ಆಫ್ರಿಕನ್‌ ಪ್ರಜೆಗಳ ಅಕ್ರಮಗಳ ಬಯಲು


Team Udayavani, Aug 5, 2020, 9:28 AM IST

ಆಫ್ರಿಕನ್‌ ಪ್ರಜೆಗಳ ಅಕ್ರಮಗಳ ಬಯಲು

ಬೆಂಗಳೂರು: ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ನಿವಾಸಗಳ ಮೇಲೆ ಸಿಸಿಬಿ ಪೊಲೀಸರು ಮಂಗಳವಾರ ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿ ಆಫ್ರಿಕನ್‌ ದೇಶಗಳ ಪ್ರಜೆಗಳಿಗೆ ಶಾಕ್‌ ನೀಡಿದ್ದಾರೆ.

ಸಿಸಿಬಿ ಪೊಲೀಸರ ಕಾರ್ಯಾಚರಣೆ ವೇಳೆ ಆಫ್ರಿಕನ್‌ ಪ್ರಜೆಗಳ ಅಕ್ರಮ ವಾಸ, ಖೋಟಾ ನೋಟು ವ್ಯವಹಾರ ಸೇರಿ ಹಲವು ಅಕ್ರಮಗಳು ಬಯಲಿಗೆ ಬಂದಿವೆ. ಯಾವುದೇ ದಾಖಲೆಗಳು ಇಲ್ಲದೆ ವೀಸಾ ಅವಧಿ ಮುಕ್ತಾಯವಾದ ಮೇಲೂ ಅನಧಿಕೃತವಾಗಿ ವಾಸವಿದ್ದ 20 ಆಫ್ರಿಕನ್‌ ಪ್ರಜೆಗಳು ವಶಕ್ಕೆ ಪಡೆದಿದ್ದಾರೆ. ಜತೆಗೆ, ಎರಡು ಸಾವಿರ, ಐನೂರು ರೂ.ಮುಖಬೆಲೆಯ ಖೋಟಾ ನೋಟುಗಳು, ಅಮೆರಿಕನ್‌ ಡಾಲರ್‌, ಲಂಡನ್‌ ಪೌಂಡ್‌ ನಕಲಿ ನೋಟುಗಳು ಸಹ ಪತ್ತೆಯಾಗಿವೆ.

ಈ ಪೈಕಿ ಐನೂರು ಮುಖಬೆಲೆಯ 85, ಎರಡು ಸಾವಿರ ಮುಖಬೆಲೆಯ 45, ನೂರು ಡಾಲರ್‌ ಮೌಲ್ಯದ 340 ನೋಟುಗಳು, 95 ಪೌಂಡ್‌ ನೋಟುಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳಿಂದ ಲ್ಯಾಪ್‌ ಟಾಪ್‌, ಮೊಬೈಲ್‌ ಗಳನ್ನು ಸಹ ಜಪ್ತಿ ಮಾಡಲಾಗಿದ್ದು. ಸೈಬರ್‌ ಅಪರಾಧ ಕೃತ್ಯಗಳಲ್ಲಿಯೂ ಭಾಗಿಯಾಗಿರುವ ಶಂಕೆಯಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ತನಿಖೆ ಮುಂದುವರಿಸಲಾಗಿದೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್‌ ಪಾಟೀಲ್‌ ತಿಳಿಸಿದ್ದಾರೆ.

120 ಪೊಲೀಸರ ತಂಡ ಏಕಕಾಲಕ್ಕೆ ದಾಳಿ!: ಆಫ್ರಿಕನ್‌ ಪ್ರಜೆಗಳು ಅಕ್ರಮಗಳಲ್ಲಿ ಭಾಗಿಯಾಗಿದ್ದು ಸ್ಥಳೀಯರಿಗೂ ತೊಂದರೆ ನೀಡುತ್ತಾರೆ ಎಂಬ ದೂರುಗಳು ಕೇಳಿ ಬಂದಿದ್ದವು. ಈ ನಿಟ್ಟಿನಲ್ಲಿ ಮಂಗಳವಾರ ಮುಂಜಾನೆ ಸಿಸಿಬಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಏಕಕಾಲಕ್ಕೆ 120 ಮಂದಿ ಪೊಲೀಸ್‌ ಸಿಬ್ಬಂದಿ, ಹೆಣ್ಣೂರು, ಕೊತ್ತನೂರು, ಬಾಗಲೂರು ವ್ಯಾಪ್ತಿಯಲ್ಲಿ ವಾಸವಿದ್ದ ಆಫ್ರಿಕನ್‌ ಪ್ರಜೆಗಳ 85ಕ್ಕೂ ಅಧಿಕ ನಿವಾಸಗಳ ಮೇಲೆ ಏಕಕಾಲಕ್ಕೆ ಶೋಧ ಕಾರ್ಯಾಚರಣೆ ನಡೆಸಲಾಯಿತು.ಈ ವೇಳೆ ಖೋಟಾನೋಟು ಗಳು ಪತ್ತೆಯಾಗಿವೆ. ಅನಧಿಕೃತವಾಗಿ ವಾಸವಿರುವುದು ಗೊತ್ತಾಯಿತು. ಸದ್ಯ, ಎಂಟಕ್ಕೂ ಅಧಿಕ ಮಂದಿ ಯುವತಿಯರು ಸೇರಿ 20 ಮಂದಿಯನ್ನು ಬಂಧಿಸಲಾಗಿದೆ. ಅದರಲ್ಲಿ ವೀಸಾ ಅವಧಿ ಮುಗಿದರೂ ವಾಸವಿದ್ದ 17 ಮಂದಿ ವಿರುದ್ಧ ವಿದೇಶಿಯರ ಕಾಯಿದೆ ಉಲ್ಲಂಘನೆ ಆರೋಪ ಹಾಗೂ ಮೂವರ ವಿರುದ್ಧ ಖೋಟಾನೋಟು ದಂಧೆ ಸಂಬಂಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ವಿವರಿಸಿದರು.

ಟಾಪ್ ನ್ಯೂಸ್

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.