![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಹಾಪ್ಕಾಮ್ಸ್ ಮೇಳದಲ್ಲಿ ಬಗೆಬಗೆ ಹಣ್ಣುಗಳ ಜಾತ್ರೆ
Team Udayavani, Feb 15, 2017, 12:22 PM IST
![hopcoms.jpg](https://www.udayavani.com/wp-content/uploads/2017/02/15/hopcoms.jpg)
ಬೆಂಗಳೂರು: ರೈತರು ಬೆಳೆದ ಹಣ್ಣು ಸಂರಕ್ಷಿಸಿ ಸಂಗ್ರಹಿಸಲು ಹಾಪ್ಕಾಮ್ಸ್ ವತಿಯಿಂದ ಶೀಥಲಗೃಹ ಹಾಗೂ ಉಪ ಉತ್ಪನ್ನಗಳ ತಯಾರಿಕೆಯ ಸಂಸ್ಕರಣ ಕೇಂದ್ರ ನಿರ್ಮಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಚಿಕ್ಕಬಳ್ಳಾಪುರದಲ್ಲಿ 9.5 ಎಕರೆ ಸರ್ಕಾರಿ ಜಮೀನು ಗುರುತಿಸಿದ್ದು, ಆ ಜಮೀನು ಹಾಪ್ಕಾಮ್ಸ್ಗೆ ಹಸ್ತಾಂತರಿಸುವಂತೆ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
ನಗರದ ಹಡ್ಸನ್ ವೃತ್ತದಲ್ಲಿರುವ ಹಾಪ್ಕಾಮ್ಸ್ ಮಳಿಗೆಯಲ್ಲಿ ಮಂಗಳವಾರ ದ್ರಾಕ್ಷಿ, ಕಲ್ಲಂಗಡಿ ಮಾರಾಟ ಮೇಳಕ್ಕೆ ಚಾಲನೆ ನೀಡಿದ ರಾಮಲಿಂಗಾರೆಡ್ಡಿ, ಹಾಪ್ಕಾಮ್ಸ್ ರೈತರ ಸಂಸ್ಥೆ. ಈ ಸಂಸ್ಥೆಯಿಂದ ರೈತರು ಬೆಳೆದ ಹಣ್ಣು ಸಂರಕ್ಷಣೆಗೆ ಶೀಥಲಗೃಹ ಹಾಗೂ ಜಾಮ್ ಸೇರಿದಂತೆ ಇತರೆ ಉತ್ಪನ್ನ ತಯಾರಿಸುವ ಸಂಸ್ಕರಣೆ ಕೇಂದ್ರ ಸ್ಥಾಪಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ನೂರಾರು ವಿಧದ ದ್ರಾಕ್ಷಿಯ ತಳಿಗಳು ಇದ್ದು, ಅವುಗಳಲ್ಲಿ ಕೆಲವೊಂದನ್ನು ಮಾತ್ರ ನಾವು ಬೆಳೆಯುತ್ತಿದ್ದೇವೆ. ಅಂತೆಯೇ 350 ಮಾವಿನ ತಳಿಗಳಿದ್ದು, ಬೇಡಿಕೆ ಇರುವಂತಹ 15 ತಳಿಗಳನ್ನು ರೈತರು ಬೆಳೆಯುತ್ತಿದ್ದಾರೆ. ಗ್ರಾಹಕರಿಗೆ ಅತ್ಯುತ್ತಮ ಗುಣಮಟ್ಟದ ಹಣ್ಣು, ತರಕಾರಿ ನೀಡುವ ಉದ್ದೇಶದಿಂದ ಹಾಪ್ಕಾಮ್ಸ್ ಉತ್ತಮ ಸೇವೆ ನೀಡುತ್ತಿದ್ದು, ಗ್ರಾಹಕರು ದ್ರಾಕ್ಷಿ, ಕಲ್ಲಂಗಡಿ ಮೇಳದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಶೇ.10ರಷ್ಟು ರಿಯಾಯಿತಿ ಮಾರಾಟ: ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಸುತ್ತಮುತ್ತಲ ಭಾಗದಲ್ಲಿ ದ್ರಾಕ್ಷಿ ಫಸಲು ಬಂದಿಲ್ಲ. ಆದರೆ, ಬಿಜಾಪುರ, ಗದಗ ಸೇರಿದಂತೆ ಉತ್ತರ ಕರ್ನಾಟಕ ಭಾಗದ ರೈತರಿಂದ ಹಾಪ್ಕಾಮ್ಸ್ ನೇರವಾಗಿ ದ್ರಾಕ್ಷಿ ಖರೀದಿಸಿ, ನಗರದ ಗ್ರಾಹಕರಿಗೆ ಶೇ.10ರ ರಿಯಾಯಿತಿ ದರದಲ್ಲಿ ನೀಡಲಿದೆ. ಫೆ.14ರಿಂದ ಮಾರ್ಚ್ ಅಂತ್ಯದವರೆಗೆ ಮೇಳ ನಡೆಯಲಿದೆ ಎಂದು ಹಾಪ್ಕಾಮ್ಸ್ ಅಧ್ಯಕ್ಷ ಜಿ.ಆರ್.ಶ್ರೀನಿವಾಸ್ ತಿಳಿಸಿದ್ದಾರೆ. ಬಿಬಿಎಂಪಿ ಸದಸ್ಯ ಆರ್.ವಸಂತ್ಕುಮಾರ್, ವೈನ್ ಮಂಡಳಿ ಅಧ್ಯಕ್ಷ ರವೀಂದ್ರ ಶಂಕರ ಮಿರ್ಜೆ ಇದ್ದರು.
ಮಾವು ಮೇಳಕ್ಕೆ ಸಿದ್ಧತೆ
ಹಾಪ್ಕಾಮ್ಸ್ ಮತ್ತು ಮಾವು ಅಭಿವೃದ್ಧಿ ನಿಗಮ ಜಂಟಿಯಾಗಿ ಏಪ್ರಿಲ್ ಮೊದಲ ವಾರದಲ್ಲಿ ಮಾವು ಮತ್ತು ಇತರ ಹಣ್ಣುಗಳ ಮೇಳ ನಡೆಸಲು ಚಿಂತನೆ ನಡೆದಿದೆ. ಮೊದಲು ಕೇವಲ ಒಂದೆರಡು ಕಡೆಗಳಲ್ಲಿ ಮಾತ್ರ ಮಾವು ಮೇಳ ನಡೆಯುತ್ತಿತ್ತು. ಈ ಬಾರಿ ನಗರದ 50 ಕಡೆಗಳಲ್ಲಿ ಮೇಳ ಆಯೋಜಿಸಲಾಗುವುದು ಎಂದು ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಅಧ್ಯಕ್ಷ ಎಲ್.ಗೋಪಾಲಕೃಷ್ಣ ತಿಳಿಸಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.