![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಮಾನವನ ತಪ್ಪಿನಿಂದ ಅತಿವೃಷ್ಟಿ
Team Udayavani, Aug 21, 2018, 12:01 PM IST
![Laalaji-R[1].jpg](https://www.udayavani.com/wp-content/uploads/2018/08/21/Laalaji-R[1].jpg)
ಬೆಂಗಳೂರು: ಕೇರಳ ಹಾಗೂ ಕೊಡಗು ಭಾಗದಲ್ಲಿ ಉಂಟಾಗಿರುವ ಅತಿವೃಷ್ಟಿ ಮಾನವ ತಪ್ಪುಗಳಿಂದ ಆಗಿರುವುದೇ ಹೊರತು ಪ್ರಕೃತಿ ವಿಕೋಪವಲ್ಲ ಎಂದು ಪರಿಸರ ತಜ್ಞ ನಾಗೇಶ ಹೆಗಡೆ ಎಂದು ಅಭಿಪ್ರಾಯಪಟ್ಟರು.
ನವಕರ್ನಾಟಕ ಪ್ರಕಾಶನವು ಕೆಂಪೇಗೌಡ ರಸ್ತೆಯಲ್ಲಿನ ತನ್ನ ಮಳಿಗೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸುಮಂಗಲಾ ಎಸ್.ಮುಮ್ಮಿಗಟ್ಟಿ ಅವರು ಅನುವಾದಿಸಿರುವ “ಕೊನೆಯ ಅಲೆ’ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮಾನವನ ಆಕ್ರಮಣ ಮಿತಿಮೀರಿದ ಪರಿಣಾಮದಿಂದಾಗಿ ಪ್ರಕೃತಿ ವಿಕೋಪಕ್ಕೆ ತಿರುಗಿದೆ.
ಅತಿವೃಷ್ಠಿ ಅಥವಾ ಅನಾವೃಷ್ಠಿಗೆ ಕಾರಣವಾಗುವಂತಹ ಅಂಶಗಳನ್ನು ಅಕಾಡೆಮಿಗಳ ಮಟ್ಟದಲ್ಲಿ ಚರ್ಚೆಯಾಗುತ್ತಿದೆಯೇ ಹೊರತು ಸಾಮಾನ್ಯ ಜನರಿಗೆ ತಲುಪುತ್ತಿಲ್ಲ. ಪರಿಸರದ ವಿನಾಶ ಮತ್ತು ಉಳಿವಿನ ಬಗ್ಗೆ ಜನ ಸಾಮಾನ್ಯರಿಗೆ ಅರ್ಥವಾಗಬೇಕು. ಆಗಲೇ ಪರಿಸರ ಉಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕೊನೆಯ ಅಲೆ ಕೃತಿ ಕಾದಂಬರಿ ಸ್ವರೂಪದಲ್ಲಿದ್ದರೂ ಕಾಡಿನ ವಿನಾಶದೊಂದಿಗೆ ಸಂಸ್ಕೃತಿಯೂ ವಿನಾಶವಾಗುತ್ತಿರುವುದರ ಬಗ್ಗೆ ವಾಸ್ತವ ಅಂಶಗಳನ್ನು ತೆರೆದಿಟ್ಟಿದೆ. ಅಂಡಮಾನ್ನಂತಹ ಪುಟ್ಟ ದ್ವೀಪಗಳು ಜೀವ ವೈವಿಧ್ಯಗಳ ರಾಶಿ. ಆದರೆ ಅವುಗಳನ್ನು ಅಭಿವೃದ್ಧಿಯ ಹೆಸರಿನಲ್ಲಿ ನಾಶ ಮಾಡಲಾಗುತ್ತಿದೆ. ಹಿಂದೆ ಅಂಡಮಾನ್ ದ್ವೀಪದಲ್ಲಿ 20 ಸಾವಿರ ಜರೋವಾ ಎಂಬ ಆದಿವಾಸಿಗಳು ಬದುಕುತ್ತಿದ್ದರು.
ಆದರೆ ಇಂದು ಕೇವಲ 300 ಮಂದಿ ಬದುಕುಳಿದಿದ್ದಾರೆ. ನಾಗರಿಕರು ಎನ್ನಿಸಿಕೊಂಡಿರುವ ನಾವು ಅಂಡಮಾನ್ ದ್ವೀಪಕ್ಕೆ ಹೋಗಿ ಬ್ರಿಟಿಷರಂತೆ ಅದನ್ನು ಆಕ್ರಮಿಸಿಕೊಂಡಿದ್ದೇವೆ. ಜೊತೆಗೆ ಅಲ್ಲಿನ ಮೂಲನಿವಾಸಿಗಳನ್ನು ನಮ್ಮಂತೆ ಬದಲಾವಣೆ ಮಾಡಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.
ಅನುಭೋಗಿಸುವ ಜಗತ್ತು ನಮ್ಮನ್ನಾಳುತ್ತಿದೆ. ಕೊಳ್ಳುಬಾಕುತನ ಸಂಸ್ಕೃತಿ ಬದುಕನ್ನು ಮುಳುಗಿಸುತ್ತದೆ ಎಂಬ ಅರಿವಿದ್ದರೂ ಹಳ್ಳಿಗಳಲ್ಲಿ ನೆಮ್ಮದಿಯಾಗಿ ಬದುಕು ನಡೆಸುತ್ತಿರುವವರನ್ನು ಈ ಸಂಸ್ಕೃತಿಯೆಡೆಗೆ ಸೆಳೆಯಲಾಗುತ್ತಿದೆ. ಗ್ರಾಹಕ ಅನುಭೋಗದ ಸಂಸ್ಕೃತಿಯಿಂದಾಗಿ ನಮ್ಮ ನಾಡಿನ ಆದಿವಾಸಿಗಳಗಳು ವಿನಾಶದ ಕೊನೆಯ ಹಂತದಲ್ಲಿದ್ದಾರೆ.
ಅಭಿವೃದ್ಧಿಯ ಏರುಗತಿ ಪ್ರಕೃತಿ, ಸಂಸತಿ ಮತ್ತು ಜೀವ ವೈವಿಧ್ಯದ ವಿನಾಶಕ್ಕೆ ಕಾರಣವಾಗಿದೆ. ನಿಸರ್ಗ ವಿಕೋಪಕ್ಕೆ ಕಾರಣ ಮಾನವವನೇ ಹೊರತು ಮತಾöರು ಅಲ್ಲ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಮೂಲ ಲೇಖಕ ಪಂಕಜ್ ಸೇಖ್ಸರಿಯಾ, ಅನುವಾದಕಿ ಸುಮಂಗಲಾ ಎಸ್.ಮುಮ್ಮಿಗಟ್ಟಿ, ನವಕರ್ನಾಟಕ ಪ್ರಕಾಶನದ ವ್ಯವಸ್ಥಾಪಕ ನಿರ್ದೇಶಕ ಡಾ.ಸಿದ್ದನಗೌಡ ಪಾಟೀಲ ಹಾಜರಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.