ಗ್ರಾಪಂನಲ್ಲಿ ಮಲತ್ಯಾಜ್ಯ ಸಂಸ್ಕರಣೆ: ದೇಶದಲ್ಲೇ ಮೊದಲು


Team Udayavani, Jun 21, 2022, 2:01 PM IST

ಗ್ರಾಪಂನಲ್ಲಿ ಮಲತ್ಯಾಜ್ಯ ಸಂಸ್ಕರಣೆ: ದೇಶದಲ್ಲೇ ಮೊದಲು

ಬೆಂಗಳೂರು: ನಗರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ರಾಜಾನುಕುಂಟೆ ಗ್ರಾಮ ಪಂಚಾಯ್ತಿಯಲ್ಲಿ ಮಲತಾಜ್ಯ ಸಂಸ್ಕರಣಾ ಘಟಕ ಶೀಘ್ರದಲ್ಲೇ ಸ್ಥಾಪನೆಯಾಗಲಿದೆ. ಯಲಹಂಕ ತಾಲೂಕು ವ್ಯಾಪ್ತಿಯ ನಾಲ್ಕೈದು ಗ್ರಾಮ ಪಂಚಾಯ್ತಿಗಳನ್ನು ಕೇಂದ್ರೀಕರಿಸಿ ಈ ಮಲ ತಾಜ್ಯ ಸಂಸ್ಕರಣಾ ಘಟಕವನ್ನು ನಿರ್ಮಿಸಲಾಗಿದ್ದು, ದೇಶದಲ್ಲೆ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಮಲ ತಾಜ್ಯ ಸಂಸ್ಕರಣಾ ಘಟಕ ಎಂಬ ಹಿರಿಮೆಗೆ ಇದು ಪಾತ್ರವಾಗಲಿದೆ.

ಪಂಚಾಯ್ತಿ ವ್ಯಾಪ್ತಿಯ ಹಳ್ಳಿಗಳನ್ನು ಕೇಂದ್ರೀಕರಿಸಿ ಈ ಯೋಜನೆ ರೂಪಿಸಲಾಗಿದೆ. ನಗರದಲ್ಲಿ ಇರುವಂತೆ ಗ್ರಾಮೀಣ ಪ್ರದೇಶಗಳಲ್ಲಿ ಮಲತಾಜ್ಯ ನಿರ್ವಹಣೆ ಸಂಪರ್ಕ ಕೊಳವೆ ಮಾರ್ಗಗಳಿಲ್ಲ. ಆ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಶೌಚಾಲಯಗಳನ್ನು ಗಮನದಲ್ಲಿಟ್ಟು ಕೊಂಡು ಕೇಂದ್ರ ಸರ್ಕಾರದ ಸ್ವತ್ಛ ಭಾರತ ಮಿಷನ್‌ ಮತ್ತು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಇದೀಗ ಸಿಡಿಡಿ ಸಂಸ್ಥೆಯ ಸಹಯೋಗದಲ್ಲಿ ಹೊಸ ಪ್ರಯತ್ನಕ್ಕೆ ಹೆಜ್ಜೆಯಿರಿಸಿದೆ.

ಹಳ್ಳಿಗಳಲ್ಲಿ ಶೌಚಾಲಯಗಳು ತುಂಬಿ ಕೆಲವು ಸಲ ಗಬ್ಬುನಾರಲು ಶುರುವಾಗುತ್ತವೆ. ಇದರಿಂದಾಗಿ ಹಳ್ಳಿಜನರ ಆರೋಗ್ಯದ ಮೇಲೂ ಪರಿಣಾಮ ಬೀಳುವ ಸಾಧ್ಯತೆ ಅಧಿಕವಿರುತ್ತದೆ. ಆ ಹಿನ್ನೆಲೆಯಲ್ಲಿ ಹಳ್ಳಿ ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ರಾಜಾನು ಕುಂಟೆ ಗ್ರಾಮ ಪಂಚಾಯ್ತಿಯಲ್ಲಿ ನೂತನ ಮಲತಾಜ್ಯ ಸಂಸ್ಕರಣಾ ಘಟಕ ನಿರ್ಮಿಸಲಾಗಿದೆ. ಯಲಹಂಕ ತಾಲೂಕು ವ್ಯಾಪ್ತಿಯ ರಾಜಾನು ಕುಂಟೆ ಗ್ರಾಮ ಪಂಚಾಯ್ತಿ, ಸಿಂಗನಾಹಕನಹಳ್ಳಿ ಗ್ರಾಮ ಪಂಚಾಯ್ತಿ, ಅರಕೆರೆ ಗ್ರಾಮ ಪಂಚಾಯ್ತಿ, ಗಂಟಿಗಾನ ಹಳ್ಳಿ ಗ್ರಾಮ ಪಂಚಾಯ್ತಿ ಸೇರಿದಂತೆ ಇನ್ನೂ ಕೆಲವು ಗ್ರಾಮ ಪಂಚಾಯ್ತಿಗಳನ್ನು ಸೇರಿಸಿ ಈ ಘಟಕವನ್ನು ನಿರ್ಮಾಣ ಮಾಡಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯ ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರದ ಅನುದಾನ: ರಾಜಾನುಕುಂಟೆಯಲ್ಲಿ 1 ಎಕರೆ 15 ಗುಂಟೆ ಪ್ರದೇಶದಲ್ಲಿ 44 ಲಕ್ಷ ರೂ. ವೆಚ್ಚದಲ್ಲಿ ಮಲತಾಜ್ಯ ಸಂಸ್ಕರಣಾ ಘಟಕ ನಿರ್ಮಿಸಲಾಗಿದೆ. ಕೇಂದ್ರ ಸರ್ಕಾರದ ಸ್ವಚ್ಛ ಭಾರತ್‌ ಮಿಷನ್‌ ಮತ್ತು ರಾಜ್ಯ ಸರ್ಕಾರದ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯಡಿ ಯೋಜನೆ ರೂಪಿಸಲಾಗಿದೆ. ಘಟಕ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಶೇ.70 ರಷ್ಟು ಮತ್ತು ರಾಜ್ಯ ಸರ್ಕಾರ ಶೇ.30ರಷ್ಟು ಅನುದಾನ ನೀಡಲಿದೆ. ಗ್ರಾಮೀಣ ಪ್ರದೇಶದಲ್ಲಿ ಇಂತಹ ಘಟಕಗಳು ಅಗತ್ಯವಾಗಿದೆ. ಕೆಲವು ಸಲ ಶೌಚೌಲಯಗಳು ತುಂಬಿಕೊಂಡು ನಾರುತ್ತಿರುತ್ತವೆ. ಇಂತಹ ಸಮಸ್ಯೆಗಳು ಎದುರಾಗದಿರಲಿ ಎಂಬ ಉದ್ದೇಶದಿಂದ ಈ ಘಟಕವನ್ನು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿದೆ. ಈಗಾಗಲೇ ಘಟಕ ನಿರ್ಮಾಣ ಕಾರ್ಯ ಅಂತಿಮಗೊಂಡಿದ್ದು ಶೀಘ್ರದಲ್ಲೆ ಲೋಕಾರ್ಪಣೆಗೊ ಳ್ಳಲಿದೆ.ಅದಕ್ಕಾಗಿಯೆ ಎಲ್ಲ ರೀತಿಯ ತಯಾರಿ ಕೂಡ ನಡೆದಿದೆ ಎಂದು ಹೇಳಿದ್ದಾರೆ.

ಮಲತಾಜ್ಯ ಸಂಸ್ಕರಣೆ ಘಟಕದಲ್ಲಿ ಗೊಬ್ಬರ ತಯಾರಿಕೆ : ಆಧುನಿಕ ಯಂತ್ರಗಳ ಮೂಲಕ ಮನೆಗಳ ಶೌಚಾಲಯದ ಮಲ ತ್ಯಾಜ್ಯವನ್ನು ಸಂಗ್ರಹಿಸಿ ವಾಹನಗಳ ಮೂಲಕ ಮಲತಾಜ್ಯ ಸಂಸ್ಕರಣಾ ಘಟಕಕ್ಕೆ ರವಾನಿಸಲಾಗುತ್ತದೆ. ಬಳಿಕ ಘಟಕದಲ್ಲಿ ಯಂತ್ರಗಳ ಮೂಲಕ ತಾಜ್ಯವನ್ನು ಬೇರ್ಪಡಿ ಮಾಡಿ ಗೊಬ್ಬರ ತಯಾರಿಸಲಾಗುತ್ತದೆ. ಘಟಕದಲ್ಲಿ ತಯಾರಾಗುವ ಈ ಗೊಬ್ಬರವನ್ನು ಬೆಳೆಗಳಿಗೂ ಉಪಯೋಗಿಸಬಹುದು ಎಂದು ಬೆಂಗಳೂರು ನಗರ ಜಿಪಂಯ ಸಚ್ಛ ಭಾರತ್‌ ಮಿಷನ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯಗಳು ಸಾಮರ್ಥ್ಯಕ್ಕಿಂತೂ ಅಧಿಕವಾಗಿ ಘನ ತ್ಯಾಜ್ಯ ಸಂಗ್ರಹವಾದಾಗ ತುಂಬಿಕೊಂಡು ನಾರುವ ಪರಿಸ್ಥಿತಿ ಅಧಿಕವಿರುತ್ತದೆ. ಆ ಹಿನ್ನೆಲೆಯಲ್ಲಿ ಘಟಕ ನಿರ್ಮಾಣದಿಂದ ಗ್ರಾಮೀಣ ಜನರ ಆರೋಗ್ಯದ ದೃಷ್ಟಿಯಿಂದಲೂ ಅನುಕೂಲವಾಗಲಿದೆ.ರೋಗ-ರುಜೀನಿಗಳಿಂದ ಹಳ್ಳಿಗರನ್ನು ರಕ್ಷಿಸಬಹುದಾಗಿದೆ. ಮಲಹೊರುವ ಅನಿಷ್ಟ ಪದ್ಧತಿ ಕೂಡ ದೂರವಾಗಲಿದೆ ಎಂದು ತಿಳಿಸುತ್ತಾರೆ.

ಹಳ್ಳಿಗಳನ್ನು ಕೇಂದ್ರೀಕರಿಸಿ ಮಲತಾಜ್ಯ ಸಂಸ್ಕರಣಾ ಘಟಕ ನಿರ್ಮಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ಈ ಘಟಕವನ್ನು ನಿರ್ಮಿಸಿದ್ದು, ಶೀಘ್ರದಲ್ಲೆ ಕಾರ್ಯಾರಂಭ ಮಾಡಲಿದೆ. – ಎಚ್‌.ಆರ್‌.ರಾಜೇಶ್‌, ಪಿಡಿಒ, ರಾಜಾನುಕುಂಟೆ

 

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.