500 ರೂ.1 ಅಸಲಿ ಕೊಟ್ಟರೆ, 3 ನಕಲಿ ನೋಟು!
Team Udayavani, Jan 26, 2023, 1:31 PM IST
ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ರಾಜಧಾನಿಗೆ ಹೊರ ರಾಜ್ಯಗಳಿಂದ ಖೋಟಾ-ನೋಟುಗಳು ಕಾಲಿಟ್ಟಿದ್ದು, ಇದಕ್ಕೆ ಸಾಕ್ಷಿ ಎಂಬಂತೆ 10.34 ಲಕ್ಷ ರೂ. ಮೌಲ್ಯದ ಖೋಟಾ-ನೋಟು ಚಲಾವಣೆಗೆ ಯತ್ನಿಸುತ್ತಿದ್ದ ಆಂಧ್ರ ಮೂಲದ ನಾಲ್ವರ ಗ್ಯಾಂಗ್ ಸುಬ್ರಹ್ಮಣ್ಯಪುರ ಪೊಲೀಸರ ಬಲೆಗೆ ಬಿದ್ದಿದೆ.
ಆಂಧ್ರಪ್ರದೇಶ ಕಡಪ ಜಿಲ್ಲೆಯ ಚರಣ್ ಸಿಂಗ್, ಪುಲ್ಲಲರೇವು ರಾಜ, ರಜನಿ, ಗೋಪಿನಾಥ್ಬಂಧಿತರು. ಆರೋಪಿಗಳಿಂದ 500 ರೂ. ಮುಖಬೆಲೆಯ 10.34 ಲಕ್ಷ ರೂ. ಮೌಲ್ಯದ ಖೋಟಾನೋಟುಗಳನ್ನು ಜಪ್ತಿ ಮಾಡಲಾಗಿದೆ.
ಜ.19ರಂದು ಮಧ್ಯಾಹ್ನ 1.30ರಲ್ಲಿ ಉತ್ತರಹಳ್ಳಿ-ಕೆಂಗೇರಿ ಮುಖ್ಯರಸ್ತೆಯ ಪೂರ್ಣಪ್ರಜ್ಞಾ ಲೇಔಟ್ ಬಳಿ ಬೊಲೆರೊ ಜೀಪ್ನಲ್ಲಿಆರೋಪಿಗಳಾದ ಚರಣ್ ಹಾಗೂ ರಜಿನಿ ಖೋಟಾ ನೋಟು ಚಲಾವಣೆಗೆ ಯತ್ನಿಸುತ್ತಿದ್ದರು.
ಆರೋಪಿಗಳಿಗೆ 500 ರೂ. ಮುಖಬೆಲೆಯ 1 ಅಸಲಿ ನೋಟು ಕೊಟ್ಟರೆ, 3 ನಕಲಿ ನೋಟು ಕೊಡುತ್ತಿದ್ದರು. ಈ ಬಗ್ಗೆ ಬಂದ ಖಚಿತ ಮಾಹಿತಿಮೇರೆಗೆ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ದಾಳಿ ನಡೆಸಿ ಚರಣ್ ಹಾಗೂ ರಜನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಅವರ ವಾಹನ ತಪಾಸಣೆ ನಡೆಸಿದಾಗ ಅದರಲ್ಲಿ 500 ರೂ. ಮುಖಬೆಲೆಯ 4.9 ಲಕ್ಷ ರೂ. ಮೌಲ್ಯದ 818 ಖೋಟಾ ನೋಟು ಪತ್ತೆಯಾಗಿತ್ತು.
ಜ.20ರಂದು ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ವಶಕ್ಕೆ ಪಡೆದು ಹೆಚ್ಚಿನ ಇಚಾರಣೆಗೆ ಒಳಪಡಿಸಲಾಗಿತ್ತು. ಆ ವೇಳೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿಕಂಪ್ಯೂಟರ್ ಸಹಾಯದಿಂದ ಅಸಲಿ ನೋಟಿನ ಮಾದರಿಯಲ್ಲೇ ನಕಲಿ ನೋಟಿನ ಚಿತ್ರ ತಯಾರಿಸುತ್ತಿದ್ದೆವು. ಅದನ್ನು ಪ್ರಿಂಟ್ ತೆಗೆದು ಚಲಾವಣೆ ಮಾಡಲು ಯತ್ನಿಸುತ್ತಿದ್ದೆವು ಎಂದು ಆರೋಪಿ ಚರಣ್ ಬಾಯ್ಬಿಟ್ಟಿದ್ದ.
ಇದರ ಬೆನ್ನಲ್ಲೇ ತನಿಖೆಗಿಳಿದ ಪೊಲೀಸರು ಚರಣ್ನನ್ನು ಕರೆದುಕೊಂಡು ಆಂಧ್ರದ ಅನಂತಪುರದಲ್ಲಿ ಆತ ಹೇಳಿದ ಬಾಡಿಗೆ ಮನೆಗೆ ಹೋಗಿದ್ದರು. ಅಲ್ಲಿ ಇತರ ಆರೋಪಿಗಳಾದ ಪುಲ್ಲಲರೇವು ರಾಜ, ಗೋಪಿನಾಥ್ ಸಿಕ್ಕಿ ಬಿದ್ದಿದ್ದರು. ನಂತರ ಆತ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಮನೆಯಲ್ಲಿ ಶೋಧಿಸಿದಾಗ 6.25 ಲಕ್ಷ ರೂ. ಖೋಟಾ ನೋಟು ಪತ್ತೆಯಾಗಿತ್ತು.
ಇದುವರೆಗೆ ಒಟ್ಟು 14 ಲಕ್ಷ ರೂ. ಮೌಲ್ಯದ ನಕಲಿ ನೋಟುಗಳನ್ನು ಪ್ರಿಂಟ್ ಮಾಡಿದ್ದು, ಈ ಪೈಕಿ 3 ಲಕ್ಷ ರೂ. ಮೌಲ್ಯದ ಖೋಟಾ-ನೋಟು ಚಲಾವಣೆ ಮಾಡಿರುವುದಾಗಿ ಚರಣ್ ಒಪ್ಪಿಕೊಂಡಿದ್ದಾನೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಳಿಂದ ನಕಲಿ ನೋಟುಗಳನ್ನು ಖರೀದಿಸಿದವರಿಗೆ ಶೋಧ ನಡೆಸುತ್ತಿದ್ದಾರೆ.
ನೋಟು ಪಡೆಯುವಾಗ ಎಚ್ಚರವಹಿಸಿ : ನಗರದಲ್ಲಿ ಈಗಾಗಲೇ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಹಲವು ಗ್ಯಾಂಗ್ ರಾಜ್ಯ ಪೊಲೀಸರ ಬಲೆಗೆ ಬಿದ್ದಿವೆ. ಆರೋಪಿಗಳು ಬಂಧನಕ್ಕೊಳಗಾಗುವ ಮೊದಲು ಹಲವು ಖೋಟಾ-ನೋಟು ಚಲಾವಣೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸಾರ್ವಜನಿಕರು ನೋಟುಗಳನ್ನು ತೆಗೆದುಕೊಳ್ಳುವಾಗ ಎಚ್ಚರಿಕೆ ವಹಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು