್ಪಾನ್ಸ್‌ ಟೀಂಗಳೊಂದಿಗೆ ಸಮನ್ವಯದೊಂದಿಗೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕಾರ್ಯನಿರ್ವಹಿಸಲಿದೆ. ಈ ತಂಡ ವಲಯದ ರ್ಯಾಪಿಡ್‌ ರೆಸ್ಪಾನ್ಸ್‌ ಟೀಂಗೆ ಸೂಚನೆ ನೀಡಲಿದೆ. ಸೋಂಕು ಕಾಣಿಸಿಕೊಂಡವರ ಚಿಕಿತ್ಸೆ, ಆ ಪ್ರದೇಶದಲ್ಲಿ ಬಗ್ಗೆ ನಿಗಾವಹಿಸುವ ಕೆಲಸ ಮಾಡಲಿದ್ದು, ಡಾ. ಸುರೇಶ್‌ ಇದರ ನೇತೃತ್ವ .

3. ಮಾಹಿತಿ ಮತ್ತು ವಿದ್ಯುನ್ಮಾನ ಕೋಶ: ದೃಢಪಟ್ಟ ಕೋವಿಡ್ 19  ಪ್ರಕರಣಗಳ ಬಗ್ಗೆ ಮಾಧ್ಯಮಗಳಿಗೆ ಕಾಲಕಾಲಕ್ಕೆ ಮಾಹಿತಿ ನೀಡುವುದು, ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ, ಸುಳ್ಳು ವದಂತಿ ಕಡಿವಾಣ, ಬಿಬಿಎಂಪಿ ಹಾಗೂ ಸರ್ಕಾರದ ಸಲಹೆ ಸೂಚನೆಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವುದು.

  1. ತರಬೇತಿ ತಂಡ: ಕೋವಿಡ್ 19 ಸೋಂಕಿತರಿಗೆ ಹೇಗೆ ಚಿಕಿತ್ಸೆ ನೀಡಬೇಕು. ಚಿಕಿತ್ಸೆ ನೀಡುವ ಮುನ್ನ ವೈದ್ಯರು ಮತ್ತು ನರ್ಸ್‌ಗಳು ತೆಗೆದುಕೊಳ್ಳಬೇಕಾಗಿರುವ ಮುನ್ನೆಚ್ಚರಿಕೆ ಕ್ರಮಗಳು ಕುರಿತು ಈ ತಂಡ ತರಬೇತಿ ನೀಡಲಿದೆ. ಡಾ. ಕಲಾವತಿ ಅವರಿಗೆ ಇದರ ಜವಾಬ್ದಾರಿ

10 ಸಾವಿರ ವಿದ್ಯಾರ್ಥಿ ನರ್ಸ್‌ ಪಡೆಗೆ ಸಿದ್ಧತೆ: ಮುಂದಿನ ದಿನಗಳಲ್ಲಿ ವೈರಸ್‌ನಿಂದ ಎದುರಾಗಬಹುದಾದ ಅನಾಹುತ ತಪ್ಪಿಸಲು ಪಾಲಿಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಆರೋಗ್ಯ ವಿಭಾಗ ನಗರದ ವಿವಿಧ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿಗಳನ್ನು ಕೋವಿಡ್ 19  ಚಿಕಿತ್ಸೆಗೆ ಬಳಕೆಗೆ ತಯಾರಿ ಮಾಡಿಕೊಳ್ಳಲಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳಿಗೂ ಕೋವಿಡ್ 19 ಮುಂಜಾಗ್ರತೆಯ ಬಗ್ಗೆ ತರಬೇತಿ ನೀಡಲು ಡಾ.ಸತಿ ಮತ್ತು ಪಾಟಿಲ್‌ ಅವರನ್ನು ನೇಮಕ ಮಾಡಲಾಗಿದೆ ಎಂದು ಆಯುಕ್ತರು ವಿವರಿಸಿದರು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.