ಮತದಾರ ಪರಿಶೀಲನೆ ಅವಧಿ ವಿಸ್ತರಣೆ
Team Udayavani, Oct 14, 2019, 3:05 AM IST
ಬೆಂಗಳೂರು: 2019-20ನೇ ಸಾಲಿನ ವಾರ್ಷಿಕ “ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ-2019′ ಇದಕ್ಕೆ ಪೂರಕವಾಗಿ ಹಮ್ಮಿಕೊಳ್ಳಲಾಗಿದ್ದ “ಮತದಾರ ಪರಿಶೀಲನೆ ಕಾರ್ಯಕ್ರಮ’ (ಇವಿಪಿ) ಇದರ ಅವಧಿಯನ್ನು ನ.18ರವರೆಗೆ ಕೇಂದ್ರ ಚುನಾವಣಾ ಆಯೋಗ ವಿಸ್ತರಿಸಿದೆ.
ಪ್ರತಿಯೊಬ್ಬ ಮತದಾರನು ಮತದಾರರ ಪಟ್ಟಿಯಲ್ಲಿ ನಮೂದು ಆಗಿರುವ ತನ್ನ ಹಾಗೂ ಕುಟುಂಬದ ಸದಸ್ಯರ ವೈಯಕ್ತಿಕ ಮಾಹಿತಿಗಳನ್ನು ಪರಿಶೀಲಿಸಿ, ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಚುನಾವಣಾ ಆಯೋಗ ಸೆ.1ರಿಂದ ಅ.15ರವರೆಗೆ ದೇಶಾದ್ಯಂತ “ಮತದಾರ ಪರಿಶೀಲನೆ ಕಾರ್ಯಕ್ರಮ’ (ಇವಿಪಿ) ಹಮ್ಮಿಕೊಂಡಿತ್ತು.
ಅದರಂತೆ, ರಾಜ್ಯದಲ್ಲೂ ಇವಿಪಿ ಗೆ ಚಾಲನೆ ನೀಡಲಾಗಿತ್ತು. ಆದರೆ, ಇವಿಪಿ ಪ್ರಗತಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ದೊಡ್ಡ ಸಂಖ್ಯೆಯಲ್ಲಿ ಇನ್ನೂ ಮತದಾರರು ತಮ್ಮ ವೈಯಕ್ತಿಕ ವಿವರಗಳನ್ನು ಪರಿಶೀಲಿಸಿಕೊಳ್ಳಬೇಕಿದೆ. ಅದಕ್ಕಾಗಿ, ಮತದಾರರಿಗೆ ಹೆಚ್ಚಿನ ಅವಕಾಶ ನೀಡುವ ಉದ್ದೇಶದಿಂದ ಇವಿಪಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಪರಿಷ್ಕೃತ ವೇಳಾಪಟ್ಟಿಯಂತೆ ನ.18ರವರೆಗೆ ಇವಿಪಿ ಗೆ ಅವಕಾಶ ಮಾಡಿಕೊಡಲಾಗಿದೆ. ನ.25ಕ್ಕೆ ಮತದಾರರ ಕರಡು ಪಟ್ಟಿ ಪ್ರಕಟಗೊಳ್ಳಲಿದೆ. ನಂತರ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ನ.25ರಿಂದ ಡಿ.24ರವರೆಗೆ ಅವಕಾಶ ಇರಲಿದೆ. ಜ.10ರೊಳಗೆ ಎಲ್ಲ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಗುವುದು. ಜ.27ಕ್ಕೆ ಪೂರಕ ಸಿದ್ಧತೆ ಮಾಡಿಕೊಂಡು ಜ.20ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಆಯೋಗದ ಪ್ರಕಟಣೆ ತಿಳಿಸಿದೆ.
ಆಯೋಗದ ಮನವಿ: ಹೆಚ್ಚಿನ ಮತದಾರರಿಗೆ ಅನುಕೂಲವಾಗಲಿ, ಯಾವೊಬ್ಬ ಮತದಾರರೂ ಪಟ್ಟಿಯಿಂದ ಹೊರಗಡೆ ಉಳಿಯದಿರಲಿ ಎಂಬ ಉದ್ದೇಶದಿಂದ ಇವಿಪಿ ಅವಧಿ ವಿಸ್ತರಿಸಲಾಗಿದೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಇದರ ಉಪಯೋಗ ಬಳಸಿಕೊಳ್ಳಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ