ಹೈದರಾಬಾದ್‌ನಲ್ಲಿ ನಡೆದ ಸಭೆ ವಿಫ‌ಲ ಲಾರಿ ಮುಷ್ಕರ ಇನ್ನಷ್ಟು ತೀವ್ರ


Team Udayavani, Apr 8, 2017, 12:06 PM IST

loory-strike.jpg

ಬೆಂಗಳೂರು: ಕಳೆದ ಒಂಬತ್ತು ದಿನಗಳಿಂದ ಸರಕು ಸಾಗಣೆದಾರರ ಮುಷ್ಕರ ಮುಂದುವರಿದಿರುವ ಬೆನ್ನಲ್ಲೇ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎ) ಶುಕ್ರವಾರ ನಡೆಸಿದ ಸುದೀರ್ಘ‌ ಸಭೆಯೂ ವಿಫ‌ಲಗೊಂಡ ಹಿನ್ನೆಲೆಯಲ್ಲಿ ಹೋರಾಟ ತೀವ್ರಗೊಳಿಸಲು ಸರಕುಸಾಗಣೆದಾರರು ಮುಂದಾಗಿದ್ದಾರೆ.

ಕೇಂದ್ರ ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ನಾನಾ ಸಾರಿಗೆ ಸಂಘಟನೆಗಳು ಹೋರಾಟ ಬೆಂಬಲಿಸಲಾರಂಭಿಸಿವೆ. ಆ್ಯಪ್‌ ಆಧಾರಿತ ಕ್ಯಾಬ್‌ ಸೇವೆಗಳಾದ ಓಲಾ, ಉಬರ್‌ ಸಂಸ್ಥೆಗಳು ಶನಿವಾರದಿಂದಲೇ ವಾಹನ ಸ್ಥಗಿತಗೊಳಿಸಿ ಹೋರಾಟಕ್ಕಿಳಿಯಲಿವೆ. ಮ್ಯಾಕ್ಸಿಕ್ಯಾಬ್‌ ಮಾಲೀಕರು ಸೋಮವಾರದಿಂದ ಮುಷ್ಕರಕ್ಕಿಳಿಯಲು ಚಿಂತಿಸಿದ್ದು, ಹೋರಾಟ ಇನ್ನಷ್ಟು ಉಗ್ರ ಸ್ವರೂಪ ಪಡೆಯುವ ಲಕ್ಷಣ ಕಾಣುತ್ತಿದೆ.

ಸ್ಪಂದಿಸದ ಕೇಂದ್ರ ಸರ್ಕಾರ: ಏಪ್ರಿಲ್‌ 30ರ ಮಧ್ಯರಾತ್ರಿ ಆರಂಭವಾದ ಮುಷ್ಕರ ಕೆಲ ಸಂಧಾನ ಸಭೆಗಳ ಬಳಿಕವೂ ಮುಂದುವರಿದಿದ್ದ ಹಿನ್ನೆಲೆಯಲ್ಲಿ ಹೈದರಾಬಾದ್‌ನಲ್ಲಿರುವ ಐಆರ್‌ಡಿಎ ಕಚೇರಿಯಲ್ಲಿ ಶುಕ್ರವಾರ ನಡೆದ ಎರಡನೇ ಸಭೆಯಲ್ಲೂ ವಿಮಾ ಶುಲ್ಕ ಸಂಬಂಧ ಸರಕು ಸಾಗಣೆದಾರರ ಬೇಡಿಕೆಗೆ ಪ್ರಾಧಿಕಾರ ಒಪ್ಪದ ಕಾರಣ ಸಭೆ ವಿಫ‌ಲವಾಯಿತು.

ಅಗತ್ಯ ವಸ್ತುಗಳ ಪೂರೈಕೆಗೆ ಅಡ್ಡಿಯಾಗದಂತೆ ಹೋರಾಟ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಸರಕುಸಾಗಣೆದಾರರು ಮುಷ್ಕರವನ್ನು ಇನ್ನಷ್ಟು ತೀವ್ರಗೊಳಿಸಲು ಸಜ್ಜಾಗಿದ್ದಾರೆ. ಹೈದರಾಬಾದ್‌ನಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಐಆರ್‌ಡಿಎ ಅಧಿಕಾರಿಗಳು ವಿಮಾ ಶುಲ್ಕ ಇಳಿಕೆ ಮಾಡಲು ಒಪ್ಪದ ಕಾರಣ ಸಭೆ ವಿಫ‌ಲವಾಯಿತು. ಹಾಗಾಗಿ ಸೋಮವಾರ ಅಖೀಲ ಭಾರತ ಮೋಟಾರ್‌ ಟ್ರಾನ್ಸ್‌ಪೊರ್ಟ್‌ ಕಾಂಗ್ರೆಸ್‌ ಕೂಡ ಹೋರಾಟಕ್ಕಿಳಿ ಯಲಿದ್ದು,

ರಾಷ್ಟ್ರವ್ಯಾಪ್ತಿ ಹೋರಾಟ ತೀವ್ರಗೊಳಿಸ ಲಾಗುವುದು ಎಂದು ದಕ್ಷಿಣ ವಲಯ ಮೋಟಾರು ಸಾಗಣೆದಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ಆರ್‌.ಷಣ್ಮುಖಪ್ಪ ಹೇಳಿದರು. ಸರಕು ಸಾಗಣೆದಾರರ ಹೋರಾಟ ಬೆಂಬಲಿಸಿ ಸೋಮವಾರದಿಂದ ಎಲ್ಲ ಬಗೆಯ ಕ್ಯಾಬ್‌ ಸೇವೆಗಳನ್ನು ಸ್ಥಗಿತಗೊಳಿಸಲು ಚಿಂತಿಸಲಾಗಿದೆ. ಶನಿವಾರ ಪದಾಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಪ್ರವಾಸಿ ವಾಹನ ಮಾಲೀಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ತಿಳಿಸಿದ್ದಾರೆ.

ಸಹಜ ಸ್ಥಿತಿಗೆ ಆಹಾರ ಪೂರೈಕೆ: ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಆಹಾರಧಾನ್ಯ ಪೂರೈಕೆ ಬಹುತೇಕ ಸಹಜ ಸ್ಥಿತಿಗೆ ಮರಳಿದೆ. ಹಗಲು ರಾತ್ರಿ ಸರಕು ಪೂರೈಕೆಯಾಗುತ್ತಿರುವುದರಿಂದ ವ್ಯಾಪಾರ- ವಹಿವಾಟು ಸಹ ಸಾಮಾನ್ಯ ಸ್ಥಿತಿಗೆ ಬಂದಂತಾಗಿದೆ. ಉಳಿದಂತೆ ಯಾವುದೇ ಧಾನ್ಯ, ಬೇಳೆಕಾಳಿನ ಕೊರತೆ ಕಂಡುಬಂದಿಲ್ಲ ಎಂದು ಯಶವಂತಪುರ ಎಪಿಎಂಸಿ ಆಹಾರಧಾನ್ಯ ಮತ್ತು ಬೇಳೆಕಾಳು ವರ್ತಕರ ಸಂಘದ ಅಧ್ಯಕ್ಷ ರಮೇಶ್‌ಚಂದ್ರ ಲಹೋಟಿ ಹೇಳಿದ್ದಾರೆ.

ಕಲಾಸಿಪಾಳ್ಯ ಸಗಟು ಮಾರುಕಟ್ಟೆ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಿಗೆ ಅಗತ್ಯ ಪ್ರಮಾಣದಲ್ಲಿ ಹಣ್ಣು- ತರಕಾರಿ ಪೂರೈಕೆಯಾಗುತ್ತಿದೆ. ನಿರಂತರವಾಗಿ ಸಭೆಗಳು ವಿಫ‌ಲವಾಗುತ್ತಿರುವುದರಿಂದ ಮುಷ್ಕರ ತೀವ್ರಗೊಂಡರೆ ಅಗತ್ಯ ವಸ್ತುಗಳ ಪೂರೈಕೆಯಲ್ಲೂ ವ್ಯತ್ಯಯವಾಗುವ ಆತಂಕ ಮೂಡಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.