ತಜ್ಞರ ಸಮಿತಿ ವರದಿ ಮಾನ್ಯ ಮಾಡಲ್ಲ: ತಿಪ್ಪಣ್ಣ
Team Udayavani, Mar 4, 2018, 6:15 AM IST
ಬೆಂಗಳೂರು: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಕುರಿತು ಸರ್ಕಾರ ರಚಿಸಿದ್ದ ತಜ್ಞರ ಸಮಿತಿ ಗುಡ್ಡ ಅಗೆದು ಇಲಿ ಹಿಡಿದಂತೆ ಮಾಡಿದೆ. ವೀರಶೈವ ಮಹಾಸಭೆಯು ಈ ವರದಿಯನ್ನು ಮಾನ್ಯ ಮಾಡುವುದಿಲ್ಲ. ಇದೊಂದು ಚುನಾವಣೆ ಸಂದರ್ಭದಲ್ಲಿ ಜನರ ಮೂಗಿಗೆ ತುಪ್ಪ ಸವರುವ ಭರವಸೆಯಂತಿದೆ. ಇದರಿಂದ ಯಾವುದೇ ಸಾಧನೆಯೂ ಆಗುವುದಿಲ್ಲ ಎಂದು ವೀರಶೈವ ಮಹಾಸಭೆ ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣ ತಿಳಿಸಿದ್ದಾರೆ.
ತಜ್ಞರ ಸಮಿತಿ ವರದಿ ಕುರಿತು ವೀರಶೈವ ಮಹಾಸಭೆಯ ಪದಾಧಿಕಾರಿಗಳ ಸಭೆ ನಡೆಸಿ ನಂತರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ವೀರಶೈವ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಮಹಾಸಭೆಯು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.
ಆದರೆ, ತಜ್ಞರ ಸಮಿತಿಯ ವರದಿಯಲ್ಲಿನ ಶಿಫಾರಸುಗಳನ್ನು ಗಮನಿಸಿದರೆ, ಧಾರ್ಮಿಕ ಅಲ್ಪ ಸಂಖ್ಯಾತರೆಂದು ಪರಿಗಣಿಸಬಹುದೆಂದು ಹೇಳಿರುವುದು ಹಾಸ್ಯಾಸ್ಪದ. ಧರ್ಮದ ಮಾನ್ಯತೆ ಸಿಗದೇ ಧಾರ್ಮಿಕ ಅಲ್ಪಸಂಖ್ಯಾತರೆಂದು ಪರಿಗಣಿಸುವುದು ಹೇಗೆಂಬ ಅರಿವು ಈ ಸಮಿತಿಯವರಿಗೆ ಇಲ್ಲವೆಂಬುದು ಇದರಿಂದ ಸಾಬೀತಾಗಿದೆ. ಆರು ತಿಂಗಳು ಸಮಯ ಕೇಳಿದ್ದ ಸಮಿತಿಯು ಎರಡೇ ತಿಂಗಳಲ್ಲಿ ಯಾವ ತಂತ್ರ ಬಳಸಿ ವರದಿ ನೀಡಿದೆ ಎನ್ನುವುದನ್ನು ತಿಳಿಸಲಿ. ಈ ಬೆಳವಣಿಗೆಗಳನ್ನು ನೋಡಿದರೆ, ಸಮಿತಿಯು ಸರ್ಕಾರದ ಅಣತಿಯಂತೆ ನಡೆದಿರುವುದು ಸ್ಪಷ್ಟವಾಗಿದೆ ಎಂದು ತಿಪ್ಪಣ್ಣ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್